ಸಕಾಲ ಯೋಜನೆ; ಸರ್ಕಾರದಿಂದ ಮಹತ್ವದ ಆದೇಶ
ಬೆಂಗಳೂರು, ಜನವರಿ 21: ಕರ್ನಾಟಕ ಸರ್ಕಾರ ಸಕಾಲ ಯೋಜನೆಯಡಿ ವಿವಿಧ ಇಲಾಖೆಗಳಲ್ಲಿ ಸ್ವೀಕರಿಸುವ ಅರ್ಜಿಗಳನ್ನು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ ಮಾಡುತ್ತಿದೆ. ಅರ್ಜಿಗಳ ವಿಲೇವಾರಿ ಕುರಿತು ಸರ್ಕಾರ ಮಹತ್ವದ ಆದೇಶವನ್ನು ಹೊರಡಿಸಿದೆ.
ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಕವಿತ ಎಸ್. ಗೌಡ, ಆಡಳಿತಾಧಿಕಾರಿ, ಸಕಾಲ ಮಿಷನ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಇ-ಆಡಳಿತ) ಆದೇಶ ಹೊರಡಿಸಿದ್ದಾರೆ.

ಈ ಆದೇಶ ಸಕಾಲ ಕಾಯಿದೆಯಡಿ ನೀಡುವ ಸೇವೆಗಳಿಗೆ ವಿತರಿಸುವ ಪ್ರಮಾಣ ಪತ್ರಗಳಲ್ಲಿ GSC ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸುವುದು ಹಾಗೂ GSC ಸಂಖ್ಯೆಯಿಲ್ಲದ ಪ್ರಮಾಣ ಪತ್ರಗಳನ್ನು ಅಸಿಂಧು/ ಅಮಾನ್ಯವೆಂದು ಪರಿಗಣಿಸುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ.
ಸರ್ಕಾರದ ಆದೇಶದಲ್ಲಿ ಕರ್ನಾಟಕ ನಾಗರೀಕರಿಗೆ ಸೇವೆಗಳ ಖಾತರಿ ಅಧಿನಿಯಮ, 2011 ಅನ್ನು ಪರಿಣಾಮಕಾರಿಯಾಗಿ ಅನುಷ್ಕಾನಗೊಳಿಸಲು ಸಕಾಲ ಮಿಷನ್ ಅನ್ನು ರಚಿಸಲು ಸರ್ಕಾರದ ಮಂಜೂರಾತಿ ನೀಡಲಾಗಿದೆ.
ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮ, 2011 ಮತ್ತು (ತಿದ್ದುಪಡಿ) ಅಧಿನಿಯಮ 2014 ರಡಿಯಲ್ಲಿನ ಎಲ್ಲಾ ಸಕಾಲ ಅಧಿಸೂಚಿತ ಸೇವೆಗಳನ್ನು ನಾಗರೀಕರಿಗೆ ಕಾಲಮಿತಿಯಲ್ಲಿ ನೀಡುವುದು ಕಡ್ಡಾಯವಾಗಿರುತ್ತದೆ ಹಾಗೂ ಸದರಿ ಅಧಿನಿಯಮದ ಕಲಂ 6(1) ರನ್ವಯ ಎಲ್ಲಾ ಸಕಾಲ ಅಧಿಸೂಚಿತ ಸೇವೆಗಳಿಗೆ 15 ಅಂಕಿಯ ಸಕಾಲ ಸ್ವೀಕೃತಿ ಸಂಖ್ಯೆಯನ್ನು ಸ್ವೀಕೃತಿಯಾಗಿ (ಜಿ.ಎಸ್.ಸಿ. ಸಂಖ್ಯೆ) ನಮೂದಿಸುವುದನ್ನು ಕಡ್ಡಾಯಗೊಳಿಸಿದೆ.
ಸರ್ಕಾರದ ಆದೇಶದಲ್ಲಿ ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮ 2011, ಹಾಗೂ (ತಿದ್ದುಪಡಿ) ಅಧಿನಿಯಮ 2014ರಡಿ ಸೇರ್ಪಡೆಯಾಗಿರುವ ಎಲ್ಲಾ ಇಲಾಖೆ/ ಸಂಸ್ಥೆಗಳ ಸೇವೆಗಳ ಅರ್ಜಿಗಳಿಗೆ ಸಂಬಂಧಪಟ್ಟಂತೆ ವಿತರಿಸುವ ಪ್ರಮಾಣ ಪತ್ರ/ ಪರವಾನಗಿ/ ಮಂಜೂರಾತಿ ಪತ್ರಗಳಿಗೆ ಕಡ್ಡಾಯವಾಗಿ GSC ಸಂಖ್ಯೆಯನ್ನು ಪ್ರದರ್ಶಿಸತಕ್ಕದ್ದು ಹಾಗೂ GSC ಸಂಖ್ಯೆಯನ್ನು ನೀಡದೆ ವಿತರಿಸಲಾದ ಪ್ರಮಾಣ ಪತ್ರಗಳಿಗೆ ಯಾವುದೇ ಮಾನ್ಯತೆ ಇರುವುದಿಲ್ಲ ಹಾಗೂ ಈ ಕುರಿತು ಸಂಬಂಧಪಟ್ಟ ಅಧಿಕಾರಿಯ ಮೇಲೆ ಶಿಸ್ತು ಕ್ರಮವನ್ನು ಕೈಗೊಳ್ಳಲಾಗುವುದೆಂದು ಸ್ಪಷ್ಟವಾಗಿ ತಿಳಿಸಲಾಗಿದೆ.
ಆದರೆ ಆಚರಣೆಯಲ್ಲಿ ಸಕಾಲ ಅಧಿಸೂಚಿತ ಸೇವೆಗಳಿಗೆ ಕೆಲವು ಪ್ರಕರಣಗಳಲ್ಲಿ ಸಕಾಲ ಕಾಯ್ದೆಯನ್ನು ಬೈಪಾಸ್ ಮಾಡಿ ಅರ್ಜಿಗಳನ್ನು ಸ್ವೀಕರಿಸುತ್ತಿರುವುದನ್ನು ಗಮನಿಸಲಾಗಿದೆ. ಇದನ್ನು ತಪ್ಪಿಸಲು GSC ಸಂಖ್ಯೆ ಇಲ್ಲದೆ ನೀಡಲಾದ ಸೇವಾ ಅರ್ಜಿಗಳ ಪ್ರಮಾಣ ಪತ್ರಗಳು/ ಅನುಮೋದನೆಗಳು ಮತ್ತು ಹಿಂಬರಹಗಳನ್ನು ಅಮಾನ್ಯವೆಂದು ಪರಿಗಣಿಸಬೇಕಾಗಿದೆ.
ಇದರಿಂದ ಆಯಾ ಇಲಾಖೆಗಳು ಸಕಾಲ ಅಧಿಸೂಚಿತ ಸೇವೆಗಳನ್ನು ಕಾಯ್ದೆಯಂತೆ ನಿಗದಿ ಪಡಿಸಲಾದ ಸೇವಾ ಪ್ರಕ್ರಿಯೆಯನ್ನು ಹೊರತುಪಡಿಸಿ ಸೇವೆಗಳನ್ನು ವಿತರಣೆ ಮಾಡುವುದು ಅಸಾಧ್ಯವಾಗುತ್ತದೆ. ಇದರಿಂದ ನಕಲಿ ಸೇವಾ ಪ್ರಮಾಣ ಪತ್ರಗಳನ್ನು ನೀಡುವುದನ್ನೂ ಸಹ ತಪ್ಪಿಸಬಹುದಾಗಿದೆ ಮತ್ತು ಇದು ನಾಗರೀಕರಲ್ಲಿ ಸಕಾಲ (ಜಿಎಸ್ಸಿ) ಸಂಖ್ಯೆಯ ಮಹತ್ವದ ಬಗ್ಗೆ ಅರಿವು ಮೂಡಿಸುತ್ತದೆ.
ಹೊಸ ಆದೇಶವೇನು?; ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮ 2011 ಹಾಗೂ (ತಿದ್ದುಪಡಿ) ಅಧಿನಿಯಮ 2014ರಡಿಯಲ್ಲಿನ ಎಲ್ಲಾ ಸಕಾಲ ಅಧಿಸೂಚಿತ ಸೇವೆಗಳಿಗೆ ಸಂಬಂಧಿಸಿದ ಸೇವಾ ಪ್ರಮಾಣ ಪತ್ರಗಳು/ ಅನುಮೋದನೆಗಳು/ ಹಿಂಬರಹಗಳ ಮೇಲೆ ಸಕಾಲ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸುವುದು.
GSC ಸಂಖ್ಯೆ ಇಲ್ಲದ ಸೇವಾ ಪ್ರಮಾಣ ಪತ್ರಗಳು/ ಅನುಮೋದನೆಗಳು/ ಹಿಂಬರಹಗಳು ಇವುಗಳನ್ನು ದಿನಾಂಕ 01/02/2024ರ ನಂತರ ಅಸಿಂಧು/ ಅಮಾನ್ಯ ಎಂದು ಪರಿಗಣಿತಕ್ಕದ್ದು.
ಈ ಆದೇಶವನ್ನು ಆರ್ಥಿಕ ಇಲಾಖೆಯು ಆದೇಶ ದಿನಾಂಕ 31/07/2023ರಲ್ಲಿ ಸರ್ಕಾರದ ಅವರ ಮುಖ್ಯ ಕಾರ್ಯದರ್ಶಿಗಳು/ ಪ್ರಧಾನ ಕಾರ್ಯದರ್ಶಿಗಳು/ ಕಾರ್ಯದರ್ಶಿಗಳಿಗೆ ಪ್ರತ್ಯಾಯೋಜಿಸಿರುವ ಆರ್ಥಿಕ ಅಧಿಕಾರಗಳನ್ವಯ ಹೊರಡಿಸಿದೆ ಎಂದು ಹೇಳಿದೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
LPG: ಬೆಂಗಳೂರಿಗೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಪೂರೈಕೆ ತಕ್ಷಣವೇ ಆರಂಭಿಸಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Bengaluru : ಬಾಲ ಭವನ ಬೇಸಿಗೆ ಶಿಬಿರ 2026 ; ಕೇವಲ 1000 ರೂ.ಗೆ 10 ಬಗೆಯ ಕೌಶಲ್ಯ ತರಬೇತಿ, ಇಂದೇ ಅರ್ಜಿ ಸಲ್ಲಿಸಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ












Click it and Unblock the Notifications