ದ್ವಿತೀಯ ಪಿಯುಸಿಯಲ್ಲಿ ಕರ್ನಾಟಕ ಕರಾವಳಿ ಮುಂದು
ಉಡುಪಿಯಲ್ಲಿ ಶೇ.90.01ರಷ್ಟು, ದಕ್ಷಿಣ ಕನ್ನಡದಲ್ಲಿ ಶೇ.89.92 ಮತ್ತು ಉತ್ತರ ಕನ್ನಡದಲ್ಲಿ ಶೇ. 71.99ರಷ್ಟು ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಸಾಗಿದ್ದಾರೆ.
ಬೆಂಗಳೂರು, ಮೇ 11 : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಈ ಬಾರಿ ಕರಾವಳಿ ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಪ್ರಥಮ ಮೂರು ಸ್ಥಾನಗಳನ್ನು ಬಾಚಿಕೊಂಡು ಹೆಮ್ಮೆಯಿಂದ ಬೀಗುತ್ತಿವೆ.
ಕಳೆದ ಬಾರಿ 2ನೇ ಸ್ಥಾನದಲ್ಲಿದ್ದ ಉಡುಪಿ ಈ ಬಾರಿ ಪ್ರಥಮ ಸ್ಥಾನ ಗಳಿಸಿದೆ. ಹಿಂದಿನ ವರ್ಷ ಮೊದಲನೇ ಸ್ಥಾನದಲ್ಲಿದ್ದ ದಕ್ಷಿಣ ಕನ್ನಡ 2ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ಪ್ರತಿವರ್ಷ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ನಡುವೆ ಜಿದ್ದಾಜಿದ್ದಿ ಫೈಟ್ ಇದ್ದಿದ್ದೇ.[ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ, ಈಗ ಲಭ್ಯ]

ಮೂರನೇ ಸ್ಥಾನವನ್ನು, ಕಳೆದ ಬಾರಿ 4ನೇ ಸ್ಥಾನದಲ್ಲಿದ್ದ ಉತ್ತರ ಕನ್ನಡ ಜಿಲ್ಲೆ ಪಡೆದಿದೆ. ಕೊಡಗು ಜಿಲ್ಲೆಯನ್ನು ನಾಲ್ಕನೇ ಸ್ಥಾನಕ್ಕೆ ತಳ್ಳಿ ಉತ್ತರ ಕನ್ನಡ ಜಿಲ್ಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರು ಜಯಭೇರಿ ಬಾರಿಸಿದ್ದಾರೆ.
ಉಡುಪಿಯಲ್ಲಿ ಶೇ.90.01ರಷ್ಟು, ದಕ್ಷಿಣ ಕನ್ನಡದಲ್ಲಿ ಶೇ.89.92 ಮತ್ತು ಉತ್ತರ ಕನ್ನಡದಲ್ಲಿ ಶೇ. 71.99ರಷ್ಟು ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಸಾಗಿದ್ದಾರೆ. ನಾಲ್ಕನೇ ಸ್ಥಾನ ಪಡೆದಿರುವ ಕೊಡಗಿನಲ್ಲಿ ಶೇ.70.83ರಷ್ಟು ವಿದ್ಯಾರ್ಥಿಗಳು ಕಾಲೇಜು ಮೆಟ್ಟಿಲೇರಲಿದ್ದಾರೆ.
ವಿದ್ಯಾರ್ಜನೆಯ ಕೇಂದ್ರಗಳಾಗಿರುವ ಧಾರವಾಡ (18ನೇ ಸ್ಥಾನ), ಮೈಸೂರು (14ನೇ ಸ್ಥಾನ) ಜಿಲ್ಲೆಗಳಿಗೆ ಏನಾಗಿದೆಯೋ? ಅವುಗಳ ಸ್ಥಾನ ಕುಸಿಯುತ್ತಲೇ ಇದೆ. ಕಳೆದ ವರ್ಷ 15ನೇ ಸ್ಥಾನದಲ್ಲಿದ್ದ ಧಾರವಾಡ 18ನೇ ಸ್ಥಾನಕ್ಕೆ ಕುಸಿದಿದ್ದರೆ, ಕಳೆದ ವರ್ಷ 11ನೇ ಸ್ಥಾನದಲ್ಲಿದ್ದ ಮೈಸೂರು 14ನೇ ಸ್ಥಾನಕ್ಕೆ ಕುಸಿದಿದೆ.[ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಮೇ 24 ಕೊನೆ ದಿನ]
ಒಟ್ಟಾರೆ ಫಲಿತಾಂಶದಲ್ಲಿ ಮೈಸೂರಿನ ಸ್ಥಾನ ಕುಸಿದಿದ್ದರೂ ಸಂತಸದ ಸಂಗತಿಯೇನೆಂದರೆ, ವಿಜ್ಞಾನ ವಿಭಾಗದಲ್ಲಿ ಮೈಸೂರಿನ ವಿಜಯ ವಿಠಲ ಶಾಲೆಯ ಹುಡುಗ ಪ್ರಜ್ವಲ್ ವೈಆರ್ 600 ಅಂಕಗಳಲ್ಲಿ 593 ಅಂಕ ಪಡೆದಿದ್ದು, 5 ವಿಷಯಗಳಲ್ಲಿ 100ಕ್ಕೆ 100 ಅಂಕ ಗಳಿಸಿದ್ದಾನೆ. ಅಭಿನಂದನೆಗಳು ಪ್ರಜ್ವಲ್.
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು












Click it and Unblock the Notifications