ಉಡುಪಿ ಸಮಾಜೋತ್ಸವ : ಸಾಧ್ವಿ ಬಾಲಿಕಾಗೆ ಆಹ್ವಾನ
ಉಡುಪಿ, ಮಾ.8 : ಉಡುಪಿ ಹಿಂದೂ ಸಮಾಜೋತ್ಸವಕ್ಕೆ ಸಿದ್ಧವಾಗುತ್ತಿದೆ. ವಿಶ್ವ ಹಿಂದೂ ಪರಿಷತ್ನ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಅವರು ಉಡುಪಿ ಪ್ರವೇಶಿಸದಂತೆ ಪೊಲೀಸರು ನಿರ್ಬಂಧ ಹೇರಿರುವ ಹಿನ್ನಲೆಯಲ್ಲಿ ಸಾಧ್ವಿ ಬಾಲಿಕಾ ಸರಸ್ವತಿ ಅವರು ಸಮಾಜೋತ್ಸವಕ್ಕೆ ಆಗಮಿಸುವ ಸಾಧ್ಯತೆ ಇದೆ.
ಉಡುಪಿಯ ಎಂಜಿಎಂ ಕಾಲೇಜು ಮೈದಾನದಲ್ಲಿ ಸೋಮವಾರ ಮಧ್ಯಾಹ್ನ ಹಿಂದೂ ಸಮಾಜೋತ್ಸವ ನಡೆಯಲಿದೆ. ಉಡುಪಿಯ ರಸ್ತೆಗಳು ಕೇಸರಿ ಮಯವಾಗಿದ್ದು, ಸ್ವಾಗತ ಕಾಮಾನುಗಳು, ಕೇಸರಿ ಧ್ವಜಗಳು ಜನರನ್ನು ಸ್ವಾಗತಿಸುತ್ತಿವೆ. [ಉಡುಪಿ ಪ್ರವೇಶಿಸದಂತೆ ಪ್ರವೀಣ್ ತೊಗಾಡಿಯಾಗೆ ನಿಷೇಧ]
ವಿಶ್ವ ಹಿಂದೂ ಪರಿಷತ್ನ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಅವರು ಉಡುಪಿಯ ಹಿಂದೂ ಸಮಾಜೋತ್ಸವ ಉದ್ದೇಶಿಸಿ ಮಾತನಾಡಬೇಕಾಗಿತ್ತು. ಆದರೆ, ಮಾ. 7ರಿಂದ 13ರ ತನಕ ತೊಗಾಡಿಯಾ ಅವರು ಉಡುಪಿ ಪ್ರವೇಶಿಸದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಅಣ್ಣಾಮಲೈ ನಿಷೇಧ ಹೇರಿದ್ದಾರೆ. [ಮಂಗಳೂರು ಹಿಂದೂ ಸಮಾಜೋತ್ಸವದ ಚಿತ್ರಗಳು]

ಆದ್ದರಿಂದ ಸಾಧ್ವಿ ಬಾಲಿಕಾ ಸರಸ್ವತಿ ಅವರನ್ನು ಸಮಾಜೋತ್ಸವಕ್ಕೆ ಬರುವಂತೆ ಹಿಂದೂ ಸಂಘಟನೆಗಳು ಆಹ್ವಾನಿಸಿವೆ. ಮಾರ್ಚ್ 1ರಂದು ಮಂಗಳೂರಿನಲ್ಲಿ ನಡೆದ ಸಮಾಜೋತ್ಸವಕ್ಕೆ ಸಾಧ್ವಿ ಅವರು ಆಗಮಿಸಿ ಭಾಷಣ ಮಾಡಿದ್ದರು. ಆದ್ದರಿಂದ ಸೋಮವಾರವೂ ಅವರು ಆಗಮಿಸುವ ಸಾಧ್ಯತೆ ಇದೆ.
ಭಾಷಣ ಪ್ರಸಾರ : ಬೆಂಗಳೂರಿನಲ್ಲಿ ಫೆ.9ರಂದು ನಡೆದ ಹಿಂದೂ ಸಮಾಜೋತ್ಸವದಲ್ಲಿ ಭಾಗವಹಿಸದಂತೆ ಪ್ರವೀಣ್ ತೊಗಾಡಿಯಾ ಅವರಿಗೆ ನಿಷೇಧ ಹೇರಲಾಗಿತ್ತು. ಆದರೆ, ಅಂದು ಅವರ ವಿಡಿಯೋ ಭಾಷಣವನ್ನು ಪ್ರಸಾರ ಮಾಡಲಾಗಿತ್ತು. ಉಡುಪಿಯಲ್ಲಿಯೂ ಇದೇ ರೀತಿ ಮಾಡಲಾಗುತ್ತದೆಯೇ ಎಂಬ ಪ್ರಶ್ನೆ ಎದ್ದಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications