ಸಮವಸ್ತ್ರ ಹಂಚಿಕೆ ತಡ ಆಗಲು ಕೇಂದ್ರದ ಅನುದಾನ ವಿಳಂಬ ಕಾರಣ: ಸಿಎಂ
ಮೈಸೂರು, ನವೆಂಬರ್ 28: ಮೊದಲಿನಿಂದಲೂ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದೇನೆ. ಇಂದು ಮೈಸೂರು ವಿಶ್ವವಿದ್ಯಾಲಯದಲ್ಲಿ ಎಲ್ಲಾ ವಿಶ್ವವಿದ್ಯಾಲಯಗಳ ಕುಲಪತಿಗಳ ಜೊತೆ ಸಂವಾದ ನಡೆಸುತ್ತೇವೆ. ಅವರಿಂದ ಮೌಲ್ಯಾಧಾರಿತ ಸಲಹೆ ಸೂಚನೆಗಳನ್ನು ಪಡೆದು ಕಾರ್ಯಗತಗೊಳಿಸಲು ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹೇಳಿದರು.
ಬುಧವಾರ ಮೈಸೂರಿನ ಲಲಿತ್ ಮಹಲ್ ಹೆಲಿಪ್ಯಾಡ್ ಬಳಿ ಮಾಧ್ಯಮದೊಂದಿಗೆ ಅವರು ಮಾತನಾಡಿದ ಅವರು ಶಾಲಾ ಮಕ್ಕಳಿಗೆ ಸಮವಸ್ತ್ರ ನೀಡಲು ಕೇಂದ್ರ ಸರ್ಕಾರದಿಂದ ಹಣ ಬರುವುದು ವಿಳಂಬವಾಗಿದೆ. ಹಾಗಾಗಿ ಸಮವಸ್ತ್ರ ವಿತರಣೆ ವಿಳಂಬವಾಗಿದೆ ಶೀಘ್ರದಲ್ಲೇ ಈ ಕುರಿತು ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದರು.
ರಾಜ್ಯದ ಬರ ಪರಿಹಾರಕ್ಕೆ 16 ಸಾವಿರ ಕೋಟಿ ರೂ.ಗಳ ನೆರವನ್ನು ಒದಗಿಸುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದೇವೆ ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬುಧವಾರ ಮೈಸೂರಿನಲ್ಲಿ ವಿದ್ಯಾ ವಿಕಾಸ ಶಿಕ್ಷಣ ಸಂಸ್ಥೆಯ ರಜತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಸಹ ಇದ್ದರು.












Click it and Unblock the Notifications