Santosh Lad: ಸಂತೋಷ್ ಲಾಡ್ ಅಂದರೆ ಫೈವ್ ಸ್ಟಾರ್ ಇದ್ದಂಗೆ; ಸಂತೋಷ್ ಲಾಡ್ ಹಾಡಿ ಹೊಗಳಿದ ಶಾಸಕ ಕೋನರೆಡ್ಡಿ
ಬೆಂಗಳೂರು: ಸಂತೋಷ್ ಲಾಡ್ ಎಂದರೆ ಫೈವ್ ಸ್ಟಾರ್ ಇದ್ದಂಗೆ ಎಂದು ಸಂತೋಷ್ ಲಾಡ್ ಅವರನ್ನು ಶಾಸಕ ಕೋನರೆಡ್ಡಿ ಅವರು ಹಾಡಿ ಹೊಗಳಿದ್ದಾರೆ. ವಿಧಾನಸಭೆಯ ಕಲಾಪದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಕಾರ್ಯವೈಖರಿಯನ್ನು ನವಲಗುಂದ ಶಾಸಕರಾದ ಎನ್ ಎಚ್ ಕೋನರೆಡ್ಡಿ ಅವರು ಮನತುಂಬಿ ಪ್ರಶಂಸಿಸಿದರು.
ಸಂತೋಷ್ ಲಾಡ್ ಎಂದರೆ ಫೈವ್ ಸ್ಟಾರ್ ಇದ್ದಂಗೆ. ಕಳೆದ ಮೂವತ್ತು ವರ್ಷಗಳಿಂದ ವಿಧಾನಸಭೆ ಹಾಗೂ ವಿಧಾನ ಪರಿಷತ್ನಲ್ಲಿ ಇದ್ದೇನೆ. ಕಾರ್ಮಿಕ ಇಲಾಖೆಯ ಸಚಿವರು ಯಾರು ಅಂತಾನೆ ತಿಳಿಯುತ್ತಿರಲಿಲ್ಲ. ಈಗ ಸಂತೋಷ್ ಲಾಡ್ ಅವರು ಸಚಿವರಾಗಿದ್ದಾರೆ. ಅವರು ತಮ್ಮ ಕೆಲಸದಿಂದ ಎಲ್ಲರ ಮೆಚ್ಚುಗೆ ಗಳಿಸಿದ್ದಾರೆ ಎಂದರು.

ಅವರನ್ನು ಕಾರ್ಮಿಕ ಸಚಿವರಾಗಿ ನೇಮಿಸಿದ ಏನಪ್ಪ ಇಂತಹ ಖಾತೆ ಕೊಟ್ಟರು, ಏನು ಮಾಡ್ತಿಯಾ ಎಂದಿದ್ದೆ. ನಾನು ಕೆಲಸ ಮಾಡಿ ತೋರಿಸುತ್ತೇನೆ ಎಂದಿದ್ದರು. ಅವರು ಗಿಗ್ ಕಾಯಿದೆ ತಂದರು ಇಡೀ ದೇಶವೇ ಅದನ್ನು ಮೆಚ್ಚಿತು. ರಾಹುಲ್ ಗಾಂಧಿ ಅವರು ಪ್ರಶಂಸಿದರು, ಮುಖ್ಯಮಂತ್ರಿಗಳು ಅದನ್ನು ಹೊಗಳಿದರು. ಆ ಕಾಯಿದೆಯಿಂದ ಸಾಕಷ್ಟು ಕಾರ್ಮಿಕರಿಗೆ ಒಳ್ಳೆಯದಾಗಿದೆ ಎಂದರು.
ಹೊಸ ಹೊಸ ಯೋಜನೆಗಳು: ಕಾರ್ಮಿಕ ಇಲಾಖೆಯಲ್ಲಿ ಹೊಸ ಹೊಸ ಯೋಜನೆ ಜಾರಿ ಮಾಡಿ ಇವತ್ತು ಕಾರ್ಮಿಕ ಇಲಾಖೆ ಇದೇ ಎಂಬುದನ್ನು ತೋರಿಸಿದರು. ಕೂಲಿ ಕಾರ್ಮಿಕರ ಮಕ್ಕಳಿಗೆ 104 ವಸತಿ ಶಾಲೆಗಳನ್ನು ಮಂಜೂರು ಮಾಡಿದರು. ನಮ್ಮ ಜಿಲ್ಲೆಗೂ ಶಾಲೆ ಮಂಜೂರು ಮಾಡಿದ್ದಾರೆ ಎಂದು ವಿವರಿಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications