Get Updates
Get notified of breaking news, exclusive insights, and must-see stories!

SDPI-PFI ಕಪಿಮುಷ್ಠಿಯಲ್ಲಿರುವ ಕಾಂಗ್ರೆಸ್‌ನಿಂದ ತುಷ್ಟಿಕರಣ ರಾಜಕಾರಣ: ಸಿಎಂ ಬೊಮ್ಮಾಯಿ ವಾಗ್ದಾಳಿ

ಹುಬ್ಬಳ್ಳಿ, ಏಪ್ರಿಲ್ 04: ಕಾಂಗ್ರೆಸ್ ಪಕ್ಷವು ಎಸ್‌ಡಿಪಿಐ ಮತ್ತು ಪಿಎಫ್ಐ ಕಪಿಮುಷ್ಟಿಯಲ್ಲಿದೆ. ಅದರಿಂದ ಹೊರಬರಲು ಸಾಧ್ಯವಿಲ್ಲದೇ ತುಷ್ಟಿಕರಣ ರಾಜಕಾರಣ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ವಾಗ್ದಾಳಿ ನಡೆಸಿದರು.

ಹುಬ್ಬಳ್ಳಿಯಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬರುವ ರೀತಿಯಲ್ಲಿ ಕಾಂಗ್ರೆಸ್ ಪಕ್ಷ ವರ್ತಿಸುತ್ತಿದೆ. ಕಾಂಗ್ರೆಸ್‌ನವರು 'ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI)' ಮತ್ತು 'ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ' (PFI) ಅವರ ಒತ್ತಡಕ್ಕೆ ಮಣಿಯುತ್ತಿದ್ದಾರೆ ಎಂದರು.

SDPI And PFI Controlled Congress Party Is Doing Appeasement Politics: CM Basavaraj Bommai

ಬಿಜೆಪಿ ಪಕ್ಷ ಎಸ್‌ಡಿಪಿಐ ಮತ್ತು ಪಿಎಫ್‌ಐ ವಿರುದ್ಧ ಮಾತನಾಡಿದರೆ ಕಾಂಗ್ರೆಸ್ ನಾಯಕರಿಗೆ ತಳಮಳ ಶುರುವಾಗುತ್ತದೆ. ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ. ಕೇಂದ್ರ ಸರ್ಕಾರ ದಾಖಲೆ ಸಹಿತ ದೇಶ ವಿರೋಧಿ ಕೃತ್ಯದಲ್ಲಿ ತೊಡಗಿದ್ದ 'ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ' (PFI) ಅನ್ನು ನಿಷೇಧಿಸಿತು. ಹೀಗಿದ್ದರು ಕಾಂಗ್ರೆಸ್ ತಮ್ಮ ಪರ ಮಾತನಾಡುತ್ತಿಲ್ಲ ಎಂಬ ಅಸಮಾಧಾನ 'ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI)' ಗೆ ಇದೆ.

ಈ ಎಲ್ಲ ಬೆಳವಣಿ ಆದ ಮೇಲೆ ನಮಗೆ ರಕ್ಷಣೆ ಕೊಡದ ಕಾಂಗ್ರೆಸ್‌ಗೆ ನಾವು ಯಾಕೆ ರಕ್ಷಣೆ ಕೊಡಬೇಕು ಎಂದು ಕಾಂಗ್ರೆಸ್ ನಾಯಕರನ್ನು ಪಿಎಫ್ಐ ನಾಯಕರು ಪ್ರಶ್ನಿಸುತ್ತಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.

ಬಾಲವೇ ದೇಹವನ್ನು ಅಲುಗಾಡಿಸುವ ಸ್ಥಿತಿ ಎಂದು ಸಿಎಂ ವ್ಯಂಗ್ಯ

ದೇಶದಲ್ಲಿ ಪಿಎಫ್ಐನ ಮತ್ತೊಂದು ರೂಪವೇ ಎಸ್‌ಡಿಪಿಐ. ಕಾಂಗ್ರೆಸ್ ಎಸ್‌ಡಿಪಿಐ ಬೆಂಬಲವನ್ನು ಈ ಹಿಂದೆ ಬಹಿರಂಗವಾಗಿಯೇ ಕೇಳಿತ್ತು. ಆದರೆ ಅವರು ಕಾಂಗ್ರೆಸ್ ಅನ್ನು ಬೆಂಬಲಿಸುವುದಿಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್ ನ ಕಾಲದಲ್ಲಿಯೇ ಇವೆರಡು 'ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI)' ಮತ್ತು 'ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ' (PFI) ಪ್ರಬಲವಾಗಿ ಬೆಳೆದಿವೆ ಎಂದರು.

SDPI And PFI Controlled Congress Party Is Doing Appeasement Politics: CM Basavaraj Bommai

ಬಾಲವೇ ದೇಹವನ್ನು ಅಲುಗಾಡಿಸುವ ಸ್ಥಿತಿ ಇದೆ ಎಂದು ಎಸ್‌ಡಿಪಿಐ, ಪಿಎಫ್ ಕಾಂಗ್ರೆಸ್ ಬಾಲವಿದ್ದಂತೆ ಎಂದು ಅವರು ಪರೋಕ್ಷವಾಗಿ ಹೇಳಿದರು. ಅಲ್ಲದೇ ಎಸ್‌ಡಿಪಿಐ ಬಿಜೆಪಿಯ ಬಿ-ಟೀಂ ಅಲ್ಲ. ಅದು ಬಿಜೆಪಿ ಪಕ್ಷ ಬಿ-ಟೀಂ ಆಗಿದ್ದರೆ ನಾವು ಪಿಎಫ್ಐ ಸಂಘಟನೆಯನ್ನು ನಿಷೇಧಿಸುತ್ತಿದ್ದೇವಾ? ಎಂದು ಪ್ರಶ್ನಿಸಿದರು. ಕಾಂಗ್ರೆಸ್‌ನವರು ತಾವು ಮಾಡಿದ ತಪ್ಪನ್ನು ಮುಚ್ಚಲು ಈ ರೀತಿಯ ಆರೋಪ‌ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

ಡಿಕೆ ಶಿವಕುಮಾರ್ ಪ್ರಶ್ನೆಗೆ ಉತ್ತರಿಸಿದ ಸಿಎಂ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಭಜರಂಗ ದಳಕ್ಕೆ ಆಂಜನೇಯನಿಗೆ ಏನು ಸಂಬಂಧ ಎಂದು ಪ್ರಶ್ನಿಸಿದ್ದಾರೆ. ಅವರಿಗೆ ಉತ್ತರಿಸಿದ ಬೊಮ್ಮಾಯಿಯವರು ರಾಮನಿಗೂ ಹನುಮನಿಗೂ ಏನು ಸಂಬಂಧ ಇದೆಯೋ ಅದೇ ಸಂಬಂಧ ಭಜರಂಗದಳಕ್ಕೆ ಆಂಜನೇಯನಿಗೂ ಅಂತದ್ದೆ ಸಂಬಂಧ ಇದೆ. ಇದನ್ನು ಕಾಂಗ್ರೆಸ್ ನವರು ಅರ್ಥ ಮಾಡಿಕೊಳ್ಳಬೇಕು. ಜನರ ಭಾವನೆಗಳ ಧಕ್ಕೆ ತರುವ ರೀತಿಯಲ್ಲಿ ಮಾತನಾಡುವುದು ಸರಿಯಲ್ಲ ಎಂದು ಎಚ್ಚರಿಸಿದರು.

ಕಾಂಗ್ರೆಸ್‌ನಿಂದ ತುಷ್ಟೀಕರಣ ರಾಜಕಾರಣ

ಬಿಜೆಪಿ ನಮ್ಮ ಕಾರ್ಯಕ್ರಮ, ಅಭಿವೃದ್ಧಿ ಆಧಾರದಲ್ಲಿ ಚುನಾವಣೆ ಎದುರಿಸಿತ್ತಿದ್ದೇವೆ. ಕಾಂಗ್ರೆಸ್ ಅವರು ಭರವಸೆಗಳ ಮೇಲೆ ಚುನಾವಣೆ ಎದುರಿಸುತ್ತಿದ್ದಾರೆ. ಅನವಶ್ಯಕವಾಗಿ ಕೆದಕಿ ಕೆದಕಿ ಚುನಾವಣೆಯ ವಾತಾವರಣವನ್ನು ಜಾತಿ, ಧರ್ಮ, ಕೋಮು ಭಾವನೆಗಳ ಮೂಲಕ ಕೆರಳಿಸುತ್ತಿರುವುದು ಸರಿಯಲ್ಲ. ಈ ಬೆಳವಣಿಗೆ ಕಾಂಗ್ರೆಸ್ ನ ತುಷ್ಟೀಕರಣ ರಾಜಕಾರಣ ತೋರ್ಪಡಿಸುತ್ತದೆ ಎಂದು ಹೇಳಿದರು.

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಹುಬ್ಬಳ್ಳಿ ಭೇಟಿ ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು, ಸೋನಿಯಾಗಾಂಧಿ ಬರಲಿ ನಾವು ಕಾಂಗ್ರೆಸ್ ನಾಯಕರ ರೀತಿ ಅಳುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಯಾಕೆ ಬಂದರು ಎಂದು ಕಾಂಗ್ರೆಸ್ ನವರು ಕೇಳಿದಂತೆ ನಾವು ಅವರನ್ನು ಕೇಳುವುದಿಲ್ಲ ಎಂದು ಕಾಲೆಳೆದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+