Karnataka 2nd PUC 2023 Exam : ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ: ವಿದ್ಯಾರ್ಥಿಗಳು ಅನುಸರಿಸಬೇಕಾದ ಕ್ರಮಗಳು ಇಲ್ಲಿವೆ
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದೆ. ರಾಜ್ಯದ 1,109 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಬೆಂಗಳೂರು, ಮಾರ್ಚ್ 09: ಇಂದಿನಿಂದ (ಮಾರ್ಚ್ 9ರ) ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದೆ. ರಾಜ್ಯದ 1,109 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 7.27 ಲಕ್ಷ ಮಂದಿ ವಿದ್ಯಾರ್ಥಿಗಳು ಸಜ್ಜಾಗಿದ್ದಾರೆ. ವಿದ್ಯಾರ್ಥಿಗಳಿಗಾಗಿ ಶಿಕ್ಷಣ ಸಚಿವರು ಹಲವು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.
ಪರೀಕ್ಷೆಗೆ ಒಟ್ಟು 7.27 ಲಕ್ಷ ಮಂದಿ ವಿದ್ಯಾರ್ಥಿಗಳು ಸಜ್ಜಾಗಿದ್ದು, ಕಲಾ ವಿಭಾಗದಲ್ಲಿ 2,34,815 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 2,47,260 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ 2,44,120 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲಿದ್ದಾರೆ. ಒಟ್ಟು 5,716 ಕಾಲೇಜುಗಳ ವಿದ್ಯಾರ್ಥಿಗಳಿ ಪರೀಕ್ಷೆ ಎದುರಿಸಲಿದ್ದಾರೆ. 1,109 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ.

*ಪರೀಕ್ಷೆಗೆ ಹೊರಡುವ ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು*
1. ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರ ತೆಗೆದುಕೊಂಡು ಹೋಗುವುದು ಕಡ್ಡಾಯ
2 ಮೊಬೈಲ್ ಫೋನ್, ಸ್ಮಾರ್ಟ್ವಾಚ್, ಇಯರ್ಫೋನ್ ಸೇರಿದಂತೆ ಎಲ್ಲ ರೀತಿಯ ಎಲೆಕ್ಟ್ರಾನಿಕ್ಸ್ ಸಾಧನಗಳಿಗೆ ನಿಷೇಧ
ಮಾರ್ಚ್ 9 ರಿಂದ ರಾಜ್ಯದ 1,109 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ.
— B.C Nagesh (@BCNagesh_bjp) March 8, 2023
ಒಟ್ಟು 7,26,195 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.
ಸುಸೂತ್ರವಾಗಿ ಪರೀಕ್ಷೆ ನಡೆಸಲು ಇಲಾಖೆಯಿಂದ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
ಪರೀಕ್ಷೆ ಬರೆಯುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಶುಭಾಶಯಗಳು. @BSBommai
3. ವಿದ್ಯಾರ್ಥಿಗಳು ಸಮಯ ನೋಡಿಕೊಳ್ಳಲು ಗೋಡೆ ಗಡಿಯಾರದ ವ್ಯವಸ್ಥೆ ಮಾಡಲಾಗಿದೆ
4. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು.

5. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು ಕೆಎಸ್ಆರ್ಟಿಸಿ ಬಸ್ನಲ್ಲಿಯೂ ಉಚಿತವಾಗಿ ಪ್ರಯಾಣಿಸಬಹುದು.
6. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಲು ಅವಕಾಶವಿಲ್ಲ
7. ಉಚಿತ ಬಸ್ ಸೇವೆ ಪಡೆಯುವ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರ ತೋರಿಸುವುದು ಕಡ್ಡಾಯ
8. ಪರೀಕ್ಷಾ ಕೇಂದ್ರಗಳ ಬಳಿ ವಿದ್ಯಾರ್ಥಿಗಳು ಹಾಗೂ ಪೋಷಕರು ಕೋರಿಕೆಯ ಮೇಲೆ ನಿಲುಗಡೆಗೆ ಕ್ರಮ ವಹಿಸಲಾಗಿದೆ.
9. ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ ಮಾರ್ಗದಲ್ಲಿ ಎಲ್ಲ ಬಸ್ಗಳು ಕಾರ್ಯಾಚರಣೆ ನಡೆಸಲಿವೆ
10. ಸುಸೂತ್ರವಾಗಿ ಪರೀಕ್ಷೆ ನಡೆಸಲು ಇಲಾಖೆಯಿಂದ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ. 1,109 ಸಹ ಮುಖ್ಯ ಅಧೀಕ್ಷಕರು, 64 ಜಿಲ್ಲಾ ಜಾಗೃತ ದಳ, 525 ತಾಲ್ಲೂಕು ಜಾಗೃತ ದಳ, 2,373 ವಿಷೇಷ ಜಾಗೃತ ದಳ ನಿಯೋಜನೆ ಮಾಡಲಾಗುತ್ತದೆ ಎಂದು ಸಚಿವ ನಾಗೇಶ್ ತಿಳಿಸಿದ್ದಾರೆ. ಜೊತೆಗೆ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.
"ಮಾರ್ಚ್ 9 ರಿಂದ ರಾಜ್ಯದ 1,109 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಒಟ್ಟು 7,26,195 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಸುಸೂತ್ರವಾಗಿ ಪರೀಕ್ಷೆ ನಡೆಸಲು ಇಲಾಖೆಯಿಂದ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಪರೀಕ್ಷೆ ಬರೆಯುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಶುಭಾಶಯಗಳು" ಎಂದು ಸಚಿವ ಬಿಸಿ ನಾಗೇಶ್ ಟ್ವೀಟ್ ಮಾಡಿದ್ದಾರೆ.
-
SSLC Exam 2026: ಕೊನೆಯ ಕ್ಷಣದಲ್ಲಿ ಒತ್ತಡವಿಲ್ಲದೆ ರಿವಿಷನ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
ಇಂದಿನಿಂದ SSLC ಪರೀಕ್ಷೆ: 8.66 ಲಕ್ಷ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಶುಭಹಾರೈಕೆ; ಆತಂಕಬೇಡ ಎಂದ ಸರ್ಕಾರ -
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
SSLC Exam: ಪರೀಕ್ಷಾ ಕೊಠಡಿಯೊಳಗೆ ಪ್ರವೇಶಿಸಿದ ನಂತರ ನಿಮ್ಮ ಮುಂದಿನ 3 ಗಂಟೆ ಹೇಗಿರಬೇಕು? ಇಲ್ಲಿದೆ ಮಾಹಿತಿ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಕನ್ನಡಿಗರ ಮುಕ್ತಜ್ಞಾನದ ತಾಣ ‘ಕಣಜ’ಕ್ಕೆ ಸಿಕ್ಕಿಬಿಟ್ಟಿತೆ ಮುಕ್ತಿ? 3 ತಿಂಗಳಿಂದ ಕಣ್ಮರೆಯಾದ ವೆಬ್ಸೈಟ್ -
ಶಾಲಾ ಶಿಕ್ಷಣದಲ್ಲಿ ಮಹತ್ವದ ಬದಲಾವಣೆ: 1-8ನೇ ತರಗತಿಗೆ ಹೊಸ ಪಠ್ಯಪುಸ್ತಕ ಬಿಡುಗಡೆ ಮಾಡಿದ NCERT -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
ಮಾರ್ಚ್ 17ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ










Click it and Unblock the Notifications