1,000 ಮಕ್ಕಳಿಂದ 1 ಕೋಟಿ ಮಕ್ಕಳ ವರೆಗೆ ಸಾಯಿ ಶ್ಯೂರ್ ಯಶೋಗಾಥೆ
ದೇಶದ ಮಕ್ಕಳಲ್ಲಿ ಹೆಚ್ಚುತ್ತಿರುವ ಅಪೌಷ್ಟಿಕತೆ ಕಡಿಮೆ ಮಾಡಲು ಸಾಯಿ ಶ್ಯೂರ್ ಯೋಜನೆ ಮಹತ್ವದ ಪಾತ್ರವಹಿಸುತ್ತಿದೆ. 2018ರಲ್ಲಿ ಕೇವಲ 1,000 ಮಕ್ಕಳೊಂದಿಗೆ ಆರಂಭವಾದ ಈ ಯೋಜನೆ ಈಗ ಸುಮಾರು ಒಂದು ಕೋಟಿ ಮಕ್ಕಳಿಗೆ ಈ ಪೌಷ್ಟಿಕ ಮಾಲ್ಟ್ ತಲುಪುವಂತೆ ಮಾಡಿದೆ.
ಈ ಯೋಜನೆಯನ್ನು ಸರ್ಕಾರದ ಕ್ಷೀರಭಾಗ್ಯ ಯೋಜನೆಯ ಜೂತೆಗೆ ಕೆಲವು ಶಾಲೆಗಳಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾಯಿತು. ಹಾಲಿನೊಂದಿಗೆ ನೀಡಲಾದ ಸಾಯಿ ಶ್ಯೂರ್ ಮಾಲ್ಟ್ ಮಕ್ಕಳಿಗೆ ಇಷ್ಟವಾಗಿದ್ದು ಬಳಿಕ ಯೋಜನೆಯನ್ನು ವಿಸ್ತರಿಸಲಾಯಿತು.

ಈ ಯೋಜನೆಯ ಯಶಸ್ಸು
ಸರ್ಕಾರದ 'ಕ್ಷೀರಭಾಗ್ಯ' ಯೋಜನೆಗೆ ಪೂರಕವಾಗಿ 2018ರಲ್ಲಿ ಹತ್ತು ಶಾಲೆಗಳಲ್ಲಿ ಈ ಯೋಜನೆಯನ್ನು ಪ್ರಾಯೋಗಿಕವಾಗಿ ಹಮ್ಮಿಕೊಳ್ಳಲಾಗಿತ್ತು. ಕ್ಷೀರಭಾಗ್ಯ ಹಾಲಿನ ಜೊತೆಗೆ ಸಾಯಿ ಶ್ಯೂರ್ ಮಾಲ್ಟ್ ಅನ್ನು ನೀಡಲು ಆರಂಭಿಸಿದಾಗ ಮಕ್ಕಳು ಅದನ್ನು ಅತ್ಯಂತ ಇಷ್ಟಪಟ್ಟು ಕುಡಿಯಲು ಆರಂಭಿಸಿದರು. ಇಂದು ಈ ಪೌಷ್ಟಿಕ ಪಾನೀಯ ಒಂದು ಕೋಟಿ ಮಕ್ಕಳ ಆರೋಗ್ಯದ ಕವಚವಾಗಿದೆ.
ಈ ಯೋಜನೆಯ ವಿಶೇಷತೆಯೆಂದರೆ ಇದು ರೈತನನ್ನು ನೇರವಾಗಿ ಮಗುವಿನ ಪೌಷ್ಟಿಕತೆ ಆರೋಗ್ಯಕ್ಕೆ ಕೈ ಜೋಡಿಸಿದಂತಾಗಿದೆ. ಸಾಯಿ ಶ್ಯೂರ್ ಮಾಲ್ಟ್ ಯೋಜನೆಯ ವಿಶೇಷತೆ ಎಂದರೆ ರೈತರು ಸಹ ಈ ಯೋಜನೆಯ ಭಾಗವಾಗಿದ್ದಾರೆ. ತಿಪಟೂರು ಭಾಗದ ಸಾವಿರಾರು ರೈತರಿಂದ ನೇರವಾಗಿ ರಾಗಿ ಖರೀದಿ ಮಾಡಲಾಗುತ್ತಿದೆ. ಸರ್ಕಾರದ ಬೆಂಬಲ ಬೆಲೆಗೆ ಹೆಚ್ಚುವರಿ ಹಣ ನೀಡಿ ರಾಗಿ ಖರೀದಿಸುವ ಮೂಲಕ ರೈತರಿಗೆ ಸಹಾಯ ಮಾಡಲಾಗುತ್ತಿದೆ.
ರಾಗಿ ಖರೀದಿ: ತಿಪಟೂರು ತಾಲ್ಲೂಕಿನ ಸುಮಾರು 3,000 ರೈತರಿಂದ ನೇರವಾಗಿ ರಾಗಿಯನ್ನು ಖರೀದಿ ಮಾಡಲಾಗುತ್ತಿದೆ.
ಉತ್ತಮ ಬೆಲೆ: ಸರ್ಕಾರ ನಿಗದಿಪಡಿಸಿದ ಬೆಂಬಲ ಬೆಲೆಗಿಂತಲೂ ಒಂದು ರೂಪಾಯಿ ಅಧಿಕ ನೀಡಿ ರೈತರಿಂದ ರಾಗಿ ಪಡೆಯಲಾಗುತ್ತಿದೆ.
ನೇರವಾಗಿ ರೈತರಿಗೆ: ಕಳೆದ ವರ್ಷ ಸುಮಾರು 20 ಕೋಟಿ ರೂಪಾಯಿಗಳನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ.
ಈ ಪೌಷ್ಟಿಕ ಮಾಲ್ಟ್ನಲ್ಲಿ ಮಕ್ಕಳಿಗೆ ಅಗತ್ಯವಾದ ವಿಟಮಿನ್ ಸಿ, ಐರನ್, ವಿಟಮಿನ್ ಡಿ ಮತ್ತು ಬಿ12 ನಂತಹ ಖನಿಜಾಂಶಗಳನ್ನು ಸೇರಿಸಲಾಗಿದ್ದು ಅಪೌಷ್ಟಿಕತೆಯನ್ನು ಕಡಿಮೆ ಮಾಡಲು ನೆರವಾಗುತ್ತಿದೆ. ಕಡಿಮೆ ವೆಚ್ಚದಲ್ಲಿ ಮಕ್ಕಳಿಗೆ ಉತ್ತಮ ಪೌಷ್ಟಿಕ ಆಹಾರ ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ.
ಪ್ರಸ್ತುತ ಒಂದು ಕೋಟಿ ಮಕ್ಕಳಿಗೆ ತಲುಪಿರುವ ಈ ಯೋಜನೆಯನ್ನು ಮುಂದಿನ ದಿನಗಳಲ್ಲಿ ಎಂಟು ಕೋಟಿ ಮಕ್ಕಳಿಗೆ ವಿಸ್ತರಿಸುವ ಗುರಿ ಹೊಂದಲಾಗಿದೆ. ಸಾಯಿ ಶ್ಯೂರ್ ಯೋಜನೆ ಮಕ್ಕಳ ಆರೋಗ್ಯ ಸುಧಾರಣೆಯ ಜೊತೆಗೆ ರೈತರಿಗೂ ನೆರವಾಗುತ್ತಿರುವುದು ವಿಶೇಷವಾಗಿದೆ.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ












Click it and Unblock the Notifications