ಮಹದಾಯಿ; ಅಧಿಸೂಚನೆ ಹೊರಡಿಸಲು ಸುಪ್ರೀಂ ನಿರ್ದೇಶನ
ಬೆಂಗಳೂರು, ಫೆಬ್ರವರಿ 20: ಮಹದಾಯಿ ಯೋಜನೆ ಕುರಿತು ಅಧಿಸೂಚನೆ ಹೊರಡಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಜುಲೈ 15ರಿಂದ ವಿವಾದದ ಕುರಿತು ನಿರಂತರ ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ಹೇಳಿದೆ.
ಸುಪ್ರೀಂಕೋರ್ಟ್ ಗೆಜೆಟ್ ಅಧಿಸೂಚನೆ ಪ್ರಕಟಿಸಲು ಅವಕಾಶ ನೀಡಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ವಿಧಾನಸಭೆಯಲ್ಲಿ ಗುರುವಾರ ಪ್ರಕಟಿಸಿದರು. ಇದರಿಂದಾಗಿ ಯೋಜನೆ ವಿಚಾರದಲ್ಲಿ ಕರ್ನಾಟಕಕ್ಕೆ ಜಯ ಸಿಕ್ಕಿದೆ.

ಕರ್ನಾಟಕ ಸರ್ಕಾರ ಮಹದಾಯಿ ಯೋಜನೆ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು. ಆದರೆ, ವಿವಾದ ಸುಪ್ರೀಂಕೋರ್ಟ್ನಲ್ಲಿ ಇರುವುದರಿಂದ ಸಾಧ್ಯವಿಲ್ಲ ಎಂದು ಕೇಂದ್ರ ಹೇಳಿತ್ತು.
ಮಹದಾಯಿ ಯೋಜನೆಗೆ ಮಹಾರಾಷ್ಟ್ರ ಮತ್ತು ಗೋವಾ ಸರ್ಕಾರಗಳು ವಿರೋಧ ವ್ಯಕ್ತಪಡಿಸುತ್ತಿದ್ದವು. ಆದ್ದರಿಂದ, ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಲು ವಿಳಂಬ ಮಾಡುತ್ತಿತ್ತು.
ಸುಪ್ರೀಂಕೋರ್ಟ್ ಆದೇಶದ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, "ಇದು ಸಿಹಿ ಸುದ್ದಿ, ನಮ್ಮ ಪಾಲಿನ 14.2 ಟಿಎಂಸಿ ನೀರು ಬಳಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಿ ಸುಪ್ರೀಂಕೋರ್ಟ್ ಆದೇಶ ನೀಡಿದೆ" ಎಂದು ಹೇಳಿದರು.
ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ನಡುವೆ ಮಹದಾಯಿ ಯೋಜನೆ ಬಗ್ಗೆ ವಿವಾದವಿದೆ. ಈ ಕುರಿತು ಸುಪ್ರೀಂಕೋರ್ಟ್ಗೆ ಸಹ ಅರ್ಜಿ ಸಲ್ಲಿಸಲಾಗಿದೆ. ಜುಲೈ 15ರಿಂದ ಈ ಅರ್ಜಿಗಳ ವಿಚಾರಣೆ ನಿರಂತರವಾಗಿ ನಡೆಯಲಿದೆ.
ಮೂರು ರಾಜ್ಯಗಳ ನಡುವಿನ ವಿವಾದದ ಬಗ್ಗೆ ಸುಧೀರ್ಘ ವಿಚಾರಣೆ ನಡೆಸಿದ್ದ ಮಹದಾಯಿ ನ್ಯಾಯಾಧೀಕರಣ 2018ರಲ್ಲಿ ಅಂತಿಮ ತೀರ್ಪನ್ನು ಪ್ರಕಟಿಸಿತ್ತು. ಮೂರು ರಾಜ್ಯಗಳಿಗೆ ನೀರನ್ನು ಹಂಚಿಕೆ ಮಾಡಿತ್ತು.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications