ಇಶಾ ಫೌಂಡೇಷನ್ ಸದ್ಗುರು 'ಸೇವ್ ಸಾಯಿಲ್' ಕಾರ್ಯಕ್ರಮಕ್ಕೆ ಚಾಲನೆ
ಬೆಂಗಳೂರು, ಜೂ. 19: ಭೂಮಿ ಮೇಲಿನ ಜೀವ ಸಂಕುಲದ ಉಳಿವಿಗೆ ಮಣ್ಣು ಅತ್ಯಗತ್ಯ. ಮಣ್ಣು ಹಾಗೂ ಮಣ್ಣಿನ ಸಂರಕ್ಷಣೆ ಮಹತ್ವದ ಕುರಿತು ಶಾಲಾ ಪಠ್ಯದಲ್ಲಿ ಮುಂಬರುವ ವರ್ಷಗಳಲ್ಲಿ ಪಾಠವನ್ನು ಸೇರ್ಪಡೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.
ಇಶಾ ಫೌಂಡೇಶನ್ವತಿಯಿಂದ ಭಾನುವಾರ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ 'ಮಣ್ಣು ಉಳಿಸಿ' (Save Soil) ಕಾರ್ಯಕ್ರಮದಲ್ಲಿ ಸಚಿವ ನಾಗೇಶ್ ಅವರು ಮಾತನಾಡಿದರು.
ಅತಿಯಾದ ಕೀಟನಾಶಕ, ರಾಸಯನಿಕಗಳ ಬಳಕೆಯಿಂದ ದಿನದಿಂದ ದಿನಕ್ಕೆ ಮಣ್ಣು ಹಾಳಾಗುತ್ತಿದೆ. ಹೀಗಾಗಿ, ಜೀವ ಸಂಕುಲದ ಉಳಿವಿಗೆ ಮಣ್ಣಿನ ಅಗತ್ಯತೆ ಕುರಿತು ದೇಶ-ವಿದೇಶಗಳಲ್ಲಿ ಜಾಗೃತಿ ಮೂಡಿಸುವ ಮಹತ್ವದ ಕಾರ್ಯವನ್ನು ಈಶ ಫೌಂಡೇಶನ್ನ ಸದ್ಗುರು ಜಗ್ಗಿ ವಾಸುದೇವ್ ಅವರು ಮಾಡುತ್ತಿದ್ದಾರೆ. ಇದು ನಮ್ಮೆಲ್ಲರಿಗೆ ಹೆಮ್ಮೆಯ ಸಂಗತಿ. ಮರೆತಿರುವ ಜವಾಬ್ದಾರಿಯನ್ನು ಇಡೀ ಜಗತ್ತಿಗೆ ಜ್ಞಾಪಿಸುವ ಪ್ರಯತ್ನವನ್ನು ಸದ್ಗುರು ಮಾಡುತ್ತಿದ್ದಾರೆ. ನೆಲ, ಜಲ ಸಂರಕ್ಷಣೆಯ ಭಾಗವಾಗಿ ಮಣ್ಣಿನ ಸಂರಕ್ಷಣೆಯು ಪ್ರತಿಯೊಬ್ಬರು ಜವಾಬ್ದಾರಿ ಎಂದು ಸಚಿವರು ತಿಳಿಸಿದ್ದಾರೆ.

ಇತರ ಎಲ್ಲ ದೇಶಗಳಿಗಿಂತ ನಮ್ಮ ಭಾರತ ವಿಭಿನ್ನ ಮತ್ತು ವಿಶೇಷವಾದ ರಾಷ್ಟ್ರವಾಗಿದೆ. ಪಂಚಭೂತಗಳು ದೇವರು ಎಂದು ನಂಬಿರುವ ದೇಶ ನಮ್ಮದು. ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದಾಗ ಸಾವಯವ ಕೃಷಿಗೆ ಉತ್ತೇಜನ ನೀಡಿದ್ದರು. ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಕೂಡ ಮಣ್ಣಿನ ಫಲವತ್ತತೆ ಉಳಿಸಿಕೊಳ್ಳುವುದು ಹಾಗೂ ಸಾವಯವ ಕೃಷಿಗೆ ಉತ್ತೇಜನ ನೀಡುತ್ತಿದೆ ಎಂದು ಸ್ಮರಿಸಿದರು.
ನೆಲ, ಜಲ, ಪರಿಸರ ಸಂರಕ್ಷಣೆ, ಮಣ್ಣಿನ ಮಹತ್ವವನ್ನು ಮಕ್ಕಳಿಗೆ ತಿಳಿಸುವ ಪ್ರಯತ್ನಗಳು ಆಗಬೇಕೆಂದು ಸದ್ಗುರು ಅಭಿಪ್ರಾಯಪಟ್ಟಿದ್ದರು. ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಮಣ್ಣಿಗೆ ಹೆಚ್ಚಿನ ಮಹತ್ವ ನೀಡಬೇಕಿದೆ. ಮುಂಬರುವ ವರ್ಷಗಳಲ್ಲಿ ಪಠ್ಯ ಪುಸ್ತಕದಲ್ಲಿ ಮಣ್ಣಿನ ಸಂರಕ್ಷಣೆ ಕುರಿತು ಪಾಠವನ್ನು ಸೇರಿಸುವ ಪ್ರಯತ್ನ ಮಾಡಲಾಗುವುದು ಇದೇ ವೇಳೆ ಬಿ.ಸಿ. ನಾಗೇಶ್ ಭರವಸೆ ನೀಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಆರೋಗ್ಯ ಸಚಿವರಾದ ಡಾ.ಕೆ. ಸುಧಾಕರ್ ಉಪಸ್ಥಿತರಿದ್ದರು.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications