ಮಹದಾಯಿ; ಅಧಿಸೂಚನೆ ಹೊರಡಿಸಲು ಸುಪ್ರೀಂ ನಿರ್ದೇಶನ
ಬೆಂಗಳೂರು, ಫೆಬ್ರವರಿ 20: ಮಹದಾಯಿ ಯೋಜನೆ ಕುರಿತು ಅಧಿಸೂಚನೆ ಹೊರಡಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಜುಲೈ 15ರಿಂದ ವಿವಾದದ ಕುರಿತು ನಿರಂತರ ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ಹೇಳಿದೆ.
ಸುಪ್ರೀಂಕೋರ್ಟ್ ಗೆಜೆಟ್ ಅಧಿಸೂಚನೆ ಪ್ರಕಟಿಸಲು ಅವಕಾಶ ನೀಡಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ವಿಧಾನಸಭೆಯಲ್ಲಿ ಗುರುವಾರ ಪ್ರಕಟಿಸಿದರು. ಇದರಿಂದಾಗಿ ಯೋಜನೆ ವಿಚಾರದಲ್ಲಿ ಕರ್ನಾಟಕಕ್ಕೆ ಜಯ ಸಿಕ್ಕಿದೆ.

ಕರ್ನಾಟಕ ಸರ್ಕಾರ ಮಹದಾಯಿ ಯೋಜನೆ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು. ಆದರೆ, ವಿವಾದ ಸುಪ್ರೀಂಕೋರ್ಟ್ನಲ್ಲಿ ಇರುವುದರಿಂದ ಸಾಧ್ಯವಿಲ್ಲ ಎಂದು ಕೇಂದ್ರ ಹೇಳಿತ್ತು.
ಮಹದಾಯಿ ಯೋಜನೆಗೆ ಮಹಾರಾಷ್ಟ್ರ ಮತ್ತು ಗೋವಾ ಸರ್ಕಾರಗಳು ವಿರೋಧ ವ್ಯಕ್ತಪಡಿಸುತ್ತಿದ್ದವು. ಆದ್ದರಿಂದ, ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಲು ವಿಳಂಬ ಮಾಡುತ್ತಿತ್ತು.
ಸುಪ್ರೀಂಕೋರ್ಟ್ ಆದೇಶದ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, "ಇದು ಸಿಹಿ ಸುದ್ದಿ, ನಮ್ಮ ಪಾಲಿನ 14.2 ಟಿಎಂಸಿ ನೀರು ಬಳಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಿ ಸುಪ್ರೀಂಕೋರ್ಟ್ ಆದೇಶ ನೀಡಿದೆ" ಎಂದು ಹೇಳಿದರು.
ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ನಡುವೆ ಮಹದಾಯಿ ಯೋಜನೆ ಬಗ್ಗೆ ವಿವಾದವಿದೆ. ಈ ಕುರಿತು ಸುಪ್ರೀಂಕೋರ್ಟ್ಗೆ ಸಹ ಅರ್ಜಿ ಸಲ್ಲಿಸಲಾಗಿದೆ. ಜುಲೈ 15ರಿಂದ ಈ ಅರ್ಜಿಗಳ ವಿಚಾರಣೆ ನಿರಂತರವಾಗಿ ನಡೆಯಲಿದೆ.
ಮೂರು ರಾಜ್ಯಗಳ ನಡುವಿನ ವಿವಾದದ ಬಗ್ಗೆ ಸುಧೀರ್ಘ ವಿಚಾರಣೆ ನಡೆಸಿದ್ದ ಮಹದಾಯಿ ನ್ಯಾಯಾಧೀಕರಣ 2018ರಲ್ಲಿ ಅಂತಿಮ ತೀರ್ಪನ್ನು ಪ್ರಕಟಿಸಿತ್ತು. ಮೂರು ರಾಜ್ಯಗಳಿಗೆ ನೀರನ್ನು ಹಂಚಿಕೆ ಮಾಡಿತ್ತು.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ











Click it and Unblock the Notifications