ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಸ್ ಡಿಎಂ ಪತ್ರಿಕೋದ್ಯಮ ವಿದ್ಯಾರ್ಥಿಗಳು 5ನೇ ಬಾರಿ ಚಾಂಪಿಯನ್ಸ್

By Mahesh
|
Google Oneindia Kannada News

ಉಜಿರೆ, ಏಪ್ರಿಲ್ 20: ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಇತ್ತೀಚೆಗೆ ನಡೆದ 'ನವ ಮಾಧ್ಯಮ' ಕುರಿತಾದ ಎರಡು ದಿನಗಳ ರಾಷ್ಟ್ರಮಟ್ಟದ ಸೆಮಿನಾರ್ ಹಾಗೂ ರಾಜ್ಯಮಟ್ಟದ 'ರೈನ್‍ಬೋ' ಮಾಧ್ಯಮೋತ್ಸವದಲ್ಲಿ ಉಜಿರೆ ಎಸ್.ಡಿ.ಎಂ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು 5 ನೇ ಬಾರಿಗೆ ಸಮಗ್ರ ಪ್ರಶಸ್ತಿ ಪಡೆದು ಚಾಂಪಿಯನ್‍ಗಳಾಗಿ ಹೊರಹೊಮ್ಮಿದ್ದಾರೆ.

ಕರ್ನಾಟಕ ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ಹಾಗೂ ವಿದ್ಯುನ್ಮಾನ ವಿಭಾಗಗಳ ವತಿಯಿಂದ ಜರುಗಿದ ಈ ರೈನ್‍ಬೋ ಮಾಧ್ಯಮೋತ್ಸವದಲ್ಲಿ ರಾಜ್ಯದ ವಿವಿಧ ಭಾಗಗಳ ಒಟ್ಟು 16 ಕಾಲೇಜುಗಳು 160 ಸ್ಪರ್ಧಿಗಳು ಭಾಗವಹಿಸಿದ್ದರು.

ಒಟ್ಟು 10 ಸ್ಪರ್ಧೆಗಳ 8 ವಿಭಾಗಗಳಲ್ಲಿ ಪ್ರಶಸ್ತಿ ಪಡೆದ ಉಜಿರೆ ಎಸ್.ಡಿ.ಎಂ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿದ್ಯಾರ್ಥಿಗಳ ತಂಡ ಸಮಗ್ರ ಪ್ರಶಸ್ತಿಯೊಂದಿಗೆ ಸಂಪೂರ್ಣ ಉತ್ಸವದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಗೆ ನೀಡುವ 2 ವಿಶೇಷ ಪ್ರಶಸ್ತಿಗಳನ್ನೂ ಗೆಲ್ಲುವುದರ ಮೂಲಕ ಇತರ ತಂಡಗಳಿಂದ ಉತ್ತಮ ಗೆಲುವಿನ ಅಂತರ ಕಾಯ್ದುಕೊಂಡಿದೆ.

SDM College emerges winner in media fest

6 ನೇ ವರ್ಷದ ಸಂಭ್ರಮದಲ್ಲಿರುವ ರೈನ್‍ಬೋ ಮಾಧ್ಯಮ ಉತ್ಸವದಲ್ಲಿ
* 'ರೇಡಿಯೋ ಜಾಕಿ' ಸ್ಪರ್ಧೆಯಲ್ಲಿ ಚೇತನ್ ಸೊಲಗಿ, ಪೂಜಾ ಪಕ್ಕಳ, ವಿನಯ್ ಕಾಶಪ್ಪನವರ್ ಹಾಗೂ ಶಶಾಂಕ್ ಬಜೆ ತಂಡ ಪ್ರಥಮ,
* 'ಮ್ಯಾಡ್ ಆಡ್' ವಿಭಾಗದಲ್ಲಿ ರಾಜೇಶ್ ನಾಯ್ಕ್, ಪೂಜಾ ಪಕ್ಕಳ, ಚೇತನ್ ಸೊಲಗಿ ಮತ್ತು ವಿನಯ್ ಕಾಶಪ್ಪನವರ್ ತಂಡ ಪ್ರಥಮ,
* ವರದಿಗಾರಿಕೆಯಲ್ಲಿ ರಕ್ಷಿತಾ ಕರ್ಕೇರಾ ಪ್ರಥಮ,
* ಛಾಯಾಚಿತ್ರಗ್ರಹಣದಲ್ಲಿ ವಿಲ್ಸನ್ ದೀಪಕ್ ಪಿಂಟೋ ದ್ವಿತೀಯ,

SDM College emerges winner in media fest

* ರೇಡಿಯೋ ನ್ಯೂಸ್ ವಾಚನದಲ್ಲಿ ಪವಿತ್ರ ದ್ವಿತೀಯ,
* ಸೆಲೆಬ್ರಿಟಿ ಇಂಟರ್‍ವ್ಯೂನಲ್ಲಿ ಚೇತನ್ ಸೊಲಗಿ ಮತ್ತು ಪವಿತ್ರ ತಂಡ ದ್ವಿತೀಯ,
* ಪೀಸ್ ಟು ಕ್ಯಾಮೆರಾ ವಿಭಾಗದಲ್ಲಿ ಪವಿತ್ರ ದ್ವಿತೀಯ ಹಾಗೂ ನ್ಯೂಸ್ ಕಾಸ್ಟಿಂಗ್‍ನಲ್ಲಿ ಪವಿತ್ರ, ದೊಡ್ಡನಗೌಡ, ಪೂಜಾ ಪಕ್ಕಳ ಹಾಗೂ ಶಶಾಂಕ್ ಬಜೆ ತೃತೀಯ ಸ್ಥಾನ ಪಡೆದಿದ್ದಾರೆ.

ಜೊತೆಗೆ ಅತ್ಯುತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿಗೆ ನೀಡುವ ವಿಶೇಷ ಪ್ರಶಸ್ತಿಯನ್ನು ಚೇತನ್ ಸೊಲಗಿ ಹಾಗೂ ವಿದ್ಯಾರ್ಥಿನಿಗೆ ನೀಡುವ ವಿಶೇಷ ಪ್ರಶಸ್ತಿಯನ್ನು ಪವಿತ್ರ ಪಡೆಯುವುದರ ಮೂಲಕ ಉಜಿರೆ ಎಸ್.ಡಿ.ಎಂ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗಕ್ಕೆ 5 ನೇ ಬಾರಿಗೆ ಸಮಗ್ರ ಪ್ರಶಸ್ತಿಯೊಂದಿಗೆ ಚಾಂಪಿಯನ್ ಪಟ್ಟ ತಂದುಕೊಟ್ಟಿದ್ದಾರೆ.

ಈ ವಿದ್ಯಾರ್ಥಿಗಳನ್ನು ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕರಾದ ಸುನಿಲ್ ಹೆಗ್ಡೆ, ಶುೃತಿ ಜೈನ್ ಮತ್ತು ಪರಶುರಾಮ ಕಾಮತ್ ತರಬೇತುಗೊಳಿಸಿದ್ದಾರೆ.

SDM College emerges winner in media fest

ವಿಜೇತ ವಿದ್ಯಾರ್ಥಿಗಳಿಗೆ ಪತ್ರಕರ್ತ ಕೆ. ವಿ. ಎನ್. ಸ್ವಾಮಿ ಮತ್ತು ಕರ್ನಾಟಕ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ಎಂ. ಎನ್ ಜೋಶಿ ಪ್ರಶಸ್ತಿ ಪ್ರದಾನ ಮಾಡಿದರು. ವಿಭಾಗದ ಪ್ರಾಧ್ಯಾಪಕರಾದ ಡಾ. ಸಂಜೀವಕುಮಾರ್ ಮಾಲಗತ್ತಿ, ಡಾ.ಚಂದೂನವರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

English summary
The students of the Department of Mass Communication and Journalism of the SDM College of Ujire, Dakshina Kannada, emerged winners at the State-level ‘Rainbow Media Fest’ held recently at Karnataka University.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X