ಎಸ್ ಡಿಎಂ ಪತ್ರಿಕೋದ್ಯಮ ವಿದ್ಯಾರ್ಥಿಗಳು 5ನೇ ಬಾರಿ ಚಾಂಪಿಯನ್ಸ್
ಉಜಿರೆ, ಏಪ್ರಿಲ್ 20: ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಇತ್ತೀಚೆಗೆ ನಡೆದ 'ನವ ಮಾಧ್ಯಮ' ಕುರಿತಾದ ಎರಡು ದಿನಗಳ ರಾಷ್ಟ್ರಮಟ್ಟದ ಸೆಮಿನಾರ್ ಹಾಗೂ ರಾಜ್ಯಮಟ್ಟದ 'ರೈನ್ಬೋ' ಮಾಧ್ಯಮೋತ್ಸವದಲ್ಲಿ ಉಜಿರೆ ಎಸ್.ಡಿ.ಎಂ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು 5 ನೇ ಬಾರಿಗೆ ಸಮಗ್ರ ಪ್ರಶಸ್ತಿ ಪಡೆದು ಚಾಂಪಿಯನ್ಗಳಾಗಿ ಹೊರಹೊಮ್ಮಿದ್ದಾರೆ.
ಕರ್ನಾಟಕ ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ಹಾಗೂ ವಿದ್ಯುನ್ಮಾನ ವಿಭಾಗಗಳ ವತಿಯಿಂದ ಜರುಗಿದ ಈ ರೈನ್ಬೋ ಮಾಧ್ಯಮೋತ್ಸವದಲ್ಲಿ ರಾಜ್ಯದ ವಿವಿಧ ಭಾಗಗಳ ಒಟ್ಟು 16 ಕಾಲೇಜುಗಳು 160 ಸ್ಪರ್ಧಿಗಳು ಭಾಗವಹಿಸಿದ್ದರು.
ಒಟ್ಟು 10 ಸ್ಪರ್ಧೆಗಳ 8 ವಿಭಾಗಗಳಲ್ಲಿ ಪ್ರಶಸ್ತಿ ಪಡೆದ ಉಜಿರೆ ಎಸ್.ಡಿ.ಎಂ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿದ್ಯಾರ್ಥಿಗಳ ತಂಡ ಸಮಗ್ರ ಪ್ರಶಸ್ತಿಯೊಂದಿಗೆ ಸಂಪೂರ್ಣ ಉತ್ಸವದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಗೆ ನೀಡುವ 2 ವಿಶೇಷ ಪ್ರಶಸ್ತಿಗಳನ್ನೂ ಗೆಲ್ಲುವುದರ ಮೂಲಕ ಇತರ ತಂಡಗಳಿಂದ ಉತ್ತಮ ಗೆಲುವಿನ ಅಂತರ ಕಾಯ್ದುಕೊಂಡಿದೆ.

6 ನೇ ವರ್ಷದ ಸಂಭ್ರಮದಲ್ಲಿರುವ ರೈನ್ಬೋ ಮಾಧ್ಯಮ ಉತ್ಸವದಲ್ಲಿ
* 'ರೇಡಿಯೋ ಜಾಕಿ' ಸ್ಪರ್ಧೆಯಲ್ಲಿ ಚೇತನ್ ಸೊಲಗಿ, ಪೂಜಾ ಪಕ್ಕಳ, ವಿನಯ್ ಕಾಶಪ್ಪನವರ್ ಹಾಗೂ ಶಶಾಂಕ್ ಬಜೆ ತಂಡ ಪ್ರಥಮ,
* 'ಮ್ಯಾಡ್ ಆಡ್' ವಿಭಾಗದಲ್ಲಿ ರಾಜೇಶ್ ನಾಯ್ಕ್, ಪೂಜಾ ಪಕ್ಕಳ, ಚೇತನ್ ಸೊಲಗಿ ಮತ್ತು ವಿನಯ್ ಕಾಶಪ್ಪನವರ್ ತಂಡ ಪ್ರಥಮ,
* ವರದಿಗಾರಿಕೆಯಲ್ಲಿ ರಕ್ಷಿತಾ ಕರ್ಕೇರಾ ಪ್ರಥಮ,
* ಛಾಯಾಚಿತ್ರಗ್ರಹಣದಲ್ಲಿ ವಿಲ್ಸನ್ ದೀಪಕ್ ಪಿಂಟೋ ದ್ವಿತೀಯ,

* ರೇಡಿಯೋ ನ್ಯೂಸ್ ವಾಚನದಲ್ಲಿ ಪವಿತ್ರ ದ್ವಿತೀಯ,
* ಸೆಲೆಬ್ರಿಟಿ ಇಂಟರ್ವ್ಯೂನಲ್ಲಿ ಚೇತನ್ ಸೊಲಗಿ ಮತ್ತು ಪವಿತ್ರ ತಂಡ ದ್ವಿತೀಯ,
* ಪೀಸ್ ಟು ಕ್ಯಾಮೆರಾ ವಿಭಾಗದಲ್ಲಿ ಪವಿತ್ರ ದ್ವಿತೀಯ ಹಾಗೂ ನ್ಯೂಸ್ ಕಾಸ್ಟಿಂಗ್ನಲ್ಲಿ ಪವಿತ್ರ, ದೊಡ್ಡನಗೌಡ, ಪೂಜಾ ಪಕ್ಕಳ ಹಾಗೂ ಶಶಾಂಕ್ ಬಜೆ ತೃತೀಯ ಸ್ಥಾನ ಪಡೆದಿದ್ದಾರೆ.
ಜೊತೆಗೆ ಅತ್ಯುತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿಗೆ ನೀಡುವ ವಿಶೇಷ ಪ್ರಶಸ್ತಿಯನ್ನು ಚೇತನ್ ಸೊಲಗಿ ಹಾಗೂ ವಿದ್ಯಾರ್ಥಿನಿಗೆ ನೀಡುವ ವಿಶೇಷ ಪ್ರಶಸ್ತಿಯನ್ನು ಪವಿತ್ರ ಪಡೆಯುವುದರ ಮೂಲಕ ಉಜಿರೆ ಎಸ್.ಡಿ.ಎಂ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗಕ್ಕೆ 5 ನೇ ಬಾರಿಗೆ ಸಮಗ್ರ ಪ್ರಶಸ್ತಿಯೊಂದಿಗೆ ಚಾಂಪಿಯನ್ ಪಟ್ಟ ತಂದುಕೊಟ್ಟಿದ್ದಾರೆ.
ಈ ವಿದ್ಯಾರ್ಥಿಗಳನ್ನು ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕರಾದ ಸುನಿಲ್ ಹೆಗ್ಡೆ, ಶುೃತಿ ಜೈನ್ ಮತ್ತು ಪರಶುರಾಮ ಕಾಮತ್ ತರಬೇತುಗೊಳಿಸಿದ್ದಾರೆ.

ವಿಜೇತ ವಿದ್ಯಾರ್ಥಿಗಳಿಗೆ ಪತ್ರಕರ್ತ ಕೆ. ವಿ. ಎನ್. ಸ್ವಾಮಿ ಮತ್ತು ಕರ್ನಾಟಕ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ಎಂ. ಎನ್ ಜೋಶಿ ಪ್ರಶಸ್ತಿ ಪ್ರದಾನ ಮಾಡಿದರು. ವಿಭಾಗದ ಪ್ರಾಧ್ಯಾಪಕರಾದ ಡಾ. ಸಂಜೀವಕುಮಾರ್ ಮಾಲಗತ್ತಿ, ಡಾ.ಚಂದೂನವರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications