ಲೋಕಾಯುಕ್ತ ಕಿತ್ತೊಗೆಯಲು ಬೀದಿ ಹೋರಾಟವೊಂದೇ ಬಾಕಿ!
ಬೆಂಗಳೂರು, ಜುಲೈ 11 : ಲೋಕಾಯುಕ್ತದಲ್ಲಿನ ಭ್ರಷ್ಟಚಾರದ ತನಿಖೆಯನ್ನು ಸಿಬಿಐಗೆ ವಹಿಸದೇ ಸರ್ಕಾರ ಏಕೆ ಮೌನವಾಗಿದೆ? ಎಂದು ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗೆಡೆ ಪ್ರಶ್ನಿಸಿದ್ದಾರೆ. ಲೋಕಾಯುಕ್ತ ವೈ.ಭಾಸ್ಕರಾವ್ ಅವರು ರಾಜೀನಾಮೆ ನೀಡುವಂತೆ ಬೀದಿಗಿಳಿದು ಹೋರಾಟ ಮಾಡುವುದು ಮಾತ್ರ ಬಾಕಿ ಇದೆ ಎಂದು ಹೇಳಿದ್ದಾರೆ.
ಭೂ ಕಬಳಿಕೆ ವಿರೋಧಿ ಹೋರಾಟ ಸಮಿತಿ ಶಾಸಕರ ಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಸಂತೋಷ್ ಹೆಗಡೆ ಅವರು, 'ವೈ.ಭಾಸ್ಕರರಾವ್ ಮತ್ತು ಅಶ್ವಿನ್ರಾವ್ ಅವರ ರಕ್ಷಣೆಗೆ ನಿಂತಿರುವ ಸರ್ಕಾರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸದೆ ನಾಟಕವಾಡುತ್ತಿದೆ' ಎಂದು ಆರೋಪಿಸಿದರು. [ಲೋಕಾಯುಕ್ತದಲ್ಲಿ ಇದೇನಿದು ಹಗರಣ?]

'ಸರ್ಕಾರ ಪ್ರಕರಣದ ತನಿಖೆಯನ್ನು ಎಸ್ಐಟಿಗೆ ವಹಿಸಲಾಗಿದೆ ಎಂದು ಸ್ಪಷ್ಟನೆ ನೀಡುತ್ತಿದೆ. ಎಸ್ಐಟಿ ಪೊಲೀಸ್ ಸಂಸ್ಥೆಯಲ್ಲ, ಎಫ್ಐಆರ್ ದಾಖಲು ಮಾಡಿ ಆರೋಪಿಗಳನ್ನು ಬಂಧಿಸುವ ಅಧಿಕಾರವಿಲ್ಲ. ಎಸ್ಐಟಿ ತನಿಖೆಯಿಂದ ನಡೆದಿರುವ ಭ್ರಷ್ಟಾಚಾರದ ಹಗರಣದ ಸತ್ಯಾಂಶ ಹೊರಬರುತ್ತದೆಯೇ?' ಎಂದು ಸಂತೋಷ್ ಹೆಗಡೆ ಪ್ರಶ್ನಿಸಿದರು. [ಲೋಕಾಯುಕ್ತದಲ್ಲೇ ಭ್ರಷ್ಟಾಚಾರ, ಮುಂದೇನು?]
'ಲೋಕಾಯುಕ್ತ ನ್ಯಾಯಮೂರ್ತಿಗಳಾದ ವೈ.ಭಾಸ್ಕರರಾವ್ ಅವರು ಹಣ ಪಡೆಯದೇ ಇರಬಹುದು. ಆದರೆ, ಅವರ ಪುತ್ರ ಅಕ್ರಮವೆಸಗಿರುವ ಬಗ್ಗೆ ಸಾಕಷ್ಟು ಪುರಾವೆಗಳಿವೆ. ಆದ್ದರಿಂದ ವೈ.ಭಾಸ್ಕರಾವ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು' ಎಂದು ಸಂತೋಷ್ ಹೆಗಡೆ ಅವರು ಒತ್ತಾಯಿಸಿದರು. [ಲೋಕಾಯುಕ್ತರ ಪದಚ್ಯುತಿ ಹೇಗೆ?]
'ರಾಜೀನಾಮೆ ನೀಡುವಂತೆ ಹಲವು ವಿಧದಲ್ಲಿ ವೈ.ಭಾಸ್ಕರಾವ್ ಅವರ ಮೇಲೆ ಒತ್ತಡ ಹೇರಲಾಗಿದೆ. ಇನ್ನು ಬೀದಿಗಿಳಿದು ಹೋರಾಟ ಮಾಡುವುದು ಮಾತ್ರ ಬಾಕಿ ಇದೆ. ನೈತಿಕ ಹೊಣೆ ಹೊತ್ತು ಅವರು ರಾಜೀನಾಮೆ ನೀಡದಿದ್ದರೆ, ಅವರು ಕಚೇರಿ ಪ್ರವೇಶಿಸದಂತೆ ಹೋರಾಟ ಮಾಡಬೇಕಾಗುತ್ತದೆ' ಎಂದು ಸಂತೋಷ್ ಹೆಗಡೆ ಅವರು ಹೇಳಿದರು.
ಲೋಕಾಯುಕ್ತದ ಪಾವಿತ್ರ್ಯತೆ ಹಾಳಾಗಿದೆ : ಪತ್ರಿಕಾಗೋಷ್ಠಿಯಲ್ಲಿದ್ದ ಭೂ ಕಬಳಿಕೆ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಎ.ಟಿ.ರಾಮಸ್ವಾಮಿ ಅವರು ಮಾತನಾಡಿ, ಭ್ರಷ್ಟಾಚಾರದಂತಹ ಪ್ರಕರಣಗಳ ಬಗ್ಗೆ ದೂರು ನೀಡಲು ಇದ್ದ ಏಕೈಕ ಸಂಸ್ಥೆ ತನ್ನ ಪಾವಿತ್ರ್ಯತೆಯನ್ನು ಕಳೆದುಕೊಳ್ಳುತ್ತಿರುವುದು ಇಂದಿನ ವ್ಯವಸ್ಥೆಗೆ ಹಿಡಿದ ಕನ್ನಡಿಯಾಗಿದೆ ಎಂದರು.
ಲೋಕಾಯುಕ್ತರು ಕಚೇರಿಗೆ ಬರುವುದು ತಡೆಯೋಣ : ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರು ಮಾತನಾಡಿ, 'ವ್ಯವಸ್ಥಿತವಾಗಿ ಅಶ್ವಿನ್ರಾವ್ ಅವರನ್ನು ರಕ್ಷಿಸುವ ಕೆಲಸ ನಡೆಯುತ್ತಿದೆ. ರಾಜೀನಾಮೆ ನೀಡದೆ ಭಂಡತನ ತೋರಿಸುತ್ತಿರುವ ವೈ.ಭಾಸ್ಕರರಾವ್ ಅವರನ್ನು ಲೋಕಾಯುಕ್ತ ಕಚೇರಿಗೆ ಪ್ರವೇಶ ಮಾಡದಂತೆ ತಡೆಯುವ ಹೋರಾಟ ನಡೆಸಬೇಕಾಗಿದೆ ಎಂದರು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications