ಸಂಕ್ರಾಂತಿ: ಹಂಪಿ ಪುಣ್ಯಕ್ಷೇತ್ರದಲ್ಲಿ ಐದು ದಿನ ನಿಷೇಧಾಜ್ಞೆ
ಹೊಸಪೇಟೆ, ಜ.13: ಕೊರೊನಾ ಪ್ರಕರಣಗಳು ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಹಂಪಿ ಪುಣ್ಯಕ್ಷೇತ್ರದಲ್ಲಿ ಸಂಕ್ರಾಂತಿ ಸಮಯಕ್ಕೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಹಂಪಿಯಲ್ಲಿ ಜ.13ರಿಂದ 17ರವರೆಗೆ ಐದು ದಿನಗಳ ಕಾಲ ನಿಷೇಧಾಜ್ಞೆ ವಿಧಿಸಲಾಗಿದೆ. ಈ ಸಂದರ್ಭದಲ್ಲಿ ಯಾರೂ ಹಂಪಿ ಕ್ಷೇತ್ರದತ್ತ ಪ್ರವಾಸಿಗರು ಬರುವಂತಿಲ್ಲ ಎಂದು ವಿಜಯನಗರ ಜಿಲ್ಲಾಧಿಕಾರಿ ಪಿ. ಅನಿರುದ್ಧ್ ಶ್ರವಣ್ ಅವರು ಆದೇಶ ಮಾಡಿದ್ದಾರೆ.
ಸಾರ್ವಜನಿಕರ ಸುರಕ್ಷತೆ ಹಾಗೂ ಆರೋಗ್ಯದ ದೃಷ್ಟಿಯಿಂದ ಕೋವಿಡ್-19 ರೂಪಾಂತರ ಓಮಿಕ್ರಾನ್ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ವಿಧಿಸಲಾಗಿದೆ. ಜ.13ರ ಬೆಳಗ್ಗೆ 6ರಿಂದ ಜ.17ರ ಬೆಳಗ್ಗೆ 6 ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಸಾವಿರಾರು ಭಕ್ತರು ಬರುತ್ತಾರೆ:
ತುಂಗಭದ್ರಾ ನದಿಯ ತಟದಲ್ಲಿರುವ ಹಂಪಿ ವಿರೂಪಾಕ್ಷ ಕ್ಷೇತ್ರಕ್ಕೆ ಪ್ರತಿ ವರ್ಷ ಸಂಕ್ರಮಣ ದಿನದಂದು ಸಾವಿರಾರು ಭಕ್ತರು ಸೇರುತ್ತಾರೆ. ನದಿಯಲ್ಲಿ ಪುಣ್ಯ ಸ್ನಾನ ಮಾಡಿ ವಿರೂಪಾಕ್ಷನ ದರ್ಶನ ಪಡೆಯಲು ವಿವಿಧ ಭಾಗಗಳ ಜನರು ಇಲ್ಲಿಗೆ ಬಂದು ಸೇರುತ್ತಾರೆ.
ಕರ್ನಾಟಕ ಅಷ್ಟೇ ಆಲ್ಲದೆ, ತೆಲಂಗಾಣ, ಮಹಾರಾಷ್ಟ್ರ, ತಮಿಳುನಾಡು ರಾಜ್ಯಗಳಿಂದಲೂ ಭಕ್ತರು ಬರುತ್ತಾರೆ. ಸಂಕ್ರಮಣದ ದಿನದಂದು ಇಲ್ಲಿ 15ರಿಂದ 20 ಸಾವಿರ ಮಂದಿ ಸೇರುತ್ತಾರೆ ಎಂದು ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶದಲ್ಲಿ ಅಂದಾಜಿಸಲಾಗಿದೆ.
ಕೆಲವು ಭಕ್ತರು ಒಂದೆರಡು ದಿನ ಮುಂಚಿತವಾಗಿಯೇ ಬಂದು ವಾಸ್ತವ್ಯ ಹೂಡುವ ರೂಢಿ ಮಾಡಿಕೊಂಡಿರುತ್ತಾರೆ. ಈ ಕಾರಣದಿಂದಾಗಿ ಹಂಪಿ ಕ್ಷೇತ್ರದಲ್ಲಿ ಜನಸಂದಣಿ ಸೇರದಂತೆ ನಿಷೇಧಾಜ್ಞೆ ವಿಧಿಸಿ ಆದೇಶ ಹೊರಡಿಸಲಾಗಿದೆ.
Recommended Video
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications