Good News: ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆ ರೈಲು ಮಾರ್ಗದ ವಿದ್ಯುದೀಕರಣ ಪೂರ್ಣ, ಬಿಗ್ ಅಪ್ಡೇಟ್ಸ್
ಬೆಂಗಳೂರು: ಕರ್ನಾಟಕದಲ್ಲಿ ರೈಲ್ವೆ ವಿದ್ಯುದೀಕರಣ ಪೂರ್ಣಗೊಳಿಸುವ ಪ್ರಕ್ರಿಯೆಗೆ ಪೂರಕವಾಗಿ ಮತ್ತೊಂದು ಯಶಸ್ವಿ ಕಾರ್ಯ ಪೂರ್ಣಗೊಂಡಿದೆ. ರಾಜ್ಯದಲ್ಲಿ ಅತೀ ಸವಾಲಿನ ರೈಲು ಮಾರ್ಗವಾಗಿರುವ ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆ ಘಾಟ್ ವಿಭಾಗದಲ್ಲಿ ವಿದ್ಯುದೀಕರಣ ಕೆಲಸ ಪೂರ್ಣಗೊಂಡಿದೆ. ಈ ಬಗ್ಗೆ ನೈಋತ್ಯ ರೈಲ್ವೆ ವಿಭಾಗವು (South Western Railway) ಅಧಿಕೃತ ಮಾಹಿತಿ ಹಂಚಿಕೊಂಡಿದೆ. ಇಂದಿನ ಈ ಸಾಧನೆ ರಾಜ್ಯದಲ್ಲಿ ರೈಲ್ವೆ ಮಾರ್ಗದಲ್ಲಿ ಶೇಕಡಾ 100 ರಷ್ಟು ವಿದ್ಯುದೀಕರಣದ ಗುರಿ ತಲುಪಲು ಸಹಕಾರಿಯಾಗಿದೆ.
ಭಾನುವಾರ (ಡಿಸೆಂಬರ್ 28) ರಂದು ₹93.55 ಕೋಟಿ ವೆಚ್ಚದಲ್ಲಿ ಯಶಸ್ವಿ ವಿದ್ಯುತ್ ಲೋಕೋಮೋಟಿವ್ ಪ್ರಯೋಗ ಮಾಡಲಾಯಿತು. 57 ಸುರಂಗಗಳು ಮತ್ತು 258 ಸೇತುವೆಗಳನ್ನು ಹೊಂದಿರುವ ತಾಂತ್ರಿಕವಾಗಿ ಬೇಡಿಕೆಯಿರುವ ಈ ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆ ಘಾಟ್ ವಿಭಾಗದಲ್ಲಿ 55 ಕಿಲೋ ಮೀಟರ್ ಉದ್ದದ ವಿದ್ಯುದ್ದೀಕರಣ ಪೂರ್ಣಗೊಂಡಿದೆ ಎಂದು ಬೆಂಗಳೂರು ಮತ್ತು ಮೈಸೂರು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಇಂಧನ ಮುಕ್ತ ರೈಲು ಕಾರ್ಯಾಚರಣೆ: ಶೀಘ್ರವೇ ವಿಬಿ ರೈಲು ಸೇವೆ
ದೇಶಾದ್ಯಂತ ರೈಲ್ವೆ ಡಬ್ಲಿಂಗ್ ಮತ್ತು ವಿದ್ಯುದೀಕರಣ ಕೈಗೊಂಡಿರುವ ಭಾರತೀಯ ರೈಲ್ವೆ ಇಲಾಖೆಗೆ ರಾಜ್ಯದ ಈ ಮಾರ್ಗದಲ್ಲಿ ವಿದ್ಯುದೀಕರಣ ಪ್ರಕ್ರಿಯೆ ಸವಾಲಾಗಿತ್ತು. ಅದರ ನಡುವೆ ಕಾರ್ಯ ಯಶಸ್ವಿಯಾಗಿದ್ದು, ಇಲಾಖೆಗೆ ಇದು ಮತ್ತೊಂದು ಮೈಲಿಗಲ್ಲು ಸಾಧನೆಯಾಗಿದೆ. ಇದರಿಂದ ಬೆಂಗಳೂರು-ಮಂಗಳೂರು ರೈಲು ಕಾರಿಡಾರ್ನಲ್ಲಿ ಡೀಸೆಲ್ ಮುಕ್ತ ರೈಲುಗಳ ಕಾರ್ಯಾಚರಣೆಗಳನ್ನು ಇನ್ನು ಮುಂದೆ ಸಕ್ರಿಯಗೊಳಿಸಲಾಗುತ್ತದೆ. ಈ ಪರಿಸರ ಸ್ನೇಹಿ ಕ್ರಮವಾದ ವಿದ್ಯುದೀಕರಣದಿಂದ ವಾರ್ಷಿಕವಾಗಿ ಅಂದಾಜು 1.5 ಮಿಲಿಯನ್ ಟನ್ಗಳಷ್ಟು ಇಂಗಾಲದ ಹೊರಸೂಸುವಿಕೆ ಕಡಿಮೆ ಆಗುತ್ತದೆ.
New Railway Line: ಗಿಣಿಗೇರಾ-ರಾಯಚೂರು ರೈಲು ಮಾರ್ಗ ಯೋಜನೆ ಅಪ್ಡೇಟ್, ತೆಲಂಗಾಣಕ್ಕೆ ಸಂಪರ್ಕ ಸುಲಭ
ಈ ರೈಲು ಮಾರ್ಗವು ಇಂಧನ ಮುಕ್ತ ಮಾರ್ಗವಾಗುತ್ತಿದ್ದಂತೆ ಭವಿಷ್ಯದಲ್ಲಿ ವಂದೇ ಭಾರತ್ ರೈಲುಗಳ ಕಾರ್ಯಾಚರಣೆಗೆ ಇಲಾಖೆ ಉತ್ಸಾಹ ತೋರಿಸಲಿದೆ. ಈಗಾಗಲೇ ಬೆಂಗಳೂರು-ಮಡಗಾಂವ್ ಮಾರ್ಗವಾಗಿ ವಂದೇ ಭಾರತ್ ರೈಲು ಕಾರ್ಯಾಚರಣೆ ಪ್ರಸ್ತಾಪಿಸಲಾಗಿದೆ.
120 ಕಿಮೀ. ವೇಗದಲ್ಲಿ ಚಲಿಸುವಂತೆ ವಿನ್ಯಾಸ
ಇಲ್ಲಿ ವಿದ್ಯುದ್ದೀಕರಣ ಯೋಜನೆಯು ಡಿಸೆಂಬರ್ 2023ರಿಂದ ಆರಂಭವಾಯಿತು. ಒಟ್ಟು 93.55 ಕೋಟಿ ರೂ. ವೆಚ್ಚದಲ್ಲಿ ವಿದ್ಯುದ್ದೀಕರಣ ನಡೆದಿದೆ. ಇದರಲ್ಲಿ ಐದು ಸ್ವಿಚಿಂಗ್ ಸ್ಟೇಷನ್ಗಳ ನಿರ್ಮಾಣ ಮತ್ತು ಸಂಪೂರ್ಣ ಪ್ರದೇಶದ ಓವರ್ಹೆಡ್ ಸಹ ಸೇರಿದೆ. ಓವರ್ಹೆಡ್ ಉಪಕರಣಗಳನ್ನು ಗರಿಷ್ಠ 120 ಕಿಮೀ ವೇಗಕ್ಕೆ ವಿನ್ಯಾಸಗೊಳಿಸಲಾಗಿದೆ. ಸುರಕ್ಷತೆ ಮತ್ತು ಸೂಕ್ತ ಕಾರ್ಯಾಚರಣೆಗೆ ಆದ್ಯತೆ ನೀಡಲಾಗಿದೆ. ಪೂರಕವಾಗಿ ಬಿಡಿ ಬ್ರಾಕೆಟ್ಗಳನ್ನು ಸ್ಥಾಪಿಸಲಾಗಿದೆ. ಹಲವು ಪರೀಕ್ಷೆಗಳನ್ನು ಕೈಗೊಂಡು ಪರಿಶೀಲಿಸಲಾಗಿದೆ.
ಕಡಿದಾದ ಇಳಿಜಾರು ಪ್ರದೇಶದಲ್ಲಿ 830 ಮೀಟರ್ಗಳವರೆಗೆ ವಿಸ್ತರಿಸಿದ ಓವರ್ಹೆಡ್ ವ್ಯವಸ್ಥೆ ಮಾಡಲಾಗಿದೆ. ಭಾರೀ ಮಳೆಗಾಲ ಎದುರಾದರೆ, ಭೂಕುಸಿತ ಸಂಭವಿಸಿ ಕಲ್ಲುಬಂಡೆ ಕಾಣುವಂತಾಗಿತ್ತು. ಇಲ್ಲಿ ಮಣ್ಣು ಇಲ್ಲದಂತಾಗಿತ್ತು. ಇಂತಹ ಒಂದಷ್ಟು ಗಂಭೀರ ಅಡೆತಡೆಗಳು ಎದುರಾದರೂ ಸಹಿತ ಕಾರ್ಯವನ್ನು ಮುಂದುವರಿಸಿ ಯಶಸ್ವಿಗೊಳಿಸಲಾಗಿದೆ. ಶನಿವಾರ ವಿದ್ಯುದ್ದೀಕರಣ ಮತ್ತು ವಿದ್ಯುತ್ ಲೋಕೋಮೋಟಿವ್ ಪ್ರಯೋಗ ಯಶಸ್ವಿಯಾಗಿ ಪೂರ್ಣಗೊಂಡ ಬಳಿಕ ವಿದ್ಯುತ್ ಕೇಬಲ್ ಎಳೆಯಲಾಗುತ್ತಿದೆ ಎಂದು ನೈಋತ್ಯ ರೈಲ್ವೆ ಮಾಹಿತಿ ಹಂಚಿಕೊಂಡಿದೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications