School Holidays: ಕರ್ನಾಟಕದ ಈ ಜಿಲ್ಲೆಯ ಶಾಲೆಗಳಿಗೆ ಡಿ. 26 ಮತ್ತು ಡಿ.27ಕ್ಕೆ ರಜೆ, ಕಾರಣವೇನು
ಬೆಳಗಾವಿಯಲ್ಲಿ ಎರಡು ದಿನಗಳ ಕಾಲ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಬೆಳಗಾವಿಯಲ್ಲಿ ಗಾಂಧಿ ಭಾರತ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆಯಲ್ಲು ರಜೆ ಘೋಷಣೆ ಮಾಡಲಾಗಿದೆ. ಬುಧವಾರ ಕ್ರಿಸ್ಮಸ್ ರಜೆ ಇತ್ತು. ಮುಂದುವರಿದು ಇನ್ನೆರಡು ದಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಬೆಳಗಾವಿ ತಾಲ್ಲೂಕಿನ ಶೈಕ್ಷಣಿಕ ವಲಯದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಆದೇಶ ಹೊರಡಿಸಿದ್ದಾರೆ. ಬೆಳಗಾವಿ ನಗರ ಮತ್ತು ತಾಲ್ಲೂಕಿನ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿಗೆ ಈ ರಜೆ ಅನ್ವಯವಾಗಲಿದೆ.

ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924 ರಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸಮಾರಂಭದ ಅಂಗವಾಗಿ ಬೆಳಗಾವಿ ನಗರದಲ್ಲಿ ಡಿಸೆಂಬರ್ 26 ಹಾಗೂ ಡಿಸೆಂಬರ್ 27ಕ್ಕೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.
ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಸವಿನನಪಿಗಾಗಿ ಡಿಸೆಬರ್ 27ರಂದು ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಗಾಂಧಿ ಭಾರತ ವಿಶೇಷ ಸಮಾರಂಭ ಆಯೋಜಿಸಲಾಗಿದೆ. ಈ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಎಲ್ಲಾ ಶಾಲೆಗಳಿಗೆ ಡಿಸೆಂಬರ್26 ಹಾಗೂ ಡಿಸೆಂಬರ್ 27ಕ್ಕೆ ಎರಡು ದಿನ ರಜೆ ಘೋಷಣೆ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಬೆಳಗಾವಿಯಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಕಾರ್ಯಕ್ರಮದಲ್ಲಿ ಗಣ್ಯರು, ಸ್ಟಾತಂತ್ರ್ಯ ಹೋರಾಟಗಾರರು, ಸಾರ್ವಜನಿಕರು, ಮಹಿಳೆಯರು ಹಾಗೂ ವೃದ್ಧರು ಸೇರಿದಂತೆ ಲಕ್ಷಾಂತರ ಜನ ಭಾಗವಹಿಸುವ ಸಾಧ್ಯತೆ ಇದೆ. ಅಲ್ಲದೆ ವಾಹನ ಸಂಚಾರ ದಟ್ಟಣೆ ಹೆಚ್ಚಾಗುವ ಸಂಭವವಿರುವ ಕಾರಣ ಶಾಲಾಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿ.ಎನ್.ಎಸ್.ಎಸ್) 2023 ರ ಕಲಂ 163 ರಡಿಯಲ್ಲಿ ರಜೆ ಘೋಷಿಸಲಾಗಿದೆ.
ಬೆಳಗಾವಿ ತಾಲ್ಲೂಕು ಶೈಕ್ಷಣಿಕ ವಲಯ (ಗ್ರಾಮೀಣ & ನಗರ)ದ ಎಲ್ಲಾ ಸರಕಾರಿ ಬೆಳಗಾವಿ ತಾಲ್ಲೂಕಿನ ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಹಾಗೂ ನಗರ ಯೋಜನೆ ಹಾಗೂ ಗ್ರಾಮೀಣ ಯೋಜನೆಯ ಎಲ್ಲಾ ಅಂಗನವಾಡಿಗಳಿಗೆ ಡಿಸೆಂಬರ್ 26 ಹಾಗೂ ಡಿಸೆಂಬರ್ 27ಕ್ಕೆ ರಜೆ ಘೋಷಿಸುವುದು ಅವಶ್ಯವಿರುವುದರಿಂದ ರಜೆ ಘೋಷಣೆ ಮಾಡಿರುವುದಾಗಿ ಡಿಸಿ ಅವರು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.
ಈ ರಜೆ ದಿನಗಳನ್ನು ನಗರ ಯೋಜನೆ ಹಾಗೂ ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ ಬೆಳಗಾವಿ(ದ) ಅವರು ಹಾಗೂ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಬೆಳಗಾವಿ ಅವರು ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಲಾಗಿದೆ. ಅಲ್ಲದೆ ಈ ರಜಾ ಅವಧಿಯನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.
ಈ ರಜೆಯು ರಾಜ್ಯದ ಬೆಳಗಾವಿ ತಾಲ್ಲೂಕಿಗೆ ಮಾತ್ರ ಅನ್ವಯವಾಗಲಿದೆ. ಉಳಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಎಂದಿನಂತೆ ಶಾಲೆಗಳು ಇರಲಿವೆ ಎಂದು ಹೇಳಲಾಗಿದೆ.
-
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್












Click it and Unblock the Notifications