ಹೈಕೋರ್ಟ್ಗೆ ಐವರು ನ್ಯಾಯಮೂರ್ತಿಗಳ ನೇಮಕಕ್ಕೆ ಕೊಲಿಜಿಯಂ ಶಿಫಾರಸು
ಬೆಂಗಳೂರು ಜು.20: ಹೈಕೋರ್ಟ್ನ ಹಾಲಿ ರಿಜಿಸ್ಟ್ರಾರ್ ಜನರಲ್ ಟಿ.ಜಿ ಶಿವಶಂಕರೇಗೌಡ ಸೇರಿದಂತೆ ಐವರು ಹಿರಿಯ ಜಿಲ್ಲಾ ನ್ಯಾಯಮೂರ್ತಿಗಳಿಗೆ ಹೈಕೋರ್ಟ್ ನ್ಯಾಯಮೂರ್ತಿಗಳನ್ನಾಗಿ ಪದನ್ನೋತಿ ನೀಡಲಾಗುವುದು. ಈ ಕುರಿತು ಹೈಕೋರ್ಟ್ ಸಲ್ಲಿಸಿದ್ದ ಪ್ರಸ್ತಾವನೆಗೆ ಸುಪ್ರೀಂಕೋರ್ಟ್ನ ಕೊಲಿಜಿಯಂ ಒಪ್ಪಿಗೆ ನೀಡಿದೆ.
ಜುಲೈ 19ರಂದು ನಡೆದ ಸುಪ್ರೀಂಕೋರ್ಟ್ ಕೊಲಿಜಿಯಂ ಸಭೆಯಲ್ಲಿ ಐವರು ನ್ಯಾಯಾಂಗ ಅಧಿಕಾರಿಗಳನ್ನು ಹೈಕೋರ್ಟ್ನ ನ್ಯಾಯಮೂರ್ತಿಗಳಾಗಿ ಪದನ್ನೋತಿ ನೀಡುವ ಪ್ರಸ್ತಾಪಕ್ಕೆ ಅನುಮೋದನೆ ನೀಡಲು ನಿರ್ಧರಿಸಲಾಗಿದೆ.
ಅನಿಲ್ ಭೀಮಸೇನ್ ಕಟ್ಟಿ, ಗುರುಸಿದ್ಧಯ್ಯ ಬಸವರಾಜ, ಚಂದ್ರಶೇಖರ್ ಮೃತ್ಯುಂಜಯ ಜೋಷಿ, ಉಮೇಶ್ ಮಂಜುನಾಥ್ಭಟ್ ಅಡಿಗ ಹಾಗೂ ತಲಕಾಡು ಗಿರಿಗೌಡ ಶಿವಶಂಕರೇಗೌಡ ಅವರನ್ನು ಹೈಕೋರ್ಟ್ ನ್ಯಾಯಮೂರ್ತಿಗಳನ್ನಾಗಿ ಪದನ್ನೋತಿ ನೀಡುವ ಪ್ರಸ್ತಾಪಕ್ಕೆ ಸುಪ್ರೀಂಕೋರ್ಟ್ ಕೊಲಿಜಿಯಂ ಅನುಮೋದನೆ ನೀಡಿದೆ.

ಈ ಶಿಫಾರಸನ್ನು ಕೇಂದ್ರ ಸರಕಾರಕ್ಕೆ ಕಳುಹಿಸಲಾಗುವುದು, ಕೇಂದ್ರದ ಕಾನೂನು ಸಚಿವಾಲಯ ಅವುಗಳನ್ನು ಪರಿಶೀಲಿಸಿ ರಾಷ್ಟ್ರಪತಿಗೆ ಕಳುಹಿಸಲಿದ್ದಾರೆ. ರಾಷ್ಟ್ರಪತಿ ಭವನದಿಂದ ನೇಮಕದ ಅಧಿಕೃತ ಆದೇಶ ಹೊರಬೀಳಲಿದೆ.
44 ನ್ಯಾಯಮೂರ್ತಿಗಳು:
ಹೈಕೋರ್ಟ್ ನಲ್ಲಿ ಸದ್ಯ ಹಂಗಾಮಿ ಸಿಜೆ ಸೇರಿ 44 ನ್ಯಾಯಮೂರ್ತಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೀಗ ಹೊಸದಾಗಿ ಐದು ಮಂದಿ ಸೇರ್ಪಡೆಯಾದರೆ ನ್ಯಾಯಮೂರ್ತಿಗಳ ಸಂಖ್ಯೆ 49ಕ್ಕೆ ಏರಿಕೆಯಾಗಲಿದೆ. ಸಿಜೆ ಹುದ್ದೆ ಸದ್ಯ ಖಾಲಿ ಇದೆ. ಸಿಜೆಯಾಗಿದ್ದ ರಿತುರಾಜ್ ಅವಸ್ಥಿ ಜು.2ರಂದು ನಿವೃತ್ತರಾದ ಹಿನ್ನೆಲೆಯಲ್ಲಿ ಆ ಜಾಗಕ್ಕೆ ಹಂಗಾಮಿ ಸಿಜೆಯನ್ನಾಗಿ ಹಿರಿಯ ನ್ಯಾ. ಅಲೋಕ್ ಅರಾಧೆ ಅವರನ್ನು ನೇಮಕ ಮಾಡಲಾಗಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications