ಎಸ್ ಡಿಎಂ ಪತ್ರಿಕೋದ್ಯಮ ವಿದ್ಯಾರ್ಥಿಗಳು 5ನೇ ಬಾರಿ ಚಾಂಪಿಯನ್ಸ್
ಉಜಿರೆ, ಏಪ್ರಿಲ್ 20: ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಇತ್ತೀಚೆಗೆ ನಡೆದ 'ನವ ಮಾಧ್ಯಮ' ಕುರಿತಾದ ಎರಡು ದಿನಗಳ ರಾಷ್ಟ್ರಮಟ್ಟದ ಸೆಮಿನಾರ್ ಹಾಗೂ ರಾಜ್ಯಮಟ್ಟದ 'ರೈನ್ಬೋ' ಮಾಧ್ಯಮೋತ್ಸವದಲ್ಲಿ ಉಜಿರೆ ಎಸ್.ಡಿ.ಎಂ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು 5 ನೇ ಬಾರಿಗೆ ಸಮಗ್ರ ಪ್ರಶಸ್ತಿ ಪಡೆದು ಚಾಂಪಿಯನ್ಗಳಾಗಿ ಹೊರಹೊಮ್ಮಿದ್ದಾರೆ.
ಕರ್ನಾಟಕ ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ಹಾಗೂ ವಿದ್ಯುನ್ಮಾನ ವಿಭಾಗಗಳ ವತಿಯಿಂದ ಜರುಗಿದ ಈ ರೈನ್ಬೋ ಮಾಧ್ಯಮೋತ್ಸವದಲ್ಲಿ ರಾಜ್ಯದ ವಿವಿಧ ಭಾಗಗಳ ಒಟ್ಟು 16 ಕಾಲೇಜುಗಳು 160 ಸ್ಪರ್ಧಿಗಳು ಭಾಗವಹಿಸಿದ್ದರು.
ಒಟ್ಟು 10 ಸ್ಪರ್ಧೆಗಳ 8 ವಿಭಾಗಗಳಲ್ಲಿ ಪ್ರಶಸ್ತಿ ಪಡೆದ ಉಜಿರೆ ಎಸ್.ಡಿ.ಎಂ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿದ್ಯಾರ್ಥಿಗಳ ತಂಡ ಸಮಗ್ರ ಪ್ರಶಸ್ತಿಯೊಂದಿಗೆ ಸಂಪೂರ್ಣ ಉತ್ಸವದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಗೆ ನೀಡುವ 2 ವಿಶೇಷ ಪ್ರಶಸ್ತಿಗಳನ್ನೂ ಗೆಲ್ಲುವುದರ ಮೂಲಕ ಇತರ ತಂಡಗಳಿಂದ ಉತ್ತಮ ಗೆಲುವಿನ ಅಂತರ ಕಾಯ್ದುಕೊಂಡಿದೆ.

6 ನೇ ವರ್ಷದ ಸಂಭ್ರಮದಲ್ಲಿರುವ ರೈನ್ಬೋ ಮಾಧ್ಯಮ ಉತ್ಸವದಲ್ಲಿ
* 'ರೇಡಿಯೋ ಜಾಕಿ' ಸ್ಪರ್ಧೆಯಲ್ಲಿ ಚೇತನ್ ಸೊಲಗಿ, ಪೂಜಾ ಪಕ್ಕಳ, ವಿನಯ್ ಕಾಶಪ್ಪನವರ್ ಹಾಗೂ ಶಶಾಂಕ್ ಬಜೆ ತಂಡ ಪ್ರಥಮ,
* 'ಮ್ಯಾಡ್ ಆಡ್' ವಿಭಾಗದಲ್ಲಿ ರಾಜೇಶ್ ನಾಯ್ಕ್, ಪೂಜಾ ಪಕ್ಕಳ, ಚೇತನ್ ಸೊಲಗಿ ಮತ್ತು ವಿನಯ್ ಕಾಶಪ್ಪನವರ್ ತಂಡ ಪ್ರಥಮ,
* ವರದಿಗಾರಿಕೆಯಲ್ಲಿ ರಕ್ಷಿತಾ ಕರ್ಕೇರಾ ಪ್ರಥಮ,
* ಛಾಯಾಚಿತ್ರಗ್ರಹಣದಲ್ಲಿ ವಿಲ್ಸನ್ ದೀಪಕ್ ಪಿಂಟೋ ದ್ವಿತೀಯ,

* ರೇಡಿಯೋ ನ್ಯೂಸ್ ವಾಚನದಲ್ಲಿ ಪವಿತ್ರ ದ್ವಿತೀಯ,
* ಸೆಲೆಬ್ರಿಟಿ ಇಂಟರ್ವ್ಯೂನಲ್ಲಿ ಚೇತನ್ ಸೊಲಗಿ ಮತ್ತು ಪವಿತ್ರ ತಂಡ ದ್ವಿತೀಯ,
* ಪೀಸ್ ಟು ಕ್ಯಾಮೆರಾ ವಿಭಾಗದಲ್ಲಿ ಪವಿತ್ರ ದ್ವಿತೀಯ ಹಾಗೂ ನ್ಯೂಸ್ ಕಾಸ್ಟಿಂಗ್ನಲ್ಲಿ ಪವಿತ್ರ, ದೊಡ್ಡನಗೌಡ, ಪೂಜಾ ಪಕ್ಕಳ ಹಾಗೂ ಶಶಾಂಕ್ ಬಜೆ ತೃತೀಯ ಸ್ಥಾನ ಪಡೆದಿದ್ದಾರೆ.
ಜೊತೆಗೆ ಅತ್ಯುತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿಗೆ ನೀಡುವ ವಿಶೇಷ ಪ್ರಶಸ್ತಿಯನ್ನು ಚೇತನ್ ಸೊಲಗಿ ಹಾಗೂ ವಿದ್ಯಾರ್ಥಿನಿಗೆ ನೀಡುವ ವಿಶೇಷ ಪ್ರಶಸ್ತಿಯನ್ನು ಪವಿತ್ರ ಪಡೆಯುವುದರ ಮೂಲಕ ಉಜಿರೆ ಎಸ್.ಡಿ.ಎಂ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗಕ್ಕೆ 5 ನೇ ಬಾರಿಗೆ ಸಮಗ್ರ ಪ್ರಶಸ್ತಿಯೊಂದಿಗೆ ಚಾಂಪಿಯನ್ ಪಟ್ಟ ತಂದುಕೊಟ್ಟಿದ್ದಾರೆ.
ಈ ವಿದ್ಯಾರ್ಥಿಗಳನ್ನು ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕರಾದ ಸುನಿಲ್ ಹೆಗ್ಡೆ, ಶುೃತಿ ಜೈನ್ ಮತ್ತು ಪರಶುರಾಮ ಕಾಮತ್ ತರಬೇತುಗೊಳಿಸಿದ್ದಾರೆ.

ವಿಜೇತ ವಿದ್ಯಾರ್ಥಿಗಳಿಗೆ ಪತ್ರಕರ್ತ ಕೆ. ವಿ. ಎನ್. ಸ್ವಾಮಿ ಮತ್ತು ಕರ್ನಾಟಕ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ಎಂ. ಎನ್ ಜೋಶಿ ಪ್ರಶಸ್ತಿ ಪ್ರದಾನ ಮಾಡಿದರು. ವಿಭಾಗದ ಪ್ರಾಧ್ಯಾಪಕರಾದ ಡಾ. ಸಂಜೀವಕುಮಾರ್ ಮಾಲಗತ್ತಿ, ಡಾ.ಚಂದೂನವರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications