ಎಚ್ ವಿಶ್ವನಾಥ್ ಅವರಿಗೆ ಭಾರಿ ಆಘಾತ ಕೊಟ್ಟ ಸುಪ್ರೀಂ ತೀರ್ಪು
ಬೆಂಗಳೂರು, ಜನವರಿ 28: ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಸಂಪುಟ ಸೇರುವ ಆಸೆ ಇರಿಸಿಕೊಂಡಿದ್ದ ಎಚ್ ವಿಶ್ವನಾಥ್ ಅವರಿಗೆ ಮತ್ತೆ ನಿರಾಶೆಯಾಗಿದೆ. ಸುಪ್ರೀಂಕೋರ್ಟ್ ಇಂದು(ಜ.28) ನೀಡಿದ ತೀರ್ಪು ಎಚ್ ವಿಶ್ವನಾಥ್ ಅವರಿಗೆ ಭಾರಿ ಆಘಾತ ತಂದಿದೆ.
ವಿಧಾನ ಪರಿಷತ್ ಸದಸ್ಯನಾಗಿ ವಿಶ್ವನಾಥ್ ಅವರು ಸಚಿವ ಸಂಪುಟ ಸೇರುವ ಆಸೆ ಭಗ್ನಗೊಂಡಿದ್ದು ನೆನಪಿರಬಹುದು. ಈಗ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದು ಶಾಸಕನಾಗಿ ಸಂಪುಟ ಸೇರುವ ಕನಸು ಕಾಣುತ್ತಿದ್ದರು.
ಎಚ್ ವಿಶ್ವನಾಥ್ ಅವರು ಸಚಿವರಾಗಲು ಅನರ್ಹರೆಂದು ಹೈಕೋರ್ಟ್ ವಿಭಾಗೀಯ ಪೀಠ ನೀಡಿದ್ದ ಮಧ್ಯಂತರ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.

ಸಂವಿಧಾನದ 164 (1ಬಿ) ಮತ್ತು 361 (b) ವಿಧಿಗಳ ಅಡಿ ಮುಂದೆ ಅವರು ವಿಧಾನಸಭೆಗೆ ಮರು ಆಯ್ಕೆಯಾಗುವವರೆಗೂ ಸಚಿವರಾಗಲು ಎಚ್ ವಿಶ್ವನಾಥ್ ಅವರಿಗೆ ಅರ್ಹತೆ ಇಲ್ಲ ಎಂದು ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಮಾನ್ಯ ಮಾಡಿದೆ.
ಎಂಟಿಬಿ ನಾಗರಾಜ್ ಮತ್ತು ಎಚ್ ವಿಶ್ವನಾಥ್ ಇಬ್ಬರೂ ಉಪ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದರು. ಆದರೆ ಆರ್ ಶಂಕರ್ ಅವರು ರಾಣೆಬೆನ್ನೂರು ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ಬದಲಾಗಿ ಅವರನ್ನು ಬಿಜೆಪಿ ವಿಧಾನಪರಿಷತ್ಗೆ ಆಯ್ಕೆ ಮಾಡಾಲಾಗಿತ್ತು.
ವಿಶ್ವನಾಥ್ ಅವರು ಸಾಹಿತ್ಯ ಕ್ಷೇತ್ರದ ವಿಭಾಗದಿಂದ ವಿಧಾನಪರಿಷತ್ಗೆ ನಾಮನಿರ್ದೇಶನಗೊಂಡಿದ್ದಾರೆ. ಹೀಗಾಗಿ ಅವರು ಸಚಿವ ಸಂಪುಟ ಸೇರ್ಪಡೆಯಾಗಲು ಅರ್ಹರಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications