ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಂ.ಎಂ.ಕಲಬುರ್ಗಿ ಹತ್ಯೆ, ತನಿಖಾ ವರದಿ ಕೇಳಿದ ಸುಪ್ರೀಂಕೋರ್ಟ್

|
Google Oneindia Kannada News

ಬೆಂಗಳೂರು, ನವೆಂಬರ್ 26 : ವಿಚಾರವಾದಿ ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣದ ತನಿಖೆ ಬಗ್ಗೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. 2015ರಲ್ಲಿ ಎಂ.ಎಂ.ಕಲಬುರ್ಗಿ ಅವರನ್ನು ಹತ್ಯೆ ಮಾಡಲಾಗಿತ್ತು.

ಸೋಮವಾರ ಸುಪ್ರೀಂಕೋರ್ಟ್ ಎಂ.ಎಂ.ಕಲಬುರ್ಗಿ ಅವರ ಕುಟುಂಬದವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿತು. ತನಿಖೆ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ ಕೋರ್ಟ್, ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತು.

ಎಂ.ಎಂ.ಕಲಬುರ್ಗಿ ಕೊಂದವರೇ ಗೌರಿ ಲಂಕೇಶ್ ಹತ್ಯೆ ಮಾಡಿದ್ದು!ಎಂ.ಎಂ.ಕಲಬುರ್ಗಿ ಕೊಂದವರೇ ಗೌರಿ ಲಂಕೇಶ್ ಹತ್ಯೆ ಮಾಡಿದ್ದು!

ಎರಡು ವಾರದಲ್ಲಿ ಎಂ.ಎಂ.ಕಲಬುರಗಿ ಅವರ ಹತ್ಯೆ ಪ್ರಕರಣದ ತನಿಖೆ ಬಗ್ಗೆ ತನಿಖಾ ವರದಿಯನ್ನು ನೀಡುವಂತೆ ಸುಪ್ರೀಂಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದೆ.

ಎಂಎಂ ಕಲ್ಬುರ್ಗಿ ಹತ್ಯೆ ಪ್ರಕರಣ: ಸುಪ್ರೀಂ ಮೆಟ್ಟಿಲೇರಿದ ಕುಟುಂಬಸ್ಥರುಎಂಎಂ ಕಲ್ಬುರ್ಗಿ ಹತ್ಯೆ ಪ್ರಕರಣ: ಸುಪ್ರೀಂ ಮೆಟ್ಟಿಲೇರಿದ ಕುಟುಂಬಸ್ಥರು

SC seeks status report of investigation in MM Kalburgi murder case

2015ರ ಆಗಸ್ಟ್ 30ರಂದು ಬೆಳಗ್ಗೆ ಧಾರವಾಡದ ಕಲ್ಯಾಣ ನಗರದಲ್ಲಿರುವ ಎಂ.ಎಂ.ಕಲಬುರ್ಗಿ ಅವರ ಮನೆಗೆ ಬಂದಿದ್ದ ಅಪರಿಚಿತರು, ಬೆಲ್ ಮಾಡಿದ್ದರು. ಕಲಬುರ್ಗಿ ಅವರು ಬಾಗಿಲು ತೆರೆದಾಗ ಎರಡು ಸುತ್ತು ಗುಂಡು ಹಾರಿಸಿ ಅವರನ್ನು ಹತ್ಯೆ ಮಾಡಿದ್ದರು.

ಗೌರಿ-ಕಲ್ಬುರ್ಗಿ ಹತ್ಯೆಗೆ ಒಂದೇ ಪಿಸ್ತೂಲು ಬಳಕೆ, ಎಸ್ ಐಟಿಯಿಂದ ಖಾತ್ರಿಗೌರಿ-ಕಲ್ಬುರ್ಗಿ ಹತ್ಯೆಗೆ ಒಂದೇ ಪಿಸ್ತೂಲು ಬಳಕೆ, ಎಸ್ ಐಟಿಯಿಂದ ಖಾತ್ರಿ

ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ಹತ್ಯೆ ನಡೆದು ಮೂರು ವರ್ಷಗಳು ಕಳೆದರೂ ಯಾವೊಬ್ಬ ಆರೋಪಿಯನ್ನು ಬಂಧಿಸಲು ಸಾಧ್ಯವಾಗಲಿಲ್ಲ.

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ, ಗೌರಿ ಲಂಕೇಶ್ ಹತ್ಯೆಯಲ್ಲಿ ಭಾಗಿಯಾದ ಆರೋಪಿಗಳೇ ಕಲಬುರ್ಗಿ ಅವರ ಹತ್ಯೆಯಲ್ಲಿಯೂ ಭಾಗಿಯಾಗಿದ್ದಾರೆ ಎಂದು ಹೇಳಿದೆ. ಈ ನಿಟ್ಟಿನಲ್ಲಿ ಈತ ತನಿಖೆ ಸಾಗುತ್ತಿದೆ.

English summary
Supreme Court asks the Karnataka Government to submit a status report on probe in M.M.Kalburgi murder case. M.M.Kalburgi shot dead in Dharwad on August 30, 2015.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X