ಸಕಾಲ ಯೋಜನೆ; ಸರ್ಕಾರದಿಂದ ಮಹತ್ವದ ಆದೇಶ
ಬೆಂಗಳೂರು, ಜನವರಿ 21: ಕರ್ನಾಟಕ ಸರ್ಕಾರ ಸಕಾಲ ಯೋಜನೆಯಡಿ ವಿವಿಧ ಇಲಾಖೆಗಳಲ್ಲಿ ಸ್ವೀಕರಿಸುವ ಅರ್ಜಿಗಳನ್ನು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ ಮಾಡುತ್ತಿದೆ. ಅರ್ಜಿಗಳ ವಿಲೇವಾರಿ ಕುರಿತು ಸರ್ಕಾರ ಮಹತ್ವದ ಆದೇಶವನ್ನು ಹೊರಡಿಸಿದೆ.
ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಕವಿತ ಎಸ್. ಗೌಡ, ಆಡಳಿತಾಧಿಕಾರಿ, ಸಕಾಲ ಮಿಷನ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಇ-ಆಡಳಿತ) ಆದೇಶ ಹೊರಡಿಸಿದ್ದಾರೆ.

ಈ ಆದೇಶ ಸಕಾಲ ಕಾಯಿದೆಯಡಿ ನೀಡುವ ಸೇವೆಗಳಿಗೆ ವಿತರಿಸುವ ಪ್ರಮಾಣ ಪತ್ರಗಳಲ್ಲಿ GSC ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸುವುದು ಹಾಗೂ GSC ಸಂಖ್ಯೆಯಿಲ್ಲದ ಪ್ರಮಾಣ ಪತ್ರಗಳನ್ನು ಅಸಿಂಧು/ ಅಮಾನ್ಯವೆಂದು ಪರಿಗಣಿಸುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ.
ಸರ್ಕಾರದ ಆದೇಶದಲ್ಲಿ ಕರ್ನಾಟಕ ನಾಗರೀಕರಿಗೆ ಸೇವೆಗಳ ಖಾತರಿ ಅಧಿನಿಯಮ, 2011 ಅನ್ನು ಪರಿಣಾಮಕಾರಿಯಾಗಿ ಅನುಷ್ಕಾನಗೊಳಿಸಲು ಸಕಾಲ ಮಿಷನ್ ಅನ್ನು ರಚಿಸಲು ಸರ್ಕಾರದ ಮಂಜೂರಾತಿ ನೀಡಲಾಗಿದೆ.
ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮ, 2011 ಮತ್ತು (ತಿದ್ದುಪಡಿ) ಅಧಿನಿಯಮ 2014 ರಡಿಯಲ್ಲಿನ ಎಲ್ಲಾ ಸಕಾಲ ಅಧಿಸೂಚಿತ ಸೇವೆಗಳನ್ನು ನಾಗರೀಕರಿಗೆ ಕಾಲಮಿತಿಯಲ್ಲಿ ನೀಡುವುದು ಕಡ್ಡಾಯವಾಗಿರುತ್ತದೆ ಹಾಗೂ ಸದರಿ ಅಧಿನಿಯಮದ ಕಲಂ 6(1) ರನ್ವಯ ಎಲ್ಲಾ ಸಕಾಲ ಅಧಿಸೂಚಿತ ಸೇವೆಗಳಿಗೆ 15 ಅಂಕಿಯ ಸಕಾಲ ಸ್ವೀಕೃತಿ ಸಂಖ್ಯೆಯನ್ನು ಸ್ವೀಕೃತಿಯಾಗಿ (ಜಿ.ಎಸ್.ಸಿ. ಸಂಖ್ಯೆ) ನಮೂದಿಸುವುದನ್ನು ಕಡ್ಡಾಯಗೊಳಿಸಿದೆ.
ಸರ್ಕಾರದ ಆದೇಶದಲ್ಲಿ ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮ 2011, ಹಾಗೂ (ತಿದ್ದುಪಡಿ) ಅಧಿನಿಯಮ 2014ರಡಿ ಸೇರ್ಪಡೆಯಾಗಿರುವ ಎಲ್ಲಾ ಇಲಾಖೆ/ ಸಂಸ್ಥೆಗಳ ಸೇವೆಗಳ ಅರ್ಜಿಗಳಿಗೆ ಸಂಬಂಧಪಟ್ಟಂತೆ ವಿತರಿಸುವ ಪ್ರಮಾಣ ಪತ್ರ/ ಪರವಾನಗಿ/ ಮಂಜೂರಾತಿ ಪತ್ರಗಳಿಗೆ ಕಡ್ಡಾಯವಾಗಿ GSC ಸಂಖ್ಯೆಯನ್ನು ಪ್ರದರ್ಶಿಸತಕ್ಕದ್ದು ಹಾಗೂ GSC ಸಂಖ್ಯೆಯನ್ನು ನೀಡದೆ ವಿತರಿಸಲಾದ ಪ್ರಮಾಣ ಪತ್ರಗಳಿಗೆ ಯಾವುದೇ ಮಾನ್ಯತೆ ಇರುವುದಿಲ್ಲ ಹಾಗೂ ಈ ಕುರಿತು ಸಂಬಂಧಪಟ್ಟ ಅಧಿಕಾರಿಯ ಮೇಲೆ ಶಿಸ್ತು ಕ್ರಮವನ್ನು ಕೈಗೊಳ್ಳಲಾಗುವುದೆಂದು ಸ್ಪಷ್ಟವಾಗಿ ತಿಳಿಸಲಾಗಿದೆ.
ಆದರೆ ಆಚರಣೆಯಲ್ಲಿ ಸಕಾಲ ಅಧಿಸೂಚಿತ ಸೇವೆಗಳಿಗೆ ಕೆಲವು ಪ್ರಕರಣಗಳಲ್ಲಿ ಸಕಾಲ ಕಾಯ್ದೆಯನ್ನು ಬೈಪಾಸ್ ಮಾಡಿ ಅರ್ಜಿಗಳನ್ನು ಸ್ವೀಕರಿಸುತ್ತಿರುವುದನ್ನು ಗಮನಿಸಲಾಗಿದೆ. ಇದನ್ನು ತಪ್ಪಿಸಲು GSC ಸಂಖ್ಯೆ ಇಲ್ಲದೆ ನೀಡಲಾದ ಸೇವಾ ಅರ್ಜಿಗಳ ಪ್ರಮಾಣ ಪತ್ರಗಳು/ ಅನುಮೋದನೆಗಳು ಮತ್ತು ಹಿಂಬರಹಗಳನ್ನು ಅಮಾನ್ಯವೆಂದು ಪರಿಗಣಿಸಬೇಕಾಗಿದೆ.
ಇದರಿಂದ ಆಯಾ ಇಲಾಖೆಗಳು ಸಕಾಲ ಅಧಿಸೂಚಿತ ಸೇವೆಗಳನ್ನು ಕಾಯ್ದೆಯಂತೆ ನಿಗದಿ ಪಡಿಸಲಾದ ಸೇವಾ ಪ್ರಕ್ರಿಯೆಯನ್ನು ಹೊರತುಪಡಿಸಿ ಸೇವೆಗಳನ್ನು ವಿತರಣೆ ಮಾಡುವುದು ಅಸಾಧ್ಯವಾಗುತ್ತದೆ. ಇದರಿಂದ ನಕಲಿ ಸೇವಾ ಪ್ರಮಾಣ ಪತ್ರಗಳನ್ನು ನೀಡುವುದನ್ನೂ ಸಹ ತಪ್ಪಿಸಬಹುದಾಗಿದೆ ಮತ್ತು ಇದು ನಾಗರೀಕರಲ್ಲಿ ಸಕಾಲ (ಜಿಎಸ್ಸಿ) ಸಂಖ್ಯೆಯ ಮಹತ್ವದ ಬಗ್ಗೆ ಅರಿವು ಮೂಡಿಸುತ್ತದೆ.
ಹೊಸ ಆದೇಶವೇನು?; ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮ 2011 ಹಾಗೂ (ತಿದ್ದುಪಡಿ) ಅಧಿನಿಯಮ 2014ರಡಿಯಲ್ಲಿನ ಎಲ್ಲಾ ಸಕಾಲ ಅಧಿಸೂಚಿತ ಸೇವೆಗಳಿಗೆ ಸಂಬಂಧಿಸಿದ ಸೇವಾ ಪ್ರಮಾಣ ಪತ್ರಗಳು/ ಅನುಮೋದನೆಗಳು/ ಹಿಂಬರಹಗಳ ಮೇಲೆ ಸಕಾಲ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸುವುದು.
GSC ಸಂಖ್ಯೆ ಇಲ್ಲದ ಸೇವಾ ಪ್ರಮಾಣ ಪತ್ರಗಳು/ ಅನುಮೋದನೆಗಳು/ ಹಿಂಬರಹಗಳು ಇವುಗಳನ್ನು ದಿನಾಂಕ 01/02/2024ರ ನಂತರ ಅಸಿಂಧು/ ಅಮಾನ್ಯ ಎಂದು ಪರಿಗಣಿತಕ್ಕದ್ದು.
ಈ ಆದೇಶವನ್ನು ಆರ್ಥಿಕ ಇಲಾಖೆಯು ಆದೇಶ ದಿನಾಂಕ 31/07/2023ರಲ್ಲಿ ಸರ್ಕಾರದ ಅವರ ಮುಖ್ಯ ಕಾರ್ಯದರ್ಶಿಗಳು/ ಪ್ರಧಾನ ಕಾರ್ಯದರ್ಶಿಗಳು/ ಕಾರ್ಯದರ್ಶಿಗಳಿಗೆ ಪ್ರತ್ಯಾಯೋಜಿಸಿರುವ ಆರ್ಥಿಕ ಅಧಿಕಾರಗಳನ್ವಯ ಹೊರಡಿಸಿದೆ ಎಂದು ಹೇಳಿದೆ.
-
BMTC: ಉಚಿತ ಬಸ್ ಪ್ರಯಾಣದ ಹೊರೆ, ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ; ಸರ್ಕಾರದಿಂದ ₹850 ಕೋಟಿ ಪಾವತಿ ವಿಳಂಬ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications