ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿಯಲ್ಲಿ ಉಚಿತ ಪ್ರಯಾಣ
Recommended Video

ಬೆಂಗಳೂರು, ಫೆಬ್ರವರಿ 23: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯ ಕೆಎಸ್ಆರ್ಟಿಸಿ ಸಿಹಿ ಸುದ್ದಿಯೊಂದನ್ನು ನೀಡಿದೆ, ಪರೀಕ್ಷೆ ಬರೆಯಲು ತೆರಳುವ ವಿದ್ಯಾರ್ಥಿಗಳು ಕೆಎಸ್ಆರ್ಟಿಸಿ ಬಸ್ನಲ್ಲಿ ಉಚಿತ ಪ್ರಯಾಣ ಮಾಡಬಹುದಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆಯು ಇದೇ ಮಾರ್ಚ್ 1 ರಿಂದ ಪ್ರಾರಂಭವಾಗುತ್ತಿದ್ದು, ಅಂದಿನಿಂದ ಪರೀಕ್ಷೆ ಮುಗಿಯುವವರೆಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆ ಇದ್ದ ದಿನ ಕೆಎಸ್ಆರ್ಟಿಸಿ ಬಸ್ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು.
ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಮತ್ತು ಪುನಃ ವಾಪಾಸ್ಸು ವಾಸಸ್ಥಳಕ್ಕೆ ಬರುವ ವೇಳೆ ತಮ್ಮ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಕೆಎಸ್ಆರ್ಟಿಸಿಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಗಳಲ್ಲಿ ಉಚಿತಾಗಿ ಪ್ರಯಾಣಿಸಬಹುದಾಗಿದೆ.

ಕೆಎಸ್ಆರ್ಟಿಸಿ ಮುಖ್ಯವಸ್ಯವಸ್ಥಾಪಕರು ಹೀಗೊಂದು ಪ್ರಕಟಣೆ ಹೊರಡಿಸಿದ್ದು, ಹಳ್ಳಿಗಾಡು ಪ್ರದೇಶದಿಂದ ಪಟ್ಟಣಕ್ಕೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇದರಿಂದ ಅನುಕೂಲವಾಗಲಿದೆ.
ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 1 ರಿಂದ 17 ರವರೆಗೆ ಪರೀಕ್ಷೆಗಳು ನಡೆಯಲಿವೆ.












Click it and Unblock the Notifications