ರಂಗಸೌರಭ: ಕರ್ನಾಟಕದ ಹವ್ಯಾಸಿ ರಂಗಭೂಮಿಯ ಯುವ ಪ್ರತಿಭೆಗಳ ರಾಜ್ಯಮಟ್ಟದ ಸ್ಪರ್ಧೆ
ಹವ್ಯಾಸಿ ರಂಗಭೂಮಿಯಲ್ಲಿ ವೈಶಿಷ್ಠ್ಯತೆ ಹಾಗೂ ವಿಭಿನ್ನ ರಂಗಪ್ರಯೋಗಗಳ ಮೂಲಕ ಹೆಸರುವಾಸಿಯಾಗಿರುವ ರಂಗಸೌರಭ ಕಾಲೇಜು ರಂಗಭೂಮಿಯನ್ನು ಸದೃಢಗೊಳಿಸಲು ಅವ್ಯಾಹತ ಪ್ರಯತ್ನ ನಡೆಸುತ್ತಿದೆ. ಈ ಪ್ರಯತ್ನದ ಸಾಫಲ್ಯತೆಯೇ ಸೌರಭ - ರಾಜ್ಯಮಟ್ಟದ ಅಂತರ ಕಾಲೇಜು ರಂಗಸ್ಪರ್ಧೆಗಳು.
ಸೌರಭ ಕಾರ್ಯಕ್ರಮವು ರಂಗಾಸಕ್ತ ಯುವ ಮನಸ್ಸುಗಳನ್ನು ಒಂದೇ ಸೂರಿನಡಿಯಲ್ಲಿ ಕಲೆಯುವಿಕೆಯ ಅತ್ಯದ್ಭುತ ಪರಿಕಲ್ಪನೆಯಾಗಿದೆ. ಈ ಸ್ಪರ್ಧೆಯಲ್ಲಿ ಭಾಗವಹಿಸಲು ರಾಜ್ಯದ ವಿವಿಧೆಡೆಯಿಂದ ಈಗಾಗಲೇ ನೂರಾರು ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಹತ್ತಾರು ಕಾಲೇಜುಗಳ ಕಲಾತಂಡಗಳು ಪಾಲ್ಗೊಳ್ಳುತ್ತಿವೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಹಾಗೂ ಎಂಜಿನಿಯರಿಂಗ್ ಸೇರಿದಂತೆ ಪದವಿ ಕಾಲೇಜುಗಳು ನಾಟಕ ಪ್ರದರ್ಶಿಸಲಿವೆ.

ಸೌರಭ ರಂಗಸ್ಪರ್ಧೆಯಲ್ಲಿ ನಾಟಕ ಜೊತೆಗೆ ಮೂಕಾಭಿನಯ, ಜಾನಪದ ನೃತ್ಯ ಹಾಗೂ ರಂಗಗೀತೆಗಳನ್ನು ಒಳಗೊಂಡ ರಂಗಗೀತೆ ದೃಶ್ಯಾವಳಿ ಸ್ಪರ್ಧೆಯು ಸಹ ನಡೆಯಲಿದೆ. ವೈಯಕ್ತಿಕ ವಿಭಾಗದ ಸ್ಪರ್ಧೆಗಳು ಸೇರಿದಂತೆ ಒಟ್ಟು 20 ವಿವಿಧ ಸ್ಪರ್ಧೆಗಳು ನಡೆಯಲಿದ್ದು ವಿಜೇತರಿಗೆ ಫೆಬ್ರವರಿ 28 ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಲಾಗುತ್ತದೆ.
ಎಲ್ಲಾ ಸ್ಪರ್ಧೆಗಳಲ್ಲಿಯೂ ಅತ್ಯುತ್ತಮ ನಿರ್ವಹಣೆ ತೋರಿದ ಕಾಲೇಜಿಗೆ ಪದ್ಮಭೂಷಣ ಡಾ. ರಾಜ್ಕುಮಾರ್ ಸರ್ವೋತ್ತಮ ಕಾಲೇಜು ಪಾರಿತೋಷಕವನ್ನು ನೀಡಲಾಗುತ್ತಿದೆ. ಈ ಪಾರಿತೋಷಕವನ್ನು ಪುನೀತ್ ರಾಜ್ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಪ್ರಾಯೋಜಿಸಿದ್ದಾರೆ. 70 ಕೆಜಿ ತೂಕವುಳ್ಳ ಕಂಚಿನ ಮಹಾನಟನ ಮೂರ್ತಿಯನ್ನು ಕನ್ನಡ ನಾಡಿನ ಹೆಸರಾಂತ ಕಲಾ ನಿರ್ದೇಶಕ ಶಶಿಧರ ಅಡಮ ಅವರು ನಿರ್ಮಿಸಿಕೊಟ್ಟಿದ್ದಾರೆ.

ನಟಿ ಗಿರಿಜಾ ಲೋಕೇಶ್ ಅವರ ಹೆಸರಿನಲ್ಲಿ ಕೊಡ ಮಾಡುವ ಪ್ರಶಸ್ತಿಯನ್ನು ನಟ ಹಾಗೂ ನಿರ್ಮಾಪಕ ಸೃಜನ್ ಲೋಕೇಶ್ ಅವರು ಪ್ರಾಯೋಜಿಸಿದ್ದಾರೆ. ಇದಲ್ಲದೇ ನಾಟಕ ವಿವಿಧ ವಿಭಾಗಗಳಿಗೆ ನೀಡುವ ಪ್ರಶಸ್ತಿಯನ್ನು ನಾಡಿನ ಹೆಸರಾಂತ ಹವ್ಯಾಸಿ ರಂಗ ತಂಡಗಳು ನೀಡಿವೆ.
ಸೌರಭ ರಂಗ ಸ್ಪರ್ಧೆಗಳು ವಿಜೃಂಭಣೆಯಿಂದ ನಡೆದಿದೆ. ಇಲ್ಲಿಯವರೆಗೂ ಕಾರ್ಯಕ್ರಮದಲ್ಲಿ ಹಿರಿಯ ನಟ ಅನಂತ್ ನಾಗ್, ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ, ರಾಜ್ ಬಿ ಶೆಟ್ಟಿ, ಕಿಶೋರ್, ಶರತ್ ಲೋಹಿತಾಶ್ವ,ಶ್ವೇತಾ ಶ್ರೀವಾತ್ಸವ್, ಅಭಿಷೇಕ್ ಅಂಬರೀಷ್, ಸಪ್ತಮಿ ಗೌಡ ಮುಂತಾದ ಖ್ಯಾತನಾಮರು ಆಗಮಿಸಿ ರಂಗಾಸಕ್ತ ಯುವಜನತೆಗೆ ಉತ್ಸಾಹ ತುಂಬಿದ್ದಾರೆ.
'ಸೌರಭ 26'ಕ್ಕೆ ವೇದಿಕೆ ಸಿದ್ಧಗೊಂಡಿದ್ದು ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಫೆಬ್ರುವರಿ 11 ರಿಂದ 28 ರವರೆಗೆ ವಿವಿಧ ರಂಗ ಸ್ಪರ್ಧೆಗಳು ನಡೆಯಲಿವೆ. ಫೆಬ್ರವರಿ 11ರ ಸಂಜೆ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿರುವ ಸಂಸ ರಂಗಮಂದಿರದಲ್ಲಿ ನಡೆಯಲಿರುವ ಉದ್ಘಾಟನಾ ಸಮಾರಂಭವನ್ನು ಹಿರಿಯ ರಂಗಕರ್ಮಿ ಹಾಗೂ ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀ ಅವರು ನೆರವೇರಿಸಿ ಕೊಡಲಿದ್ದಾರೆ. ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷರಾದ ಶ್ರೀಯುತ ನಾಗರಾಜ ಮೂರ್ತಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಸಹಯೋಗದಲ್ಲಿ ನಡೆಯುತ್ತಿರುವ ಸೌರಭ 26 ರ ಆವೃತ್ತಿಯಲ್ಲಿ ಸರಿಸುಮಾರು ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಆಗಮಿಸುವ ನಿರೀಕ್ಷೆ ಇದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ













Click it and Unblock the Notifications