Schools Reopen: ಮೇ 29 ರಿಂದ ರಾಜ್ಯದಲ್ಲಿ ಶಾಲೆಗಳು ಪುನರಾರಂಭ, ಈ ವರ್ಷವೂ ಬೋರ್ಡ್ ಪರೀಕ್ಷೆ!
ಬೆಂಗಳೂರು, ಏಪ್ರಿಲ್. 08: ರಾಜ್ಯದ ಪಠ್ಯಕ್ರಮವನ್ನು ಅನುಸರಿಸುವ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2024-25ನೇ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಕ್ರಿಯಾ ಯೋಜನೆಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಪ್ರಕಟಣೆಯಂತೆ ಮೇ 29ರಂದು ಶಾಲೆಗಳು ಪುನರಾರಂಭಗೊಳ್ಳಲಿವೆ.
ಕಳೆದ ವರ್ಷ ಭಾರಿ ಸುದ್ದಿ ಮತ್ತು ಗೊಂದಲಕ್ಕೆ ಕಾರಣವಾಗಿ ಕಾನೂನು ಸಮಸ್ಯೆಗಳನ್ನು ಎದುರಿಸಿದ ಮೌಲ್ಯಮಾಪನ ಪರೀಕ್ಷೆಯು 2024-25ರಲ್ಲಿಯೂ ಮುಂದುವರಿಯುತ್ತದೆ. ಈ ಕುರಿತು ಪ್ರತ್ಯೇಕ ಸುತ್ತೋಲೆ ಹೊರಡಿಸಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.

2024-25ರ ಶೈಕ್ಷಣಿಕ ವರ್ಷಕ್ಕೆ, ಮೊದಲ ಅವಧಿಯು ಮೇ 29 ರಿಂದ ಅಕ್ಟೋಬರ್ 2 ರವರೆಗೆ ಮತ್ತು ಎರಡನೇ ಅವಧಿಯು ಅಕ್ಟೋಬರ್ 21 ರಿಂದ ಏಪ್ರಿಲ್ 10, 2025 ರವರೆಗೆ ಇರುತ್ತದೆ. ಶೈಕ್ಷಣಿಕ ಕ್ಯಾಲೆಂಡರ್ ಒಟ್ಟು 244 ಶಾಲಾ ಕೆಲಸದ ದಿನಗಳನ್ನು ಒಳಗೊಂಡಿದೆ. ಕಲಿಕೆ-ಬೋಧನೆ ಪ್ರಕ್ರಿಯೆಗೆ 180 ದಿನಗಳನ್ನು ನಿಗದಿಪಡಿಸಲಾಗಿದೆ. ಅಕ್ಟೋಬರ್ 3 ರಿಂದ 20 ರವರೆಗೆ ದಸರಾ ರಜಾದಿನಗಳು ಇದ್ದು, ಮುಂದಿನ ಆರ್ಥಿಕ ವರ್ಷದಲ್ಲಿ ಒಟ್ಟು 121 ರಜೆಗಳು ಇರುತ್ತವೆ.
ರಾಜ್ಯದ ಶಾಲೆಗಳಾದ್ಯಂತ ಚಟುವಟಿಕೆಗಳ ಏಕರೂಪದ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಈ ಮಾರ್ಗಸೂಚಿಗಳನ್ನು ಹೊರಡಿಸಿದೆ. ಈ ಮಾರ್ಗಸೂಚಿಯಲ್ಲಿ ತಿಂಗಳ ವಾರು ಪಾಠ ವಿತರಣೆ, ಪಠ್ಯೇತರ ಚಟುವಟಿಕೆಗಳು, ಫಲಿತಾಂಶ-ಆಧಾರಿತ ಚಟುವಟಿಕೆಗಳು, ವಿಶೇಷ ಶನಿವಾರ (ಬ್ಯಾಗ್ ಮುಕ್ತ ದಿನ), ಪಾಠ ಸಂಬಂಧಿತ ಚಟುವಟಿಕೆಗಳು, ಬ್ಯಾಂಕ್ ನಿರ್ವಹಣೆ, ಪರೀಕ್ಷೆಗಳು ಮತ್ತು ಮೌಲ್ಯಮಾಪನ ವಿಶ್ಲೇಷಣೆಗೆ ಸಮಯ ನೀಡಿದೆ.
ಒಟ್ಟು 244 ಶಾಲಾ ದಿನಗಳಲ್ಲಿ, 26 ದಿನ ಮೌಲ್ಯಮಾಪನಕ್ಕೆ, 24 ದಿನಗಳನ್ನು ಪಠ್ಯೇತರ ಚಟುವಟಿಕೆಗಳಿಗೆ, 10 ದಿನಗಳು ಮೌಲ್ಯಮಾಪನ ಮತ್ತು ಫಲಿತಾಂಶ ಘೋಷಣೆಗೆ 10 ದಿನ ಮತ್ತು ನಾಲ್ಕು ದಿನಗಳನ್ನು ಸ್ಥಳೀಯ ರಜಾದಿನಗಳಿಗೆ ನಿಗದಿಪಡಿಸಲಾಗಿದೆ. ಹೆಚ್ಚುವರಿಯಾಗಿ, ಸರ್ಕಾರಿ ಶಾಲೆಗಳಲ್ಲಿ ಒಂದರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಎರಡು ಜೋಡಿ ಉಚಿತ ಸಮವಸ್ತ್ರ ಮತ್ತು ಪಠ್ಯಪುಸ್ತಕಗಳು ಮತ್ತು ಖಾಸಗಿ ಶಾಲೆಗಳಿಗೆ ಪಠ್ಯಪುಸ್ತಕಗಳನ್ನು ತಾಲ್ಲೂಕುಗಳಿಗೆ ಸರಬರಾಜು ಮಾಡಲಾಗುವುದು ಎಂದು ತಿಳಿಸಿದೆ.

ಏಪ್ರಿಲ್ 10ರೊಳಗೆ ಮೊದಲ ಹಂತದಲ್ಲಿ ವಿದ್ಯಾರ್ಥಿಗಳಿಗೆ ಈ ಪುಸ್ತಕಗಳನ್ನು ವಿತರಿಸುವಂತೆ ಮುಖ್ಯಶಿಕ್ಷಕರಿಗೆ ಸೂಚಿಸಲಾಗಿದ್ದು, ಹೊರಡಿಸಿರುವ ಮಾರ್ಗಸೂಚಿಯಂತೆ ಜೂನ್ 30ರೊಳಗೆ ಪ್ರವೇಶ ಪ್ರಕ್ರಿಯೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ.
ಬೇಸಿಗೆ ರಜೆಯಲ್ಲೂ ಬಿಸಿಯೂಟ
ಸರ್ವೋಚ್ಚ ನ್ಯಾಯಾಲಯುದ ಆದೇಶಾನುಸಾರ ಬರಗಾಲ ಪೀಡಿತ ಪ್ರದೇಶದಲ್ಲಿ ಬೇಸಿಗೆ ರಜೆಯಲ್ಲಿಯೂ ಸಹ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1-10 ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟವನ್ನು ನೀಡಲು ಸರ್ಕಾರ ಆದೇಶಿಸಿದೆ.
ಪ್ರಸ್ತುತ 2024-25ನೇ ಸಾಲಿನಬೇಸಿಗೆ ರಜೆಯ ಅವಧಿಯು ಏಪ್ರಿಲ್ 11 ರಿಂದ ಮೇ 28 ರವರೆಗೆ ಒಟ್ಟು 41 ದಿನಗಳ ಅವಧಿಯಲ್ಲಿ ಮಧ್ಯಾಹ್ನ ಉಪಾಹಾರ ಯೋಜನೆ ಕಾರ್ಯಕ್ರಮವನ್ನು ಶಾಲೆಗಳಲ್ಲಿ ನಡೆಸಬೇಕು. ಈ ಸಂಬಂಧ ಜನವರಿ 10 ರಂದು ಮಾನ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ 2024-25ರಲ್ಲಿ ನಡೆದ ಎಸ್ಎಸ್ಎಂಸಿ ಸಭೇ ನಡೆಸಲಾಗಿದೆ. ಸಭೆಯಲ್ಲಿ ಪಿ.ಎಂ. ಪೋಷಣ್ ಮಧ್ಯಾಹ್ನ ಉಪಾಹಾರ ಯೋಜನೆಯನ್ನು 1-10 ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಅನುಷ್ಠಾನಕ್ಕಾಗಿ ಸಿದ್ಧಪಡಿಸಿದ ವಾರ್ಷಿಕ ಕ್ರಿಯಾ ಯೋಜನೆ ಮತ್ತು ಆಯವ್ಯಯ ಬಗ್ಗೆ ಸಭೆಯ ಸಹಮತ ನಿರ್ಣಯದಂತೆ ಮಾರ್ಚ್ 27 ರಂದು ಅನುಮೋದನೆ ಸಿಕ್ಕಿದೆ. ಹೀಗಾಗಿ ಬೇಸಿಗೆಯಲ್ಲೂ ಮಕ್ಕಳಿಗೆ ಬಿಸಿಯೂಟ ನೀಡಲು ನಿರ್ಧರಿಸಲಾಗಿದೆ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ?











Click it and Unblock the Notifications