ಎಸ್ಸಿ, ಎಸ್ಟಿ ಕಾಯ್ದೆಯಡಿ ಸುಳ್ಳು ಪ್ರಕರಣಗಳು; ಹೈಕೋರ್ಟ್ ಕಿಡಿ
ಬೆಂಗಳೂರು, ಆಗಸ್ಟ್ 09: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯಿದೆಯಡಿ ದಾಖಲಾಗುತ್ತಿರುವ ಸುಳ್ಳು ಕ್ರಿಮಿನಲ್ ಪ್ರಕರಣಗಳು ನ್ಯಾಯಾಂಗ ವ್ಯವಸ್ಥೆಗೆ ಅಡ್ಡಿಯಾಗುತ್ತಿದೆ ಎಂದು ಕರ್ನಾಟ ಹೈಕೋರ್ಟ್ ಕಿಡಿ ಕಾರಿದೆ. ಅಲ್ಲದೆ, ಈ ರೀತಿಯ ಪ್ರಕರಣಗಳು ನ್ಯಾಯಾಂಗ ಕ್ಷೇತ್ರದ ಅಮೂಲ್ಯ ಸಮಯವನ್ನು ವ್ಯರ್ಥ ಮಾಡುತ್ತಿವೆ ಎಂದಿರುವ ನ್ಯಾಯಪೀಠ ಬೆಂಗಳೂರಿನ ವ್ಯಕ್ತಿಯೊಬ್ಬರ ವಿರುದ್ಧದ ಪ್ರಕರಣ ರದ್ದು ಮಾಡಿದೆ.
ರಸಿಕ್ ಲಾಲ್ ಮತ್ತು ಪುರುಷೋತ್ತಮ್ ಎಂಬುವರು ತಮ್ಮ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪಂಗಡ ದೌರ್ಜನ್ಯ ಕಾಯಿದೆಯಡಿ ಪ್ರಕರಣ ದಾಖಲಾಗಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯಿದೆಯಡಿಯ ಸುಳ್ಳು ಪ್ರಕರಣಗಳು ಕಾನೂನಿನ ಪ್ರಕ್ರಿಯೆಯ ದುರುಪಯೋಗವಾಗಲಿದ್ದು, ನಿಯಂತ್ರಿಸುವಲ್ಲಿ ವಿಫಲವಾದಲ್ಲಿ ಇಡೀ ಅಪರಾಧ ನ್ಯಾಯ ವ್ಯವಸ್ಥೆಗೆ ದೊಡ್ಡ ಹೊರೆಯಾಗಬಹುದು ಎಂದು ತಿಳಿಸಿದೆ.
ಉತ್ತಮ ನಿದರ್ಶನವಾಗಿದೆ; ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವರ್ಗಗಳ ಜನತೆಯ ಮೇಲಿನ ದೌರ್ಜನ್ಯಗಳನ್ನು ತಡೆಯುವ ಉದ್ದೇಶದಿಂದ ಕಾಯಿದೆ ಜಾರಿ ಮಾಡಲಾಗಿದೆ. ಆದರೆ, ಈ ಕಾಯಿದೆಯ ಉಲ್ಲಂಘನೆ ಮಾಡಿರುವುದಕ್ಕೆ ಪ್ರಸ್ತುತದ ಪ್ರಕರಣ ಒಂದು ಉತ್ತಮ ನಿರ್ದಶನವಾಗಿದೆ ಎಂದು ನ್ಯಾಯಪೀಠ ತಿಳಿಸಿದೆ.
ಅಲ್ಲದೆ, ಈ ರೀತಿಯ ಪ್ರಕರಣಗಳಿಂದ ನಿಜವಾಗಿಯೂ ಸಮಸ್ಯೆಗೆ ಸಿಲುಕಿರುವವರು ನ್ಯಾಯಕ್ಕಾಗಿ ಕಾಯುತ್ತಿರುವ ಸಂದರ್ಭದಲ್ಲಿ ಸುಳ್ಳು ಪ್ರಕರಣವನ್ನು ವಿಚಾರಣೆಗೊಳಪಡಿಸುವುದು ಒಂದು ರೀತಿಯ ಅಪಹಾಸ್ಯದಂತಾಗಿದೆ ಎಂದು ನ್ಯಾಯಪೀಠ ಅಭಿಪ್ರಾಯ ಪಟ್ಟಿದೆ.
ಜತೆಗೆ, ದೂರುದಾರರ ತಂದೆ ಅರ್ಜಿದಾರರಿಗೆ ತಮ್ಮ ಜಮೀನನ್ನು ಮಾರಾಟ ಮಾಡಿದ್ದಾರೆ. ಅಲ್ಲದೆ, ಆ ಆಸ್ತಿಯನ್ನು ಅರ್ಜಿದಾರರು ಕಳೆದ ೫೦ ವರ್ಷಗಳಿಂದ ತಮ್ಮಲ್ಲಿ ಉಳಿಸಿಕೊಂಡಿರುವ ಸಂಬಂಧ ಸರ್ಕಾರದಲ್ಲಿ ದಾಖಲೆಗಳಿವೆ. ಜತೆಗೆ, ಅರ್ಜಿದಾರರು ಜಮೀನ್ನು ಖರೀದಿ ಮಾಡಿದ್ದಾರೆ ವಿನಃ ಅತಿಕ್ರಮ ಮಾಡಿಲ್ಲ ಎಂಬ ಅಂಶ ದಾಖಲೆಗಳಲ್ಲಿ ಎತ್ತಿ ತೋರಿಸುತ್ತಿದೆ, ಆದರೂ ಈ ಅಂಶವನ್ನು ಪರಿಗಣಿಸದೆ ದೂರು ನೀಡಲಾಗಿದೆ. ಹೀಗಾಗಿ ಪ್ರಕರಣ ರದ್ದುಗೊಳಿಸುತ್ತಿರುವುದಾಗಿ ಪೀಠ ತಿಳಿಸಿದೆ.
ಪ್ರಕರಣದ ವಿವರ: ಬೆಂಗಳೂರಿನ ರಸಿಕ್ ಲಾಲ್ ಮತ್ತು ಪುರುಷೋತ್ತಮ್ ಎಂಬುವರ ವಿರುದ್ಧ ವ್ಯಕ್ತಿಯೊಬ್ಬರು ತಮ್ಮ ಮನೆಯ ನೆರೆಹೊರೆಯವರು ಮನೆ ಒತ್ತುವರಿಗಾರಿ ನಿರಂತರ ಕಿರುಕುಳ ನೀಡುತ್ತಿದ್ದಾರೆ. ತಮ್ಮ ಆಸ್ತಿಗೆ ಸಂಬಂಧಿಸಿದಂತೆ ನಕಲಿ ದಾಖಲೆಗಳನ್ನು ಸೃಷ್ಠಿಸಿದ್ದಾರೆ ಎಂದು ಆರೋಪಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣದಲ್ಲಿ ಐಪಿಸಿಯ ವಿವಿಧ ಸೆಕ್ಷನ್ಗಳು ಸೇರಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿರುದ್ಧದ ದೌರ್ಜನ್ಯ ತಡೆ ಕಾಯಿದೆಯ ಸೆಕ್ಷನ್ಗಳನ್ನು ಸೇರ್ಪಡೆ ಮಾಡಿದ್ದರು. ಪ್ರಕರಣ ಸಂಬಂಧ ರಾಮಮೂರ್ತಿ ನಗರದ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದರು.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ?












Click it and Unblock the Notifications