Get Updates
Get notified of breaking news, exclusive insights, and must-see stories!

Lock Down: ಬಟ್ಟೆ ತೊಳೆದು, ಇಸ್ತ್ರಿ ಮಾಡುವ 6 ಲಕ್ಷ ಮಡಿವಾಳರನ್ನು ರಕ್ಷಿಸಿ

ಬೆಂಗಳೂರು ಏಪ್ರಿಲ್‌ 3: ವಿಶ್ವದಲ್ಲಿ ಮಹಾಮಾರಿಯಾಗಿ ಹರಡುತ್ತಿರುವ ಕೊರೋನಾ ವೈರಸ್ ಸೋಂಕು ತಡೆಯ ಮುನ್ನೆಚ್ಚರಿಕಾ ಕ್ರಮವಾಗಿ ದೇಶಾದ್ಯಂತ ಲಾಕ್ ಡೌನ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ವೃತ್ತಿನಿರತ ಮಡಿವಾಳರಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಎಂದು ರಾಜ್ಯ ಮಡಿವಾಳರ ಸಂಘ ರಾಜ್ಯ ಸರ್ಕಾರವನ್ನು ಮನವಿ ಮಾಡಿದೆ.

Recommended Video

      ದೇಶದ ಜನತೆಗೆ ಕರೆ ಕೊಟ್ಟ ಮೋದಿ..! | ಈ ಕರೆಯ ಹಿಂದಿನ ಉದ್ದೇಶ ಏನು..? | Narendra Modi

      ರಾಜ್ಯ ಸರ್ಕಾರ ಈಗಾಗಲೇ ಲಾಕ್ ಡೌನ್ ನಿಂದ ಕಷ್ಟಕ್ಕೊಳಕ್ಕಾಗಿರುವ ಜನರಿಗೆ ಸರ್ಕಾರ ನೆರವು ಒದಗಿಸುತ್ತಿದೆ. ಕರ್ನಾಟಕದಲ್ಲಿ ಸುಮಾರು 10 ಲಕ್ಷ ಜನ ಮಡಿವಾಳರಿದ್ದಾರೆ. ಇವರಲ್ಲಿ ಸುಮಾರು 6 ಲಕ್ಷ ಜನ ಕುಲಕಸುಬನ್ನೇ ನಂಬಿಕೊಂಡಿದ್ದು, ಬಡತನ ರೇಖೆಗಿಂತ ಕೆಳಗಿನವರಾಗಿದ್ದರು. ಅನೇಕರು ಅಸಂಘಟಿತ ಕಾರ್ಮಿಕರ ಪಟ್ಟಿಯಲ್ಲಿ ಕೂಡ ನೊಂದಣಿ ಮಾಡಿಸಿಲ್ಲ. ಬಟ್ಟೆ ತೊಳೆದು ಐರನ್ ಮಾಡಿ ಜೀವನ ಸಾಗಿಸುತ್ತಿರುವ ಮಡಿವಾಳರು, ಸರ್ಕಾರದ ಸವಲತ್ತುಗಳನ್ನು ಪಡೆಯುವಲ್ಲಿ ವಿಫಲರಾಗಿದ್ದಾರೆ ಎಂದು ರಾಜ್ಯ ಮಡಿವಾಳರ ಸಂಘದ ಅಧ್ಯಕ್ಷರಾದ ಸಿ ನಂಜಪ್ಪ ಹೇಳಿದ್ದಾರೆ.

      Save Dhobi community during the Coronavirus Lock Down

      ಸರ್ಕಾರ ಮಡಿವಾಳ ಜನಾಂಗವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯಿಸುತ್ತಿದೆ. ಕಳೆದ 72 ವರ್ಷದಲ್ಲಿ ಮಡಿವಾಳದ ಜನಾಂಗವನ್ನು ಪ್ರತಿನಿಧಿಸುವ ಶಾಸಕರು, ಸಂಸದರು, ರಾಜ್ಯಸಭಾ ಸದಸ್ಯರಾಗಲಿ ಇಲ್ಲದಿರುವುದು ಸಮುದಾಯವನ್ನು ನಿರ್ಲಕ್ಷ್ಯಿಸಿರುವುದಕ್ಕೆ ಸಾಕ್ಷಿ. ಆದ್ದರಿಂದ ತಮಗೆ ತಕ್ಷಣ ನ್ಯಾಯ ಒದಗಿಸಬೇಕೆಂದು ಈ ಮೂಲಕ ಸರ್ಕಾರಕ್ಕೆ ಮನವಿ ಮಾಡುತ್ತಿದ್ದೇವೆ ಎಂದು ಸಂಘದ ಉಪಾಧ್ಯಕ್ಷ ಆರ್‌ ವಿ ರಾಜಣ್ಣ ಹಾಗೂ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಯಲ್ಲಪ್ಪ ಮನವಿ ಮಾಡಿದ್ದಾರೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+