ಸಿದ್ದರಾಮಯ್ಯ ,ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಅಂತ್ಯ ಎಂದ ದೇವೇಗೌಡ್ರು: ಸಿದ್ದರಾಮಯ್ಯ ಹೇಳಿದ್ದೇನು?
ಬೆಂಗಳೂರು, ಜನವರಿ 06: ನನ್ನ ಮತ್ತು ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಅಂತ್ಯವಾಗಲಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಭವಿಷ್ಯ ನುಡಿದಿದ್ದಾರೆ. ವಯಸ್ಸಿನಲ್ಲಿ ದೊಡ್ಡವರಾದ ದೇವೇಗೌಡರ ಈ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ. ಅವರಿಗೆ ಅವರ ಪಕ್ಷಕ್ಕೆ ದೀರ್ಘ ಕಾಲ ಆಯುರಾರೋಗ್ಯವನ್ನು ಪರಮಾತ್ಮ ಕರುಣಿಸಲಿ ಎಂದು ಹಾರೈಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನನ್ನ ಮತ್ತು @DKShivakumar ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಅಂತ್ಯವಾಗಲಿದೆ ಎಂದು ಮಾಜಿ ಪ್ರಧಾನಿ @H_D_Devegowda ಅವರು ಭವಿಷ್ಯ ನುಡಿದಿದ್ದಾರೆ. ವಯಸ್ಸಿನಲ್ಲಿ ದೊಡ್ಡವರಾದ ದೇವೇಗೌಡರ ಈ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ. ಅವರಿಗೆ ಅವರ ಪಕ್ಷಕ್ಕೆ ದೀರ್ಘ ಕಾಲ ಆಯುರಾರೋಗ್ಯವನ್ನು ಪರಮಾತ್ಮ ಕರುಣಿಸಲಿ ಎಂದು ಹಾರೈಸುತ್ತೇನೆ.… pic.twitter.com/8KwI7zWMLd
— Siddaramaiah (@siddaramaiah) January 6, 2024
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜಕೀಯ ಭಿನ್ನಾಭಿಪ್ರಾಯ ಏನೇ ಇರಲಿ, ಹಿರಿಯರು ಕಿರಿಯರಿಗೆ ಆಶೀರ್ವಾದ ಮಾಡಬೇಕು, ಶಾಪ ಕೊಡಬಾರದು. ದಶಕಗಳ ಕಾಲ ಜಾತ್ಯತೀತತೆಯ ಕಿರೀಟ ಧರಿಸಿಕೊಂಡು ಬಂದಿದ್ದ ಗೌಡರು ಇಳಿಗಾಲದಲ್ಲಿ ಅದನ್ನು ಕೆಳಗೆಸೆದು ಕೋಮುವಾದಿ ಕಿರೀಟವನ್ನು ಧರಿಸಿಕೊಳ್ಳಬೇಕಾಗಿ ಬಂದಿರುವುದರಿಂದ ನೊಂದು ಹತಾಶೆಯಿಂದ ಇಂತಹ ಹೇಳಿಕೆ ನೀಡಿರಬಹುದೆಂದು ಭಾವಿಸಿದ್ದೇನೆ. ತಾವು ಹೇಳಿದ್ದು ತಪ್ಪು ಎಂದು ಅವರಿಗೆ ಪ್ರಾಮಾಣಿಕವಾಗಿ ಅನುಸರಿಸಿದರೆ ತಮ್ಮ ಹೇಳಿಕೆಯನ್ನು ಹಿಂದಕ್ಕೆ ಪಡೆಯಬಹುದು.

ಯಾವ ರಾಜಕೀಯ ಪಕ್ಷ ಕೂಡಾ ಮತ್ತೊಂದು ರಾಜಕೀಯ ಪಕ್ಷದ ಅಂತ್ಯವನ್ನು ಬಯಸಬಾರದು. "ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆ" ಎಂಬ ಸೊಕ್ಕಿನ ಮಾತುಗಳನ್ನು ಆಡುತ್ತಿರುವ ಬಿಜೆಪಿಯ ಗಾಳಿ ದೇವೇಗೌಡರಿಗೂ ಸೋಕಿದ ಹಾಗಿದೆ. ಅದಕ್ಕೆ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಇದು ಸಂಗ ದೋಷದ ಫಲ ಎಂದು ಸಿದ್ದರಾಮಯ್ಯ ಹೇಳಿದರು.
ಜಾತ್ಯತೀತ ಜನತಾದಳ ಅಂತ್ಯವಾಗಬಾರದು ಎಂದು ನಾನು ಹೃತ್ಪೂರ್ವಕವಾಗಿ ಹಾರೈಸುತ್ತೇನೆ. ಅದೇ ರೀತಿ ದೇವೇಗೌಡರು ಇನ್ನಷ್ಟು ಕಾಲ ರಾಜಕೀಯದಲ್ಲಿ ಸಕ್ರಿಯರಾಗಿರಬೇಕೆಂದು ಕೂಡಾ ನಾನು ಬಯಸುತ್ತೇನೆ. ಆದರೆ ಜೆಡಿಎಸ್ ಮತ್ತು ಅವರ ಹೊಸ ಮಿತ್ರ ಬಿಜೆಪಿ ಶಾಶ್ವತವಾಗಿ ವಿರೋಧ ಪಕ್ಷದಲ್ಲಿಯೇ ಇರಬೇಕೆಂದು ನಾನು ಬಯಸುತ್ತೇನೆ. ನಮ್ಮ ಕಾಂಗ್ರೆಸ್ ಪಕ್ಷ ಈ ಬಯಕೆ ಈಡೇರಿಕೆಗೆ ನಿರಂತರ ಪ್ರಯತ್ನ ಮಾಡಲಿದೆ.
ಜಾತ್ಯತೀತ ಜನತಾ ಪಕ್ಷ ಎನ್ನುವುದು "ಬಿಜೆಪಿಯ ಬಿ ಟೀಮ್" ಎಂದು ಹಿಂದಿನಿಂದಲೇ ನಾನು ಹೇಳಿಕೊಂಡು ಬಂದಿದ್ದೇನೆ. ನನ್ನ ಮಾತನ್ನು ಒಪ್ಪಿಕೊಂಡು ತಮ್ಮ ಸೈದ್ದಾಂತಿಕ ನಿಲುವನ್ನು ಸ್ಪಷ್ಟಪಡಿಸಿದ್ದಕ್ಕೆ ಜೆಡಿಎಸ್ ಪಕ್ಷವನ್ನು ಅಭಿನಂದಿಸುತ್ತೇನೆ. ಈ ಪಕ್ಷದ ಜಾತ್ಯತೀತ ಮುಖವನ್ನು ನಿಜ ಎಂದು ನಂಬಿ ಒಂದಷ್ಟು ಸೆಕ್ಯುಲರ್ ಮತದಾರರು ದಾರಿತಪ್ಪುವುದನ್ನು ಜೆಡಿಎಸ್ ಪಕ್ಷದ ಈ ನಿಲುವು ತಪ್ಪಿಸಿದೆ.
ಇದು ಮುಂದಿನ ಚುನಾವಣೆಯನ್ನು ಜಾತ್ಯತೀತ ಮತ್ತು ಕೋಮುವಾದಿ ಶಕ್ತಿಗಳ ನಡುವಿನ ನೇರ ಸಂಘರ್ಷವಾಗಿ ಪರಿವರ್ತಿಸಿದೆ. ಜಾತ್ಯತೀತತೆ ಮತ್ತು ಸೌಹಾರ್ದತೆಯ ಪರಂಪರೆಯ ಕರ್ನಾಟಕದ ಮತದಾರರು ಮುಂದಿನ ಚುನಾವಣೆಗಳಲ್ಲಿ ಸರಿಯಾದ ಆಯ್ಕೆ ಮಾಡಲಿದ್ದಾರೆ ಎಂಬ ವಿಶ್ವಾಸ ನನಗೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications