ಸೆಪ್ಟೆಂಬರ್ನಲ್ಲಿ ಸಂಗೊಳ್ಳಿ ರಾಯಣ್ಣ ಮಿಲಿಟರಿ ಶಾಲೆ ಪ್ರಾರಂಭ : ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು, ಆ.15: ಸಂಗೊಳ್ಳಿ ರಾಯಣ್ಣ ಹೆಸರಿನ ಶಾಲೆಯನ್ನು ಮಿಲಟರಿ ಶಾಲೆಯಾಗಿ ಪರಿವರ್ತಿಸಲಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲಿ ಸಂಗೊಳ್ಳಿ ರಾಯಣ್ಣ ಮಿಲಟರಿ ಶಾಲೆ ಉದ್ಘಾಟನೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಭಾನುವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ 225ನೇ ಜಯಂತೋತ್ಸವ ಅಂಗವಾಗಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ಈ ಶಾಲೆಯ ಪೀಠೋಪಕರಣ ಹಾಗೂ ಇತರ ಸೌಲಭ್ಯಗಳಿಗಾಗಿ 50 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಅದಕ್ಕೆ ಬೇಕಾದ 180 ಕೋಟಿ ರೂ.ಗಳನ್ನು ಹಿಂದಿದ್ದ ಮತ್ತು ಈಗಿನ ಸರ್ಕಾರ ವೆಚ್ಚ ಮಾಡಿದೆ. ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನದಿಂದ ನಂದಗಢದ ಅಭಿವೃದ್ಧಿ ಕೈಗೊಳ್ಳಲಾಗುತ್ತಿದೆ ಎಂದರು.

ನವ ದೆಹಲಿಯಲ್ಲಿ ರಾಯಣ್ಣ ಪ್ರತಿಮೆ ನಿರ್ಮಾಣಕ್ಕೆ ಪತ್ರ:
ಸ್ವಾತಂತ್ರ್ಯ ನಂತರದ ಹೋರಾಟಗಾರರನ್ನೂ ನಾವು ಮರೆಯಬಾರದು. ಕನ್ನಡ ನಾಡನ್ನು ಕಟ್ಟಲು, ಭಾಷೆ ಸಂಸ್ಕೃತಿಗಳನ್ನು ಉಳಿಸಲು ಹತ್ತು ಹಲವು ಹೋರಾಟಗಳಾಗಿವೆ. ಕರ್ನಾಟಕ ಏಕೀಕರಣ ಹೋರಾಟ,ಕರ್ನಾಟಕವನ್ನು ಒಗ್ಗೂಡಿಸಲು ಹೋರಾಟ, ಗಡಿಭಾಗಗಳಿಗೆ ಹೋರಾಟ , ಇವೆಲ್ಲವನ್ನೂ ನಾವು ಸ್ಮರಿಸಬೇಕಿದೆ. ಕನ್ನಡಕ್ಕಾಗಿ ಕನ್ನಡಿಗರ ಹೋರಾಟ ಮತ್ತು ರೈತರ ಹೋರಾಟದ ಸ್ಮರಣೆ ಬೆಂಗಳೂರಿನ ಅಚ್ಚುಕಟ್ಟು ಪ್ರದೇಶದಲ್ಲಿ ಸ್ಮಾರಕಗಳನ್ನು ನಿರ್ಮಿಸಲಾಗುವುದು. ಇದಕ್ಕೆ ಕನ್ನಡಪರ ಹಾಗೂ ರೈತಸಂಘಗಳ ಮಾರ್ಗದರ್ಶನ ಪಡೆಯಲಾಗುವುದು. ನವದೆಹಲಿಯಲ್ಲಿ ಸಂಗೊಳ್ಳಿರಾಯಣ್ಣನ ಪ್ರತಿಮೆ ಸ್ಥಾಪನೆಗೆ ಈಗಾಗಲೇ ಪತ್ರ ಬರೆಯಲಾಗಿದೆ ಎಂದು ಬೊಮ್ಮಾಯಿ ಇದೇ ವೇಳೆ ತಿಳಿಸಿದರು.

ಕಾಗಿನೆಲೆ ಅಭಿವೃದ್ಧಿಗೆ 40 ಕೋಟಿ ರೂ.
ಸ್ವಾತಂತ್ರ್ಯಹೋರಾಟದ ಸ್ಮಾರಕಗಳನ್ನು ಅಭಿವೃದ್ಧಿ ಮಾಡುವ ನಿರ್ಣಯವನ್ನು ಸರ್ಕಾರ ಮಾಡಿದೆ. ಕನಕದಾಸ ಕಾಗಿನೆಲೆ ಕ್ಷೇತ್ರದ ಅಭಿವೃದ್ಧಿಗೆ ನಾಯಕರಾದ ಯಡಿಯೂರಪ್ಪನವರ ಸರ್ಕಾರದ ಅವಧಿಯಲ್ಲಿ 40 ಕೋಟಿ ರೂ. ಒದಗಿಸಿದ್ದಾರೆ. ಕನಕದಾಸರು ಹುಟ್ಟಿದ ಬಾಡ ಕ್ಷೇತ್ರದಲ್ಲಿ ಸರ್ಕಾರ 25 ಕೋಟಿ ರೂ. ವೆಚ್ಚದಲ್ಲಿ ಕನಕನ ಅರಮನೆಯನ್ನು ನಿರ್ಮಿಸಿದೆ. ಇವೆಲ್ಲವೂ ನಾಡಿನ ಇತಿಹಾಸವನ್ನು ಮುಂದಿನ ಜನಾಂಗಕಕ್ಕೆ ತಿಳಿಹೇಳುವ ಪ್ರಯಾಸವಾಗಿದೆ. ಕನಕದಾಸರನ್ನು ಮೋಸದಿಂದ ಘಾಸಿಗೊಳಿಸಿದ ಸಂದರ್ಭದಲ್ಲಿ 'ಆ ಸೋಲಿನಲ್ಲಿ ಹಲವಾರು ಗೆಲವುನ್ನು ಕಂಡೆ, ನನ್ನನ್ನು ನಾನು ಗೆದ್ದುಕೊಂಡೆ' ಎಂದು ನುಡಿದಿದ್ದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು.

ರಾಯಣ್ಣ ಸ್ವಾಮಿನಿಷ್ಠೆ ಶ್ಲಾಘನಾರ್ಹ:
ಸಂಗೊಳ್ಳಿ ರಾಯಣ್ಣ ಸ್ವಾಮಿನಿಷ್ಠೆ, ಶೌರ್ಯಧೈರ್ಯಗಳಿಗೆ ಹೆಸರುವಾಸಿ. ಅವರ ಚರಿತ್ರೆಯಲ್ಲಿ ಎಂದೂ ಕೂಡ ಮುಂದಿಟ್ಟ ಹೆಜ್ಜೆ ಹಿಂದಿಟ್ಟಿಲ್ಲ. ಕಿತ್ತೂರು ರಾಣಿ ಚೆನ್ನಮ್ಮನ ಬಲಗೈ ಬಂಟರಾಗಿದ್ದ ಅವರು ಬ್ರಿಟೀಷ್ ಸೈನ್ಯಕ್ಕೆ ಸಿಂಹಸ್ವಪ್ನವಾಗಿದ್ದರು. ಕಿತ್ತೂರು ರಾಣಿ ಚೆನ್ನಮ್ಮನನ್ನು ಬ್ರಿಟೀಷರು ಬೈಲಹೊಂಗಲದ ಜೈಲಿನಲ್ಲಿಟ್ಟ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟವನ್ನು ರಾಯಣ್ಣ ಮುಂದುವರೆಸಿದ್ದರು. ಕಿತ್ತೂರು ರಾಣಿ ಚೆನ್ನಮ್ಮನಿಗೆ ಸಂಗೊಳ್ಳಿ ರಾಯಣ್ಣನ ಸ್ವಾತಂತ್ರ್ಯ ಗಳಿಸಿಕೊಡುವನೆಂಬ ಅದಮ್ಯ ವಿಶ್ವಾಸವಿತ್ತು. ಹೋರಾಟದಲ್ಲಿ ಸೆರೆಸಿಕ್ಕ ರಾಯಣ್ಣನನ್ನು ಗಲ್ಲಿಗೇರಿಸುವ ಸಂದರ್ಭದಲ್ಲಿ ನಂದಗಢದಲ್ಲಿ ತನ್ನ ತಾಯಿಗೆ 'ಒಬ್ಬ ರಾಯಣ್ಣನನ್ನು ಗಲ್ಲಿಗೇರಿಸಿದರೆ ಚಿಂತೆಯಿಲ್ಲ. ಕಿತ್ತೂರು ನಾಡಿನ ಮನೆಮನೆಯಲ್ಲಿಯೂ ಒಬ್ಬ ಸಂಗೊಳ್ಳಿ ರಾಯಣ್ಣ ಹುಟ್ಟುತ್ತಾನೆ ' ಎಂದು ನುಡಿದಿದ್ದರು. ಇದು ಕನ್ನಡ ನಾಡಿನ ಕೆಚ್ಚೆದೆಯ ಇತಿಹಾಸ. ಈಸೂರು ಸತ್ಯಾಗ್ರ, ಅಂಕೋಲಾ ಉಪ್ಪಿನ ಸತ್ಯಾಗ್ರಹ, ಶಿವಪುರ ಸತ್ಯಾಗ್ರಹಗಳೆಲ್ಲವೂ ನಮಗೆ ಪ್ರೇರಣೆಯಾಗಿವೆ ಎಂದರು.

ಯುವಜನತೆಗೆ ದೇಶಕ್ಕಾಗಿ ದುಡಿಯಬೇಕಿದೆ:
ನಮ್ಮ ದೇಶ ಶ್ರೇಷ್ಠ ದೇಶ ಎನ್ನುವ ಕಲ್ಪನೆ ನಮ್ಮನ್ನು ದೇಶಕ್ಕಾಗಿ ಸಮರ್ಪಣೆ ಮಾಡಬೇಕಾಗಿದೆ. ದೇಶಕ್ಕಾಗಿ ನಾವೇನು ಮಾಡಬಲ್ಲೆವು ಎಂಬುದನ್ನು ಮುಂದಿನ 25 ವರ್ಷದ ಅಮೃತಕಾಲದಲ್ಲಿ ಸಾಧಿಸಬೇಕಿದೆ. ಯುವಜನತೆ ಜಾತಿಮತಬೇಧಗಳನ್ನು ಲೆಕ್ಕಿಸದೇ ದೇಶಕ್ಕಾಗಿ ದುಡಿಯಬೇಕಿದೆ. ಭಾರತವನ್ನು ವಿಶ್ವಭಾರತವಾಗಿಸಲು ಎಲ್ಲರೂ ಸಮರ್ಪಣಾ ಭಾವದಿಂದ ಸಂಕಲ್ಪ ತೊಡಬೇಕಿದೆ. ಭವ್ಯ ಭಾರತ ಕಟ್ಟುವ ಮೂಲಕ ಸಂಗೊಳ್ಳಿ ರಾಯಣ್ಣನಂತಹ ಮಹಾನ್ ಚೇತನಗಳಿಗೆ ಗೌರವ ಸಮರ್ಪಿಸಬೇಕೆಂದು ತಿಳಿಸಿದರು.
-
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral












Click it and Unblock the Notifications