School Holiday: ರಾಜ್ಯದಲ್ಲಿ ಶಾಲಾ ಬೇಸಿಗೆ ರಜೆ ವಿಸ್ತರಣೆ ಕುರಿತು ಶಿಕ್ಷಣ ಇಲಾಖೆ ಕೊಟ್ಟ ಸ್ಪಷ್ಟನೆ ಏನು?
School Holiday: ಈಗಾಗಲೇ ರಾಜ್ಯದಲ್ಲಿ ಶಾಲಾ ಪರೀಕ್ಷೆಗಳು ಮುಗಿದಿದ್ದು, ಬೇಸಿಗೆ ರಜೆಯನ್ನು ಸಹ ಘೋಷಣೆ ಮಾಡಲಾಗಿದೆ. ಇನ್ನೂ ಇದೀಗ ಈ ರಜೆಯನ್ನು ಮತ್ತೆ ವಿಸ್ತರಣೆ ಮಾಡಲಾಗುತ್ತದೆ ಎನ್ನುವ ಸುದ್ದಿಗಳು ಹಬ್ಬಿದ್ದವು. ಇದರ ಬೆನ್ನಲ್ಲೇ ಈ ಬಗ್ಗೆ ಸ್ಪಷ್ಟನೆ ನೀಡಿರುವ ಶಿಕ್ಷಣ ಇಲಾಖೆ ಏನು ಹೇಳಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಶಾಲಾ ಮಕ್ಕಳ ಬೇಸಗೆ ರಜೆ ಮೇ 28 2025ಕ್ಕೆ ಮುಕ್ತಾಯ ಆಗಲಿದ್ದು, ಮೇ 29ರಿಂದ 2025-26ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಆರಂಭ ಆಗಲಿದೆ. ಆದರೆ ಇದೀಗ ಬೇಸಿಗೆ ರಜೆ ವಿಸ್ತರಣೆ ಆಗಿದೆ ಎಂಬ ಸುಳ್ಳು ಸಂದೇಶಗಳನ್ನು ಹರಡುತ್ತಿದ್ದು, ಇದು ಪೋಷಕರಲ್ಲಿ ಗೊಂದಲ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಶಿಕ್ಷಣ ಇಲಾಖೆ ಈ ಗೊಂದಲಕ್ಕೆ ತೆರೆ ಎಳೆಯುವ ಕೆಲಸವನ್ನು ಮಾಡಿದೆ.

ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದೇಶದ ಹಲವು ಭಾಗಗಳಲ್ಲಿ ಶಾಲೆಯ ಬೇಸಿಗೆ ರಜೆಯನ್ನು ಜುಲೈವರೆಗೂ ವಿಸ್ತರಣೆ ಮಾಡಲಾಗಿದೆ. ಆದರೆ ಇದು ಎಲ್ಲಾ ರಾಜ್ಯಗಳಿಗೂ ಅನ್ವಯವಾಗುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಯೊಂದು ಹರಡಿದ್ದು, ಇದಕ್ಕೆ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಸ್ಪಷ್ಟನೆ ಕೊಡುವ ಕೆಲಸವನ್ನು ಮಾಡಿದೆ.
ಶಿಕ್ಷಣ ಇಲಾಖೆ ಹೇಳುವುದೇನು?: ರಾಜ್ಯ ಪಠ್ಯಕ್ರಮ, ಸಿಬಿಎಸ್ಇ, ಐಸಿಎಸ್ಇ ಹೀಗೆ ಎಲ್ಲಾ ಬೋರ್ಡ್ಗಳ ಸರ್ಕಾರಿ, ಖಾಸಗಿ ಶಾಲೆಗೆ ಅನ್ವ ಆವಾಗುತ್ತದೆ ಎಂಬ ಸುಳ್ಳು ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಕೆಲ ಕಿಡಿಗೇಡಿಗಳು ಹರಿಬಿಟ್ಟಿದ್ದಾರೆ. ಶಿಕ್ಷಕರು, ಪಾಲಕ, ಪೋಷಕರ ವಾಟ್ಸ್ ಆ್ಯಪ್ ಗ್ರೂಪ್ಗಲ್ಲೂ ಈ ಸಂದೇಶ ಹರಿದಾಡುತ್ತಿದೆ. ಆದರೆ, ರಾಜ್ಯದಲ್ಲು ಬೇಸಿಗೆ ರಜಾ ಅವಧಿಯಲ್ಲಿ ಯಾವುದೇ ವ್ಯತ್ಯಾಸ ಇಲ್ಲ. ನಿಗದಿಯಂತೆ ಇದೇ ಮೇ 29ರಿಂದಲೇ ಶೈಕ್ಷಣಿಕ ವರ್ಷ ಅರಂಭ ಆಗಲಿದೆ ಎಂದು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಈಗಾಗಲೇ ಶೈಕ್ಷಣಿಕ ವರ್ಷದ ಆರಂಭದ ಕುರಿತು ಅಧಿಸೂಚನೆಯನ್ನು ಕೂಡ ಬಿಡುಗಡೆ ಮಾಡಿತ್ತು. ವೇಳಾಪಟ್ಟಿ ಈಗಾಗಲೇ ಬಿಡುಗಡೆ ಆಗಿದ್ದು, ಅದರಂತೆಯೇ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ಶೈಕ್ಷಣಿಕ ಚಟುವಟಿಕೆ ಮುಂದುವರೆಯಲಿದೆ. ವಿದ್ಯಾರ್ಥಿಗಳು, ಪೋಷಕರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು. ಸಿಬಿಎಸ್ಇ, ಐಸಿಎಸ್ಇ ಬೋರ್ಡ್ಗಳು ತಮ್ಮದೇ ವೇಳಪಟ್ಟಿಯನ್ನು ಹೊಂದಿವೆ ಎಂದು ತಿಳಿಸಿದೆ.
ವೇಳಾಪಟ್ಟಿ ಪ್ರಕಾರ, 2025-26ನೇ ಶೈಕ್ಷಣಿಕ ವರ್ಷ ಮೇ 29ರಿಂದ 2026ರ ಏಪ್ರಿಲ್ವರೆಗೂ ಇರಲಿದೆ. ವರ್ಷದ 365 ದಿನಗಳಲ್ಲಿ ಮಧ್ಯವಧಿ/ದಸರಾ ರಜೆ, ಬೇಸಗೆ ರಜೆ ಸಹಿತ 123 ರಜಾ ದಿನಗಳು ಹಾಗೂ 242 ಶಾಲಾ ಚಟುವಟಿಕೆಯ ದಿನಗಳು ಇರಲಿವೆ. ಈ ಪ್ರಕಾರವೇ ಮೇ 29ರಂದು ಶಾಲೆಗಳು ಆರಂಭವಾಗಲಿದೆ. ಮುಖ್ಯಶಿಕ್ಷಕರು, ಶಿಕ್ಷಕರು ಆ ದಿನದಂದು ಶಾಲೆಗಳಲ್ಲಿ ಹಾಜರಿರಬೇಕು. ಅಲ್ಲದೆ, ಮೇ 30ರಂದು ಶಾಲಾರಂಭೋತ್ಸವ ನಡೆಸಬೇಕು. ಜೂನ್ ಮೊದಲ ವಾರದಲ್ಲಿ ಸರ್ಕಾರಿ ಶಾಲಾ ದಾಖಲಾತಿ ಕುರಿತು ದಾಖಲಾತಿ ಆಂದೋಲನ ನಡೆಸಿ ಮನೆ ಮನೆ ಭೇಟಿ ನೀಡಿ, ಶಾಲೆಗೆ ಸೇರದ ಅಥವಾ ಅರ್ಧಕ್ಕೆ ಶಾಲೆ ಬಿಟ್ಟಿರುವ ಮಕ್ಕಳಿದ್ದರೆ ಅವರನ್ನು ದಾಖಲಿಸಿಕೊಳ್ಳುವ ಕಾರ್ಯ ಆಗಬೇಕೆಂದು ಶಾಲೆಗಳಿಗೆ ಶಿಕ್ಷಣೆ ಇಲಾಖೆ ಸೂಚನೆ ನೀಡಿದೆ.
-
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ -
South Western Railway: ಹುಬ್ಬಳ್ಳಿಯಿಂದ ರಾಮೇಶ್ವರಂಗೆ ವಿಶೇಷ ರೈಲು ಸಂಚಾರ; ಮಾರ್ಚ್ 21ರಿಂದ ಮುಂಗಡ ಟಿಕೆಟ್ ಬುಕ್ಕಿಂಗ್ ಆರಂಭ -
ಏಪ್ರಿಲ್ 1 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭ: 9ನೇ ತರಗತಿಯ ಪರಿಷ್ಕೃತ NCERT ಪಠ್ಯಪುಸ್ತಕ ವಿಳಂಬ, ಹೆಚ್ಚಾದ ಗೊಂದಲ -
IMD Weather Forecast: ದೇಶದ ಈ ಭಾಗಗಳಲ್ಲಿ ಮಾರ್ಚ್ ಅಂತ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: ಐಎಂಡಿ ಎಚ್ಚರಿಕೆ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ












Click it and Unblock the Notifications