ಕ್ಷೌರಿಕರನ್ನೂ ಪರಿಶಿಷ್ಟ ಪಂಗಡ (ಎಸ್ಟಿ) ಗೆ ಸೇರಿಸಲು ಮನವಿ
ಬೆಂಗಳೂರು ಸೆಪ್ಟೆಂಬರ್ 30: ಕುರುಬ ಸಮಾಜವನ್ನು ಪರಿಶಿಷ್ಠ ಪಂಗಡಕ್ಕೆ ಸೇರ್ಪಡೆ ಮಾಡಿ ಎಂದು ಪಕ್ಷಾತೀತವಾಗಿ ಹೋರಾಟ ಮಾಡುತ್ತಿರುವ ಸಚಿವರು ಹಾಗೂ ಮಖಂಡರುಗಳು ಕ್ಷೌರಿಕರನ್ನೂ ಈ ಹೋರಾಟದಲ್ಲಿ ಸೇರಿಸಿಕೊಳ್ಳಿ ಎಂದು ಕ್ಷೌರಿಕ ಮೀಸಲಾತಿ ಒಕ್ಕೂಟದ ರಾಜ್ಯಾಧ್ಯಕ್ಷ ಎಂ ಬಿ ಶಿವಕುಮಾರ್ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಅಪಾರ ಬೆಂಬಲವನ್ನು ಹೊಂದಿರುವ ಕುರುಬ ಸಮಾಜವನ್ನು ಪರಿಶಿಷ್ಠ ಪಂಗಡಕ್ಕೆ ಸೇರ್ಪಡೆ ಮಾಢುವಂತೆ ಸಚಿವರಾದ ಈಶ್ವರಪ್ಪ ಮತ್ತು ಕಾಗಿನೆಲೆ ಗುರು ಪೀಠದ ಸ್ವಾಮೀಜಿಗಳ ನೇತೃತ್ವದಲ್ಲಿ ತೀರ್ಮಾನಿಸಲಾಗಿದೆ. ಇದಕ್ಕೆ ಮಾಜಿ ಮಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಕೂಡಾ ಬೆಂಬಲ ವ್ಯಕ್ತಪಡಿಸಿದ್ದಾರೆ. ಪಕ್ಷಾತೀತವಾಗಿ ಈ ರೀತಿ ಹೋರಾಟಕ್ಕೆ ಮುಂದಾಗಿರುವುದು ಸ್ವಾಗತಾರ್ಹ ವಿಷಯವಾಗಿದೆ.
ಇದೇ ವೇಳೆ, ಹಿಂದುಳಿದ ವರ್ಗದಲ್ಲಿ ಅಪಮಾನಕ್ಕೆ, ಜಾತಿನಿಂದನೆಗೆ, ಅಪಹಾಸ್ಯಕ್ಕೆ, ಕ್ಷೌರಿಕ ಸಮಾಜಕ್ಕೆ ಧ್ವನಿ ಇಲ್ಲದೆ, ಜಾತಿಯ ಶಕ್ತಿ ಇಲ್ಲದೆ, ಶಕ್ತಿ ಹೀನವಾದ ನಿರ್ಗತಿಕ ಕ್ಷೌರಿಕ ಸಮಾಜಕ್ಕೆ ಸ್ವಾತಂತ್ರ್ಯ ಬಂದು 73 ವರ್ಷ ಕಳೆದರೂ ಕೂಡಾ ಈಗಲೂ ಹಳ್ಳೀಗಾಡಿನಲ್ಲಿ ದಲಿತರಿಗೆ ಮುಕ್ತವಾಗಿ ಕ್ಷೌರ ಸೇವೆಯನ್ನು ಮಾಡಲಿಕ್ಕೆ ಆಗುತ್ತಿಲ್ಲ ಎಂದರೆ ಸರಕಾರದಿಂದ ಸೌಲಭ್ಯ ತಗೆದುಕೊಳ್ಳೊದಕ್ಕೆ ಆಗುತ್ತೆ? ಈ ದೇಶದಲ್ಲೇ ತಿರಸ್ಕರಿಸಲ್ಪಟ್ಟ ಸಮಾಜ ಎಂದರೆ ಕ್ಷೌರಿಕ ಸಮಾಜ.

ಆದ್ದರಿಂದ ನಮ್ಮ ಈ ಸಮಾಜವನ್ನು ತಮ್ಮ ಹೋರಾಟದ ಜೊತೆಯಲ್ಲಿ ಸೇರಿಸಿಕೊಂಡು ನಮಗೂ ಕೂಡಾ ಎಸ್ ಟಿ ಗೆ ಸೇರಿಸಬೇಕು ಎಂದು ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ, ಮಾಜಿ ಮಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳಾಗಿದ್ದ ಈಶ್ವರಪ್ಪ ಮತ್ತು ಕುರುಬ ಸಮುದಾಯದ ಮಾಜಿ ಮಂತ್ರಿಗಳ ಶಾಸಕರು ಹಾಗೂ ಕುರುಬ ಸಮುದಾಯದ ಎಲ್ಲರಲ್ಲೂ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ರಾಜ್ಯದಲ್ಲಿ ಜಾತಿಯ ಬೆಂಬಲ ಇಲ್ಲದೆ ರಾಜಕೀಯವಾಗಿ ಹಾಗೂ ಸಮಾಜಿಕವಾಗಿ ಯಾವುದೇ ಮಹತ್ವವನ್ನು ಕ್ಷೌರಿಕ ಸಮಾಜಕ್ಕೆ ನೀಡಲಾಗುತ್ತಿಲ್ಲ. ಈ ಹಿನ್ನಲೆಯಲ್ಲಿ ಹೂವಿನ ಜೊತೆಯಲ್ಲಿ ನಾರನ್ನೂ ಸ್ವರ್ಗಕ್ಕೆ ಸೇರಿಸಿ ಎನ್ನುವ ಗಾದೆಯಂತೆ ನಿಮ್ಮ ಹೋರಾಟದ ಜೊತೆಯಲ್ಲೇ ನಮ್ಮನ್ನೂ ಸೇರ್ಪಡೆ ಮಾಡಿಕೊಂಡು ಪರಿಶಿಷ್ಠ ಪಂಗಡಕ್ಕೆ ಸೇರ್ಪಡೆ ಮಾಡಿಸಿ ಎಂದು ಮನವಿ ಮಾಡಿದ್ದಾರೆ.
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications