ಲಾಡ್ ರಾಜೀನಾಮೆ, ಕಾಂಗ್ರೆಸ್ ಮೊದಲ ವಿಕೆಟ್ ಪತನ
ಬೆಂಗಳೂರು, ನ.22 : ಅಕ್ರಮ ಗಣಿಗಾರಿಕೆ ಆರೋಪ ಎದುರಿಸುತ್ತಿರುವ ವಾರ್ತಾ ಮತ್ತು ಮೂಲಸೌಕರ್ಯ ಸಚಿವ ಸಂತೋಷ್ ಲಾಡ್ ಅವರು ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಅವರು, ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಖಾಸಗಿ ಕಾರಿನಲ್ಲಿ ತೆರಳಿ ರಾಜೀನಾಮೆ ಸಲ್ಲಿಸಿದರು.
ಶುಕ್ರವಾರ ಬೆಂಗಳೂರಿಗೆ ಆಗಮಿಸಿದ ಕಲಘಟಗಿ ಕ್ಷೇತ್ರದ ಶಾಸಕ ಸಂತೋಷ್ ಲಾಡ್ 5 ಗಂಟೆಯ ಸುಮಾರಿಗೆ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿ 20 ನಿಮಿಷಗಳ ಕಾಲ ಚರ್ಚೆ ನಡೆಸಿದರು. ನಂತರ ಸಂಜೆ 7.30ಕ್ಕೆ ಪುನಃ ಆಗಮಿಸಿ, ರಾಜೀನಾಮೆ ಪತ್ರವನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿದರು. ಈ ಮೂಲಕ ಆರು ತಿಂಗಳ ಸಿದ್ದರಾಮಯ್ಯ ಸರ್ಕಾರದಲ್ಲಿ ಮೊದಲ ವಿಕೆಟ್ ಪತನಗೊಂಡಂತಾಗಿದೆ.

ಗುರುವಾರ ಸಂಜೆಯೇ ಸಿಎಂ ಸಿದ್ದರಾಮಯ್ಯ ಸಂತೋಷ್ ಲಾಡ್ ಅವರಿಗೆ ರಾಜಿನಾಮೆ ನೀಡುವಂತೆ ಸೂಚನೆ ನೀಡಿ, ಕಾಲಾವಕಾಶ ನೀಡಿದ್ದರು. ಶುಕ್ರವಾರ 5 ಗಂಟೆಗೆ ಸಿಎಂ ಭೇಟಿಯಾಗಿದ್ದ ಸಂತೋಷ್ ಲಾಡ್ ರಾಜೀನಾಮೆ ಕುರಿತಾಗಿ ಚರ್ಚೆ ನಡೆಸಿದ್ದರು. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಲಾಡ್ ರಾಜೀನಾಮೆ ನೀಡಬೇಕಾದ ಅನಿವಾರ್ಯತೆ ಬಗ್ಗೆ ವಿವರಣೆ ನೀಡಿದ್ದರು. ನಂತರ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ನಿವಾಸಕ್ಕೆ ತೆರಳಿ ಅವರು ಮಾತುಕತೆ ನಡೆಸಿದ್ದರು. (ಲಾಡ್ ರಾಜೀನಾಮೆಗೆ ಇವರು ಪ್ರಮುಖ ಕಾರಣ)
ಸ್ವ ಇಚ್ಛೆಯಿಂದ ರಾಜೀನಾಮೆ : ಕಾಂಗ್ರೆಸ್ ಪಕ್ಷಕ್ಕೆ ಆಗುವ ಮುಜುಗರವನ್ನು ತಪ್ಪಿಸಲು ರಾಜೀನಾಮೆ ನೀಡುತ್ತಿದ್ದೇನೆ. ಪ್ರಕರಣದ ಕುರಿತ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಲು ನಿರ್ಧರಿಸಿದೆ. ತನಿಖೆಗೆ ಸಹಕರಿಸುವ ನಿಟ್ಟಿನಲ್ಲಿ ರಾಜೀನಾಮೆ ನೀಡಿದ್ದೇನೆ, ಯಾವುದೇ ಒತ್ತಡಕ್ಕೆ ಮಣಿದಿಲ್ಲ ಎಂದು ರಾಜೀನಾಮೆ ನಂತರ ಮಾಜಿ ಸಚಿವ ಸಂತೋಷ್ ಲಾಡ್ ಹೇಳಿದರು.
ಬಿಜೆಪಿ ಸ್ವಾಗತ : ವಾರ್ತಾ ಮತ್ತು ಮೂಲಭೂತ ಸೌಕರ್ಯ ಸಚಿವ ಸ್ಥಾನಕ್ಕೆ ಸಂತೋಷ್ ಲಾಡ್ ರಾಜೀನಾಮೆ ನೀಡಿದ್ದನ್ನು ಬಿಜೆಪಿ ಸ್ವಾಗತಿಸಿದೆ. ಈ ಕುರಿತು ಹೇಳಿಕೆ ನೀಡಿರುವ ಬಿಜೆಪಿ ವಕ್ತಾರ ಸುರೇಶ್ ಕುಮಾರ್, ತಡವಾಗಿಯಾದರೂ ಸಿಎಂ ಸಿದ್ದರಾಮಯ್ಯ ಉತ್ತಮ ನಿರ್ಧಾರ ಕೈಗೊಂಡಿದ್ದಾರೆ ಇದು ನಮ್ಮ ಹೋರಾಟಕ್ಕೆ ಸಿಕ್ಕ ಜಯ ಎಂದು ಹೇಳಿದ್ದಾರೆ.
-
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ












Click it and Unblock the Notifications