ಗಡ್ಕರಿಗೆ ಶಿರಾಡಿ ಘಾಟ್, ಪೀಣ್ಯ- ಹೊಸೂರು ಸುರಂಗ ರಸ್ತೆ ನಿರ್ಮಾಣಕ್ಕೆ ಪ್ರಸ್ತಾವ ಸಲ್ಲಿಸಿದ ಸತೀಶ್ ಜಾರಕಿಹೊಳಿ
ನವದೆಹಲಿ, ಜೂನ್ 28: ರಾಜ್ಯದ ಪ್ರಮುಖ ಮಾರ್ಗವಾದ ಶಿರಾಡಿ ಘಾಟ್ ಟನಲ್ ಹಾಗೂ ತುಮಕೂರು ರಸ್ತೆಯ ಪೀಣ್ಯ ಕೈಗಾರಿಕಾ ಪ್ರದೇಶದಿಂದ ತಮಿಳುನಾಡಿನ ಗಡಿ ಪ್ರದೇಶ ಹೊಸೂರುವರೆಗೆ ಸುರಂಗ ರಸ್ತೆಯನ್ನು ನಿರ್ಮಾಣ ಸಂಬಂಧ ರಾಜ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಪ್ರಸ್ತಾವನೆಯನ್ನು ಸಲ್ಲಿಕೆ ಮಾಡಿದರು.
ಸೋಮವಾರ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ತುಮಕೂರು ರಸ್ತೆಯ ಪೀಣ್ಯ ಕೈಗಾರಿಕಾ ಪ್ರದೇಶದಿಂದ ತಮಿಳುನಾಡಿನ ಗಡಿ ಪ್ರದೇಶ ಹೊಸೂರುವರೆಗೆ ಸುರಂಗ ರಸ್ತೆಯನ್ನು ನಿರ್ಮಾಣ ಮಾಡುವಂತೆ ಪ್ರಸ್ತಾವನೆಯನ್ನು ಸಲ್ಲಿಕೆ ಮಾಡಿದರು.

ಈ ವೇಳೆ ರಾಜ್ಯದಲ್ಲಿ ಒಟ್ಟು 14 ಯೋಜನೆಗಳನ್ನು ನಿರ್ಮಾಣ ಮಾಡುಂತೆ ಕೇಂದ್ರ ಸಚಿವರಿಗೆ ಮನವಿಯನ್ನು ಸಲ್ಲಿಕೆ ಮಾಡಿದರು. ಇಲ್ಲಿ ಫ್ಲೈಓವರ್ ರಸ್ತೆಗಳು, ಘಾಟ್ ರಸ್ತೆಗಳು, ಸುರಂಗ ರಸ್ತೆಗಳು ಹಾಗೂ ಇತರೆ ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಮಾಣ ಮಾಡುವಂತೆ ಸೀತ್ ಜಾರಕಿಹೊಳಿ ಸಲ್ಲಿಸಿರುವ ಪ್ರಸ್ತಾವನೆ ಒಳಗೊಂಡಿದೆ.
ಜಾರಕಿಹೊಳಿ ಸಲ್ಲಿಸಿರುವ ಪ್ರಸ್ತಾವನೆಯಲ್ಲಿ ರಾಜ್ಯದ ಪ್ರಮುಖ ಮಾರ್ಗವಾದ ಶಿರಾಡಿ ಘಾಟ್ ಟನಲ್, ಹೊನ್ನಾವರ- ಕುಮುಟಾ ಫ್ಲೈ ಓವರ್, ಬೆಂಗಳೂರಿನಲ್ಲಿ ಪಿಣ್ಯ- ಹೊಸೂರು ಸುರಂಗ ಮಾರ್ಗ ಹಾಗೂ ಬೆಂಗಳೂರು ಕೇಂದ್ರ ಭಾಗದಿಂದ ಹೆಬ್ಬಾಳಕ್ಕೆ ಸಂಪರ್ಕ ಕಲ್ಪಿಸುವಂತೆ (ತುಮಕೂರು ರಸ್ತೆಯಲ್ಲಿರುವ ಡಾ. ಶಿವಕುಮಾರ್ ಸ್ವಾಮೀಜಿ ಮೇಲ್ಸೇತುವೆ ಮಾದರಿ) ಫ್ಲೈಓವರ್ ನಿರ್ಮಾಣ ಮಾಡುವಂತೆ ಹಾಗೂ ಕಲಬುರಗಿ ನಗರಕ್ಕೆ ಬೈಪಾಸ್ ರಸ್ತೆ ನಿರ್ಮಾಣ ಮಾಡುವಂತೆಯೂ ಪ್ರಸ್ತಾವನೆಯಲ್ಲಿ ಮನವಿ ಮಾಡಲಾಗಿದೆ.
ಅದೇ ರೀತಿ ಬೆಳಗಾವಿ ನಗರ- ಪುಣೆ -ಬೆಂಗಳೂರು ರಸ್ತೆ ಉನ್ನತೀಕರಣ ಮಾಡಬೇಕು. ರಾಯಚೂರು, ಗದಗ ಮತ್ತು ಶಿವಮೊಗ್ಗ ನಗರಗಳಿಗೆ ರಿಂಗ್ ರಸ್ತೆಯನ್ನು ನಿರ್ಮಾಣ ಮಾಡಬೇಕು. ಮೈಸೂರು ನಗರದ ಮಣಿಪಾಲ್ ಆಸ್ಪತ್ರೆ ಜಂಕ್ಷನ್ ನಲ್ಲಿ ಫೈಓವರ್ ನಿರ್ಮಾಣ ಮಾಡುವಂತೆಯೂ ಮನವಿ ಮಾಡಲಾಗಿದೆ. ಈ ಎಲ್ಲ ಮನವಿ ಪುರಸ್ಕರಿಸಿದಲ್ಲಿ ರಾಜ್ಯದ ಪ್ರಮುಖ ನಗರಗಳಲ್ಲಿ ಉಂಟಾಗುತ್ತಿದ್ದ ಸಂಚಾರ ದಟ್ಟಣೆ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದು ಅವರು ಮನವಿ ಸಲ್ಲಿಸಿದ್ದಾರೆ.
ಬೆಂಗಳೂರು - ಮೈಸೂರು ಎಕ್ಸ್ಪ್ರೆಸ್ ಮಾರ್ಗವನ್ನು ಕೇಂದ್ರ ಸರ್ಕಾರ 9 ಸಾವಿರ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ. ಆದರೆ, ಈ ಹಿಂದೆ ಸಂಚಾರಕ್ಕೆ ಅನುಕೂಲವಾಗಿದ್ದ ಹಳೆಯ ಬೆಂಗಳೂರು- ಮೈಸೂರು ರಸ್ತೆಯನ್ನೂ ಅಭಿವೃದ್ಧಿ ಮಾಡಬೇಕು. ಈ ಹಳೆಯ ರಸ್ತೆಯನ್ನು ಅಭಿವೃದ್ಧಿ ಮಾಡುವುದರಿಂದ ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ, ಮೈಸೂರು ನಗರದ ಜನರಿಗೆ ಸಹಕಾರಿ ಆಗಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಮನವಿ ಸಲ್ಲಿಸಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications