ಮುಷ್ಕರ; 6ನೇ ವೇತನ ಆಯೋಗದ ಬಗ್ಗೆ ಸರ್ಕಾರದ ನಿಲುವೇನು?
ಬೆಂಗಳೂರು, ಏಪ್ರಿಲ್ 07; ಸಾರಿಗೆ ನೌಕರರು ಕರ್ನಾಟಕದಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. 6ನೇ ವೇತನ ಆಯೋಗದ ಶಿಫಾರಸುಗಳನ್ನು ಪರಿಗಣಿಸಬೇಕು ಎಂಬುದು ನೌಕರರ ಪ್ರಮುಖ ಬೇಡಿಕೆಯಾಗಿದೆ.
ಈ ಹಿಂದೆ ಸಾರಿಗೆ ನೌಕರರು ಮುಷ್ಕರ ನಡೆಸಿದಾಗ 10 ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದರು. ಇವುಗಳಲ್ಲಿ ತಮ್ಮನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಬೇಕು ಎಂಬ ಬೇಡಿಕೆಯನ್ನು ಕಾರ್ಮಿಕ ಒಕ್ಕೂಟದ ಸಭೆಯಲ್ಲಿಯೇ ತಿರಸ್ಕರಿಸಲಾಗಿತ್ತು.
6ನೇ ವೇತನ ಆಯೋಗದಂತೆ ವೇತನ ನೀಡಿದ್ರೆ 1 ಗಂಟೆಯಲ್ಲಿ ಮುಷ್ಕರ ವಾಪಸ್
6ನೇ ವೇತನ ಆಯೋಗದ ಶಿಫಾರಸುಗಳನ್ನು ಪರಿಗಣಿಸುವ ಕುರಿತು ಸರ್ಕಾರ ತೀರ್ಮಾನ ಕೈಗೊಂಡರೆ ತಕ್ಷಣ ಮುಷ್ಕರ ನಿಲ್ಲಿಸುತ್ತೇವೆ ಎಂದು ನೌಕರರು ಹೇಳಿದ್ದಾರೆ. ಗುರುವಾರವೂ ಮುಷ್ಕರ ಮುಂದುವರೆಯುವುದು ಬಹುತೇಕ ಖಚಿತವಾಗಿದೆ.
ಸಾರಿಗೆ ನೌಕರರ ಮುಷ್ಕರ; ರೈಲು ಓಡಿಸಲು ಸರ್ಕಾರದ ಪತ್ರ
6ನೇ ವೇತನ ಆಯೋಗದ ಶಿಫಾರಸು ಪರಿಗಣಿಸುವ ಕುರಿತು ಸರ್ಕಾರವು ಆರ್ಥಿಕ ಅಂಶಗಳನ್ನು ಪರಿಗಣಿಸಿ ತೀರ್ಮಾನಿಸಬೇಕು ಎಂದು ಸರ್ಕಾರ ಹೇಳಿದೆ. 13/12/2020ರಲ್ಲಿ ನಡೆದ ಕಾರ್ಮಿಕ ಒಕ್ಕೂಟದ ಸಭೆಯಲ್ಲಿಯೂ ಈ ವಿಚಾರ ತಿಳಿಸಲಾಗಿತ್ತು ಎಂದು ಸರ್ಕಾರ ಹೇಳಿದೆ.
ಬೆಂಗಳೂರಿನಲ್ಲಿ ಸಾರಿಗೆ ಮುಷ್ಕರ ಬಿಸಿ; ಹೇಗಿದೆ ನಗರದ ಚಿತ್ರಣ?
ಈ ಸಂಬಂಧ ರಚನೆ ಮಾಡಲಾದ ಆಂತರಿಕ ಸಮಿತಿಯು ಈಗಾಗಲೇ 6 ಸಭೆಗಳನ್ನು ನಡೆಸಿ ಪರಿಶೀಲನೆ ನಡೆಸಿದೆ. ಮುಖ್ಯಮಂತ್ರಿಗಳು ಸಹ ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಜೊತೆ ವಿಶೇಷ ಸಭೆಯನ್ನು ನಡೆಸಿದ್ದಾರೆ.
ನೌಕರರ ಹಿತದೃಷ್ಟಿಯಿಂದ ಸೂಕ್ತ ಸಲಹೆ, ಸೂಚನೆಗಳನ್ನು ನೀಡಿದ್ದಾರೆ. ಅಲ್ಲದೇ ಈ ಕುರಿತು ನಿಗಮ ಮಟ್ಟದ ಎಲ್ಲಾ ಕಾರ್ಮಿಕ ಸಂಘಟನೆಗಳೊಂದಿಗೆ ಸಭೆ ನಡೆಸಿ ಅವರ ಅಭಿಪ್ರಾಯ/ ಸಲಹೆಗಳನ್ನು ಕೇಳಲಾಗಿದೆ.
ಪ್ರಸ್ತುತ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಆದ್ದರಿಂದ ವೇತನ ಪರಿಷ್ಕರಣೆ ಕುರಿತು ಅಂತಿಮ ತೀರ್ಮಾನ ಕೈಗೊಳ್ಳುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ ಎಂದು ಸರ್ಕಾರ ಹೇಳಿದೆ.
Recommended Video