ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂಪರ್ಕ್ ಫಾರ್ ಸಮರ್ಥನ್ : ಶಿವಣ್ಣನ ಭೇಟಿಯಾದ ಶ್ರೀನಿವಾಸ ಪೂಜಾರಿ

By Gururaj
|
Google Oneindia Kannada News

ಬೆಂಗಳೂರು, ಜುಲೈ 18 : ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ನಟ ಶಿವರಾಜ್ ಕುಮಾರ್ ಅವರನ್ನು ಭೇಟಿ ಮಾಡಿದರು. ಸಂಪರ್ಕ್ ಫಾರ್ ಸಮರ್ಥನ್ ಅಭಿಯಾನದ ಅಂಗವಾಗಿ ವಿವಿಧ ಗಣ್ಯರನ್ನು ಬಿಜೆಪಿ ನಾಯಕರು ಭೇಟಿಯಾಗುತ್ತಿದ್ದಾರೆ.

ಕೋಟಾ ಶ್ರೀನಿವಾಸ ಪೂಜಾರಿ ಅವರು ನಟ ಡಾ.ಶಿವರಾಜ್ ಕುಮಾರ್ ಅವರನ್ನು 'ರುಸ್ತುಂ' ಚಿತ್ರೀಕರಣದ ಸಮಯದಲ್ಲಿ ಭೇಟಿಯಾಗಿ ಅಭಿಯಾನದ ಬಗ್ಗೆ ಮಾಹಿತಿ ಹಂಚಿಕೊಂಡರು. ಸಂಪರ್ಕ್ ಫಾರ್ ಸಮರ್ಥನ್ ಅಭಿಯಾನದ ಬುಕ್‌ಲೆಟ್ ನೀಡಿದರು.

ಪುನೀತ್ ರಾಜ್‌ಕುಮಾರ್‌ರನ್ನು ಭೇಟಿಯಾದ ಕೆ.ಮುರಳೀಧರ್ ರಾವ್ಪುನೀತ್ ರಾಜ್‌ಕುಮಾರ್‌ರನ್ನು ಭೇಟಿಯಾದ ಕೆ.ಮುರಳೀಧರ್ ರಾವ್

Sampark For Samarthan Kota Srinivas Poojary meets Shivarajkumar

ಬಿಜೆಪಿ 2019ರ ಲೋಕಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿದೆ. ಚುನಾವಣೆಗೂ ಮೊದಲೇ ಸಂಪರ್ಕ್ ಫಾರ್ ಸಮರ್ಥನ್ ಎಂಬ ಅಭಿಯಾನ ಆರಂಭಿಸಿದೆ. 4000 ಬಿಜೆಪಿ ನಾಯಕರು ಸುಮಾರು 1 ಲಕ್ಷ ಗಣ್ಯರನ್ನು ಭೇಟಿ ಮಾಡಲಿದ್ದಾರೆ.

ಸಂಪರ್ಕ್ ಫಾರ್ ಸಮರ್ಥನ್ : ಕರ್ನಾಟಕಕ್ಕೆ ಅಮಿತ್ ಶಾ ಭೇಟಿಸಂಪರ್ಕ್ ಫಾರ್ ಸಮರ್ಥನ್ : ಕರ್ನಾಟಕಕ್ಕೆ ಅಮಿತ್ ಶಾ ಭೇಟಿ

Sampark For Samarthan Kota Srinivas Poojary meets Shivarajkumar

ಜೂನ್ ತಿಂಗಳಿನಲ್ಲಿ ಕರ್ನಾಟಕ ಬಿಜೆಪಿ ಉಸ್ತುವಾರಿಯಾದ ಕೆ.ಮುರಳೀಧರ್ ರಾವ್ ಅವರು ನಟ ಪುನೀತ್ ರಾಜ್‌ಕುಮಾರ್ ಅವರನ್ನು ಭೇಟಿ ಮಾಡಿದ್ದರು. ಸಂಪರ್ಕ್ ಫಾರ್ ಸಮರ್ಥನ್ ಅಭಿಯಾನ ಬಗ್ಗೆ ಅವರಿಗೆ ಮಾಹಿತಿ ನೀಡಿದ್ದರು.

ಕೇಂದ್ರ ಸಚಿವ ರಾಜವರ್ಧನ್ ಸಿಂಗ್ ರಾಥೋಡ್ ಅಭಿಯಾನದ ಅಂಗವಾಗಿ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಭೇಟಿ ಮಾಡಿದ್ದರು. ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಅವರಿಗೂ ಅಭಿಯಾನದ ಬಗ್ಗೆ ಬಿಜೆಪಿ ನಾಯಕರು ಮಾಹಿತಿ ನೀಡಿದ್ದಾರೆ.

English summary
Kota Srinivas Poojary leader of the Opposition in the Legislative Council Karnataka met Kannada actor Shivarajkumar for Sampark For Samarthan campaign.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X