ಇಶಾ ಫೌಂಡೇಷನ್ ಸದ್ಗುರು 'ಸೇವ್ ಸಾಯಿಲ್' ಕಾರ್ಯಕ್ರಮಕ್ಕೆ ಚಾಲನೆ
ಬೆಂಗಳೂರು, ಜೂ. 19: ಭೂಮಿ ಮೇಲಿನ ಜೀವ ಸಂಕುಲದ ಉಳಿವಿಗೆ ಮಣ್ಣು ಅತ್ಯಗತ್ಯ. ಮಣ್ಣು ಹಾಗೂ ಮಣ್ಣಿನ ಸಂರಕ್ಷಣೆ ಮಹತ್ವದ ಕುರಿತು ಶಾಲಾ ಪಠ್ಯದಲ್ಲಿ ಮುಂಬರುವ ವರ್ಷಗಳಲ್ಲಿ ಪಾಠವನ್ನು ಸೇರ್ಪಡೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.
ಇಶಾ ಫೌಂಡೇಶನ್ವತಿಯಿಂದ ಭಾನುವಾರ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ 'ಮಣ್ಣು ಉಳಿಸಿ' (Save Soil) ಕಾರ್ಯಕ್ರಮದಲ್ಲಿ ಸಚಿವ ನಾಗೇಶ್ ಅವರು ಮಾತನಾಡಿದರು.
ಅತಿಯಾದ ಕೀಟನಾಶಕ, ರಾಸಯನಿಕಗಳ ಬಳಕೆಯಿಂದ ದಿನದಿಂದ ದಿನಕ್ಕೆ ಮಣ್ಣು ಹಾಳಾಗುತ್ತಿದೆ. ಹೀಗಾಗಿ, ಜೀವ ಸಂಕುಲದ ಉಳಿವಿಗೆ ಮಣ್ಣಿನ ಅಗತ್ಯತೆ ಕುರಿತು ದೇಶ-ವಿದೇಶಗಳಲ್ಲಿ ಜಾಗೃತಿ ಮೂಡಿಸುವ ಮಹತ್ವದ ಕಾರ್ಯವನ್ನು ಈಶ ಫೌಂಡೇಶನ್ನ ಸದ್ಗುರು ಜಗ್ಗಿ ವಾಸುದೇವ್ ಅವರು ಮಾಡುತ್ತಿದ್ದಾರೆ. ಇದು ನಮ್ಮೆಲ್ಲರಿಗೆ ಹೆಮ್ಮೆಯ ಸಂಗತಿ. ಮರೆತಿರುವ ಜವಾಬ್ದಾರಿಯನ್ನು ಇಡೀ ಜಗತ್ತಿಗೆ ಜ್ಞಾಪಿಸುವ ಪ್ರಯತ್ನವನ್ನು ಸದ್ಗುರು ಮಾಡುತ್ತಿದ್ದಾರೆ. ನೆಲ, ಜಲ ಸಂರಕ್ಷಣೆಯ ಭಾಗವಾಗಿ ಮಣ್ಣಿನ ಸಂರಕ್ಷಣೆಯು ಪ್ರತಿಯೊಬ್ಬರು ಜವಾಬ್ದಾರಿ ಎಂದು ಸಚಿವರು ತಿಳಿಸಿದ್ದಾರೆ.

ಇತರ ಎಲ್ಲ ದೇಶಗಳಿಗಿಂತ ನಮ್ಮ ಭಾರತ ವಿಭಿನ್ನ ಮತ್ತು ವಿಶೇಷವಾದ ರಾಷ್ಟ್ರವಾಗಿದೆ. ಪಂಚಭೂತಗಳು ದೇವರು ಎಂದು ನಂಬಿರುವ ದೇಶ ನಮ್ಮದು. ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದಾಗ ಸಾವಯವ ಕೃಷಿಗೆ ಉತ್ತೇಜನ ನೀಡಿದ್ದರು. ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಕೂಡ ಮಣ್ಣಿನ ಫಲವತ್ತತೆ ಉಳಿಸಿಕೊಳ್ಳುವುದು ಹಾಗೂ ಸಾವಯವ ಕೃಷಿಗೆ ಉತ್ತೇಜನ ನೀಡುತ್ತಿದೆ ಎಂದು ಸ್ಮರಿಸಿದರು.
ನೆಲ, ಜಲ, ಪರಿಸರ ಸಂರಕ್ಷಣೆ, ಮಣ್ಣಿನ ಮಹತ್ವವನ್ನು ಮಕ್ಕಳಿಗೆ ತಿಳಿಸುವ ಪ್ರಯತ್ನಗಳು ಆಗಬೇಕೆಂದು ಸದ್ಗುರು ಅಭಿಪ್ರಾಯಪಟ್ಟಿದ್ದರು. ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಮಣ್ಣಿಗೆ ಹೆಚ್ಚಿನ ಮಹತ್ವ ನೀಡಬೇಕಿದೆ. ಮುಂಬರುವ ವರ್ಷಗಳಲ್ಲಿ ಪಠ್ಯ ಪುಸ್ತಕದಲ್ಲಿ ಮಣ್ಣಿನ ಸಂರಕ್ಷಣೆ ಕುರಿತು ಪಾಠವನ್ನು ಸೇರಿಸುವ ಪ್ರಯತ್ನ ಮಾಡಲಾಗುವುದು ಇದೇ ವೇಳೆ ಬಿ.ಸಿ. ನಾಗೇಶ್ ಭರವಸೆ ನೀಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಆರೋಗ್ಯ ಸಚಿವರಾದ ಡಾ.ಕೆ. ಸುಧಾಕರ್ ಉಪಸ್ಥಿತರಿದ್ದರು.
-
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು?












Click it and Unblock the Notifications