ಗ್ರಾಹಕರ ಅನುಕೂಲಕ್ಕೆ ತಕ್ಕಂತೆ ಬ್ಯಾಗ್ಗಳಲ್ಲೇ ದೊರೆಯಲಿದೆ ಮರಳು
ಬೆಂಗಳೂರು, ಜುಲೈ 01: ಗ್ರಾಹಕರಿಗೆ ಸುಲಭವಾಗಿ ಹಾಗೂ ಕಡಿಮೆ ವೆಚ್ಚದಲ್ಲಿ ಮರಳು ದೊರೆಯುವಂತೆ ನೂತನ ಮರಳು ಮಾರಾಟ ಯೋಜನೆಯನ್ನು ಗಣಿ ಹಾಗೂ ಭೂ ವಿಜ್ಞಾನ ಇಲಾಖೆ ಆರಂಭಿಸಲಿದೆ.
ಕೈಗೆಟುಕುವ ದರದಲ್ಲಿ ಜನಸಾಮಾನ್ಯರಿಗೆ ಮರಳು ಸಿಗುವಂತೆ ಮಾಡಲು ಈ ಹೊಸ ಯೋಜನೆ ಜಾರಿಗೆ ಬರಲಿದ್ದು, ಪ್ರಸ್ತಾವನೆ ಸಿದ್ಧವಾಗಿದೆ.
ವಿಕಾಸಸೌಧದಲ್ಲಿ ಮರಳು ಗಣಿಗಾರಿಕೆ ಕುರಿತು ಜಿಲ್ಲಾಧಿಕಾರಿಗಳು, ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಜೊತೆ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಬುಧವಾರ ಸಭೆ ನಡೆಸಿದ್ದು, ಇನ್ನು ಮುಂದೆ ಬ್ಯಾಗ್ಗಳ ಮೂಲಕ ಮರಳು ಮಾರಾಟ ಮಾಡುವ ನೂತನ ಯೋಜನೆ ಜಾರಿಗೆ ತರುವುದಾಗಿ ಮಾಹಿತಿ ನೀಡಿದ್ದಾರೆ.

ರಾಜ್ಯ ಪಾನೀಯ ನಿಗಮದ ಮೂಲಕ ಹೇಗೆ ಮದ್ಯ ಮಾರಾಟವಾಗುತ್ತಿದೆಯೋ ಅದೇ ರೀತಿ ಗಣಿ ಮತ್ತು ಭೂವಿಜ್ಞಾನ ಇಲಾಖೆ, ಬ್ಯಾಗ್ಗಳಲ್ಲಿ ಮರಳು ಮಾರಾಟ ಮಾಡಲು ಉದ್ದೇಶಿಸಿದೆ ಎಂದು ತಿಳಿಸಿದರು.
ಮರಳು ಸಾಗಣೆ ಮಾಡುವಾಗ ಶೇ 25ರಷ್ಟು ಮರಳು ವ್ಯರ್ಥವಾಗುತ್ತಿತ್ತು. ಇದನ್ನು ತಡೆಯುವ ಉದ್ದೇಶದಿಂದ 50 ಕೆ.ಜಿ. ಬ್ಯಾಗ್, ಒಂದು ಟನ್ ಹಾಗೂ ಅದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಮರಳು ಖರೀದಿಗೆ ಅವಕಾಶ ನೀಡಲಾಗುತ್ತಿದೆ.
"ಸದ್ಯಕ್ಕೆ ಪ್ರಾಯೋಗಿಕವಾಗಿ ರಾಜ್ಯದ ಐದು ಕಡೆಗಳಲ್ಲಿ ಈ ಘಟಕಗಳನ್ನು ಪ್ರಾರಂಭ ಮಾಡಲಾಗುವುದು. ಮರಳಿನ ಬ್ಯಾಗ್ಗಳನ್ನು ಸಿದ್ಧಪಡಿಸುವುದು, ಸಾಗಾಣಿಕೆ ಸೇರಿದಂತೆ ಇತರೆ ತರಬೇತಿಯನ್ನು ನೀಡಲಿದ್ದೇವೆ" ಎಂದು ಸಚಿವ ನಿರಾಣಿ ತಿಳಿಸಿದರು.
ಮರಳನ್ನು ಎ, ಬಿ, ಸಿ ಶ್ರೇಣಿಗಳಾಗಿ ವರ್ಗೀಕರಿಸಿ ಮಾರಾಟ ಮಾಡಲಾಗುತ್ತದೆ. ಮೊದಲು ಯಾರ್ಡ್ಗಳಲ್ಲಿ ಇಟ್ಟು ನಂತರ ವಿತರಣೆ ಮಾಡುತ್ತೇವೆ. ವರ್ಷಪೂರ್ತಿ ಮರಳು ಸಿಗದ ಕಾರಣ ಮಾರುಕಟ್ಟೆಯಲ್ಲಿ ಮರಳಿನ ದರ ಹೆಚ್ಚಿತ್ತು. ಇದೀಗ ಬ್ಯಾಗ್ಗಳಲ್ಲಿ ಮರಳು ಸಂಗ್ರಹಿಸಿಟ್ಟರೆ ಯಾವಾಗ ಬೇಕಾದರೂ ವಿತರಿಸಬಹುದು. ಹೀಗಾಗಿ ಕಡಿಮೆ ಖರ್ಚು ತಗಲುತ್ತದೆ. 5 ಲಕ್ಷಕ್ಕಿಂತ ಕಡಿಮೆ ದರದಲ್ಲಿ ಮನೆ ಕಟ್ಟಿಸಿಕೊಳ್ಳುವವರಿಗೆ ಯಾವುದೇ ರೀತಿ ರಾಜಧನ ಕಟ್ಟಿಸಿಕೊಳ್ಳುವುದಿಲ್ಲ ಎಂದು ಹೇಳಿದರು.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications