ಸೋಮವಾರದಿಂದ ಕರ್ನಾಟಕದಲ್ಲಿ ಸಕಾಲ ಸಪ್ತಾಹ
ಬೆಂಗಳೂರು, ನವೆಂಬರ್ 29: ಸಕಾಲ ಯೋಜನೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕರ್ನಾಟಕ ಸರ್ಕಾರ ಸಕಾಲ ಸಪ್ತಾಹವನ್ನು ಆಯೋಜನೆ ಮಾಡಿದೆ. ನವೆಂಬರ್ 30ರಿಂದ ಡಿಸೆಂಬರ್ 19ರ ತನಕ ಸಪ್ತಾಹ ರಾಜ್ಯಾದ್ಯಂತ ನಡೆಯಲಿದೆ.
ಜನರಿಗೆ ನಿಗದಿತ ಕಾಲ ಮಿತಿಯಲ್ಲಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಸಕಾಲ ಯೋಜನೆಯನ್ನು ಜಾರಿಗೆ ತರಲಾಗಿದೆ. ವಿವಿಧ ಇಲಾಖೆಗಳಲ್ಲಿ ಬಾಕಿ ಉಳಿದಿರುವ ಸಕಾಲ ಅರ್ಜಿಗಳು ಹಾಗೂ ಮೇಲ್ಮನವಿಗಳನ್ನು ತ್ವರಿತ ವಿಲೇವಾರಿಗಾಗಿ ಸಪ್ತಾಹ ಕೈಗೊಳ್ಳಲಾಗಿದೆ.
"ನವೆಂಬರ್ 30ರಿಂದ ಡಿಸೆಂಬರ್ 19ವರೆಗೆ ಸಕಾಲ ಸಪ್ತಾಹ ಹಮ್ಮಿಕೊಳ್ಳಲಾಗಿದೆ. ಹೊಸ ಅರ್ಜಿಗಳ ಸ್ವೀಕಾರದ ಜೊತೆ ಬಾಕಿ ಉಳಿದಿರುವ ಅರ್ಜಿಗಳನ್ನು ಸಹ ವಿಲೇವಾರಿ ಮಾಡಲಾಗುತ್ತದೆ" ಎಂದು ರಾಜ್ಯ ಸಕಾಲ ಮಿಷನ್ ನಿರ್ದೇಶಕಿ ಡಾ. ಬಿ. ಆರ್. ಮಮತಾ ಹೇಳಿದ್ದಾರೆ.

"ರಾಜ್ಯದ 98 ಇಲಾಖೆಗಳಲ್ಲಿನ 1025 ಸೇವೆಗಳನ್ನು ಸಕಾಲ ವ್ಯಾಪ್ತಿಗೆ ತರಲಾಗಿದೆ. ಸಾರ್ವಜನಿಕರಿಗೆ ಸಕಾಲ ಬಗೆಗೆ ಹೆಚ್ಚಿನ ಮಾಹಿತಿ ನೀಡಿ ಜಾಗೃತಿ ಮೂಡಿಸುವ ಉದ್ದೇಶವನ್ನು ಸಪ್ತಾಹದಲ್ಲಿ ಹೊಂದಲಾಗಿದೆ" ಎಂದು ಬಿ. ಆರ್. ಮಮತಾ ತಿಳಿಸಿದರು.
ಯಾವ-ಯಾವ ಇಲಾಖೆ; ನವೆಂಬರ್ 30ರಿಂದ ಡಿಸೆಂಬರ್ 5ರ ತನಕ ಕಂದಾಯ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಸಾರಿಗೆ ಇಲಾಖೆ ಒಳಗೊಂಡಂತೆ 4 ಇಲಾಖೆಗಳಿಗೆ ಸಂಬಂಧಿಸಿದ ಪ್ರಕರಣಗಳ ವಿಲೇವಾರಿ ನಡೆಯಲಿದೆ.
ಡಿಸೆಂಬರ್ 7 ರಿಂದ 11ರವರೆಗೆ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಪ್ರಕರಣಗಳ ವಿಲೇವಾರಿ ಹಾಗೂ ಡಿಸೆಂಬರ್ 14 ರಿಂದ 19ರವರೆಗೆ ಸಕಾಲ ವ್ಯಾಪ್ತಿಗೆ ಒಳಪಡುವ ಉಳಿದ ಎಲ್ಲ ಸರ್ಕಾರಿ ಇಲಾಖೆಗಳ ಪ್ರಕರಣಗಳ ಅರ್ಜಿ ವಿಲೇವಾರಿ ನಡೆಯಲಿದೆ.
ಸಪ್ತಾಹದಲ್ಲಿ ಹೊಸ ಅರ್ಜಿಗಳನ್ನು ಸಹ ಸ್ವೀಕಾರ ಮಾಡಲಾಗುತ್ತದೆ. ಅವಧಿ ಮೀರಿ ಬಾಕಿ ಉಳಿಸಿಕೊಂಡ ಅರ್ಜಿಗಳ ವಿಲೇವಾರಿ ಮಾಡುವುದು ಸಹ ಸೇರಿದೆ. ಮೇಲ್ಮನವಿಗಳನ್ನು ಇತ್ಯರ್ಥಪಡಿಸಬೇಕು, ಅರ್ಜಿಗಳ ವಿಲೇವಾರಿ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು, ಸಾರ್ವಜನಿಕರಿಂದ ಬರುವ ಅರ್ಜಿಗಳನ್ನು ಸಕಾಲದಡಿಯಲ್ಲಿಯೇ ನೋಂದಾಯಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ.
ಹೊಸದಾಗಿ ಸ್ವೀಕರಿಸಿದ ಅರ್ಜಿಗಳನ್ನು ಈ ಸಪ್ತಾಹದಲ್ಲಿ ವಿಲೇವಾರಿ ಮಾಡಬೇಕು. ಪ್ರತಿ ಕಚೇರಿಯಲ್ಲಿ ಸಪ್ತಾಹದ ಬ್ಯಾನರ್ ಅಳವಡಿಸಬೇಕು. ಕಚೇರಿಯ ಪ್ರವೇಶ ದ್ವಾರದಲ್ಲಿ ಹೆಲ್ಪ್ ಡೆಸ್ಕ್ ಸ್ಥಾಪಿಸಿ, ಜನರಿಗೆ ಸಕಾಲ ಯೋಜನೆ ಕುರಿತು ಮಾಹಿತಿ ನೀಡಬೇಕು ಎಂದು ನಿರ್ದೇಶನ ನೀಡಲಾಗಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications