ತುಮಕೂರಿನಲ್ಲಿ ಸಂತರ ಸಮಾಗಮː ಕೇಸರಿ ಕಲರವ
ತುಮಕೂರು, ನ.11 : ಭಾರತವನ್ನು, ಒಡೆಯಲು ಕೆಲ ಶಕ್ತಿಗಳು ನಿರಂತರ ಪ್ರಯತ್ನ ಮಾಡುತ್ತಿದ್ದು ಈ ಬಗ್ಗೆ ನಾವೆಲ್ಲರೂ ಎಚ್ಚರಿಕೆ ವಹಿಸಬೇಕಾಗಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖ ಮೋಹನ್ ಭಾಗವತ್ ಹೇಳಿದರು.
ತುಮಕೂರಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಬೃಹತ್ ಸಂತ ಸಮ್ಮೇಳನದಲ್ಲಿ ಮಾತನಾಡಿ, ಮತಾಂತರ, ಬಡತನ, ಶೋಷಿತರನ್ನು ಗುರುತಿಸಿ ಅವರನ್ನು ಮುಖ್ಯವಾಹಿನಿಗೆ ತರಲು ಸತತ ಪ್ರಯತ್ನ ಮಾಡುತ್ತಿದ್ದೇವೆ. ದೇಶದಲ್ಲಿರುವ ಸಂತರು ಮತ್ತು ಶೋಷಿತರನ್ನು ಗುರುತಿಸಬೇಕು, ಜಾತಿ, ಬೇಧವಿಲ್ಲದೆ ಎಲ್ಲರನ್ನೂ ಮುಂದೆ ತರಬೇಕೆಂದು ಮನವಿ ಮಾಡಿದರು.
ದೇಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಸಂತರಿದ್ದಾರೆ. ಅವರು ನಮ್ಮ ಮುಂದೆ ಇದ್ದರೆ ಅವರೊಂದಿಗೆ ನಾವಿರುತ್ತೇವೆ. ದೇಶವನ್ನು ಸಂಸ್ಕಾರದತ್ತ ಕೊಂಡೊಯ್ಯಲು ಇಡೀ ದೇಶ ಒಗ್ಗೂಡಬೇಕು. ಕೆಟ್ಟ ಪದ್ಧತಿಗಳನ್ನು ಹೋಗಲಾಡಿಸಲು ಎಲ್ಲರು ಕೈ ಜೋಡಿಸಬೇಕು ಎಂದು ಸಿದ್ಧಗಂಗಾ ಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಕರೆ ನೀಡಿದರು.
ಆಶೀರ್ವಚನ ನೀಡಿ ಮಾತನಾಡಿದ ಅವರು, ಮಾನವ ಜನ್ಮ ಅತಿ ಶ್ರೇಷ್ಠವಾದದು. ಭರತ ಖಂಡದಲ್ಲಿ ಹುಟ್ಟಿದ ನಾವೆಲ್ಲ ಧನ್ಯರು. ಪ್ರೀತಿ, ಸ್ನೇಹ, ಮಮಕಾರಗಳಿಂದ ಬದುಕಬೇಕು, ನೊಂದವರಿಗೆ ಧ್ವನಿಯಾಗಬೇಕು. ನಾವೆಲ್ಲ ಜೊತೆಗೂಡಿ ಈ ಎಲ್ಲ ಕೆಲಸ ಮಾಡೋಣ. ದೇಶದಲ್ಲಿರುವ ಬಡತನ ತೊಲಗಿಸಲು ನಾವು ಪಣತೊಡೋಣ ಎಂದು ಹೇಳಿದರು.
ರವಿಶಂಕರ್ ಗುರೂಜಿ, ಆದಿಚುಂಚನಗಿರಿ ನಿರ್ಮಲಾನಂದನಾಥ ಸ್ವಾಮೀಜಿ, ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂಪತ್ ರಾಯ್, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವ ಸೋಮಣ್ಣ, ಸೊಗಡು ಶಿವಣ್ಣ ಹಾಜರಿದ್ದರು. 500ಕ್ಕೂ ಹೆಚ್ಚು ಸಂತರು ಭಾಗವಹಿಸಿದ್ದರು.

ಪೂರ್ಣಕುಂಭ ಸ್ವಾಗತ
ಸಂತರ ಸಮಾವೇಶಕ್ಕೆ ಆಗಮಿಸಿದ ಸ್ವಾಮೀಜಿಗಳಿಗೆ ಪೂರ್ಣಕುಂಭ ಸ್ವಾಗತ.

ಪೇಜಾವರ ಶ್ರೀ ಆಶೀರ್ವಾದ
ಪೇಜಾವರ ಶ್ರೀ ಆಶೀರ್ವಾದ ಪಡೆದ ಆರ್ ಎಸ್ ಎಸ್ ಪ್ರಮುಖ ಮೋಹನ್ ಭಾಗವತ್.

ಸ್ವಾಮೀಜಿಗಳೊಂದಿಗೆ ಭಾಗವತ್
ಸಿದ್ಧಗಂಗಾ ಶ್ರೀ ಮತ್ತು ಆದಿಚುಂಚನಗಿರಿ ಸ್ವಾಮೀಜಿಗಳೊಂದಿಗೆ ಮೋಹನ್ ಭಾಗವತ್.

ಸಿದ್ಧಗಂಗಾ ಶ್ರೀ ಮಾತು
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿದ್ಧಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ.

ಭಾಗವತರ ಭಾಷಣ
ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮೋಹನ್ ಭಾಗವತ್.

ಹಾಜರಿದ್ದ ಗಣ್ಯರು
ವೇದಿಕೆ ಮೇಲೆ ಹಾಜರಿದ್ದ ಸ್ವಾಮೀಜಿಗಳು ಮತ್ತು ಕೇಂದ್ರ ಸಚಿವರುಗಳು.

ಜನಸ್ತೋಮ
ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ನಾಗರಿಕರು
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications