ಕಾಶಿ ಮಠ ಸಂಸ್ಥಾನದ ಶ್ರೀಗಳ ಚಾತುರ್ಮಾಸ ಈ ಬಾರಿ ತಿರುಪತಿಯಲ್ಲಿ
ತಿರುಪತಿ, ಜುಲೈ 19: ಶ್ರೀ ಕಾಶಿಮಠ ಸಂಸ್ಥಾನದ ಮಠಾಧೀಶರಾದ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ 2018ರ ಚಾತುರ್ಮಾಸ ವೃತವು ಈ ಬಾರಿ ತಿರುಮಲ ಬೆಟ್ಟದ ಶ್ರೀ ವೆಂಕಟರಮಣ ದೇವರ ಪುಣ್ಯ ಕ್ಷೇತ್ರದಲ್ಲಿರುವ ಕಾಶಿಮಠದ ಶಾಖಾ ಮಠದಲ್ಲಿ ನೆರವೇರಲಿರಲಿದೆ.
ಈ ಪ್ರಯುಕ್ತ ತಿರುಮಲೆಗೆ ತಲಪಿದ ಶ್ರೀಗಳಿಗೆ ತಿರುಮಲ ತಿರುಪತಿ ದೇವಾಲಯದ ವೈದಿಕರು ಪೂರ್ಣ ಕುಂಭ ಸ್ವಾಗತ ನೀಡಿದರು. ಈ ಸಂದರ್ಭದಲ್ಲಿ ಚಾತುರ್ಮಾಸ ಸಮಿತಿಯ ಪದಾಧಿಕಾರಿಗಳು, ಶಾಖಾ ಮಠದ ವ್ಯವಸ್ಥಾಪಕ ಸಮಿತಿಯ ಕಾಪು ನಾರಾಯಣ ಶೆಣೈ ಮತ್ತಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬುಧವಾರ (ಜುಲೈ 18) ಶ್ರೀಗಳ ಪುರಪ್ರವೇಶದೊಂದಿಗೆ ಚಾತುರ್ಮಾಸ ಧಾರ್ಮಿಕ ವಿಧಿವಿಧಾನ ಆರಂಭವಾಗಿದೆ. ನವೆಂಬರ್ 20 ಉತ್ಥಾನ ದ್ವಾದಶಿ, ತುಳಸೀ ಪೂಜೆಯವರಿಗೆ ನಿರಂತರ ಕಾರ್ಯಕ್ರಮ ನಡೆಯಲಿದೆ. ಆಗಸ್ಟ್ ಎರಡರಂದು ಕಾಶಿಶ್ರೀಗಳು ಚಾತುರ್ಮಾಸ ವೃತ ಸ್ವೀಕಾರ ಮಾಡಲಿದ್ದಾರೆ.

ಸೆಪ್ಟಂಬರ್ 24ರಂದು ಮೃತಿಕಾ ವಿಸರ್ಜನೆ, ಸೀಮೋಲ್ಲಂಘನೆ ಮೂಲಕ ಕಾಶಿಶ್ರೀಗಳ ಚಾತುರ್ಮಾಸ ಕೊನೆಗೊಳ್ಲಲಿದೆ. ಈ ಅವಧಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ, ಪ್ರವಚನ, ಪಾರಾಯಣಗಳು ನಡೆಯಲಿವೆ. ಆಗಸ್ಟ್ ಎರಡರಂದು ಸಂಜೆ ಆರುಗಂಟೆಗೆ ಮುದ್ರಾಧಾರಣೆ ನಡೆಯಲಿದೆ.
ಆಗಸ್ಟ್ 15ರಂದು ನಾಗಪಂಚಮಿ, ಮಾಧವೇಂದ್ರ ಸ್ವಾಮಿ ಪುಣ್ಯತಿಥಿ, ಆಗಸ್ಟ್ 25ರಂದು ಖುಗೋಪಕರ್ಮ, ಸೆಪ್ಟಂಬರ್ ಎರಡರಂದು ಜನ್ಮಾಷ್ಠಮಿ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳನ್ನು ಚಾತುರ್ಮಾಸ ಸಮಿತಿ, ತಿರುಮಲದ ಕಾಶಿಮಠದ ಶಾಖಾಮಠದಲ್ಲಿ ಆಯೋಜಿಸಿದೆ.
ಇದಲ್ಲದೇ ಸೆಪ್ಟಂಬರ್ 13-19ರ ವರೆಗೆ ಗಣೇಶ ಚತುರ್ಥಿಯ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು, ಸೆಪ್ಟಂಬರ್ 23ರಂದು ಅನಂತ ಚತುರ್ದಶಿ ವೃತಾಚಾರಣೆ ನಡೆಯಲಿದೆ. ವಿಶೇಷ ಪಾರಾಯಣಕ್ಕಾಗಿ ಸಮಾಜದ ವಿದ್ವತ್ ವೈದಿಕರು ಕೆಲದಿನಗಳ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಚಾತುರ್ಮಾಸ ಸಮಿತಿ ವಿನಂತಿಸಿಕೊಂಡಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications