ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೀರಲ್ಲಿ ಮುಳುಗುತ್ತಿದ್ದರೂ ಸೆಲ್ಫಿಯಲ್ಲೇ ಬ್ಯುಸಿಯಾದ ಸ್ನೇಹಿತರು!

By Yashaswini
|
Google Oneindia Kannada News

ರಾಮನಗರ, ಸೆಪ್ಟೆಂಬರ್ 25: ಕಾಲೇಜು ವತಿಯಿಂದ ಎನ್‍ಸಿಸಿ ಕ್ಯಾಂಪ್ ಗೆ ತೆರಳಿದ್ದ ವೇಳೆ ವಿದ್ಯಾರ್ಥಿಯೊಬ್ಬ ಕಲ್ಯಾಣಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ರಾಮನಗರದಲ್ಲಿ ನಡೆದಿದೆ.

ನೀವು ನಂಬಲೇಬೇಕು, ಸೆಲ್ಫಿ ಸಾವಿನಲ್ಲಿ ಭಾರತಕ್ಕೆ ಅಗ್ರ ಸ್ಥಾನ!ನೀವು ನಂಬಲೇಬೇಕು, ಸೆಲ್ಫಿ ಸಾವಿನಲ್ಲಿ ಭಾರತಕ್ಕೆ ಅಗ್ರ ಸ್ಥಾನ!

ರಾಮನಗರ ಕನಕಪುರ ತಾಲೂಕಿನ ರಾವುಗೋಡ್ಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬೆಂಗಳೂರಿನ ಜಯನಗರ ನ್ಯಾಷನಲ್ ಕಾಲೇಜಿನ ವಿಶ್ವಾಸ್ ಮೃತ ಪಟ್ಟಿರುವ ವಿದ್ಯಾರ್ಥಿ. ಕಾಲೇಜು ವತಿಯಿಂದ ಎನ್‍ಸಿಸಿ ಕ್ಯಾಂಪ್ ಗೆ 25 ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಲಾಗಿತ್ತು.

Selfie craze kills a student in Ramanagara district

ಈ ವೇಳೆ ಈಜುವ ಸಲುವಾಗಿ ವಿಶ್ವಾಸ್ ಹಾಗೂ ಆತನ ಸ್ನೇಹಿತರು ರಾವುಗೋಡ್ಲು ಬಳಿ ಕಲ್ಯಾಣಿಗೆ ಇಳಿದಿದ್ದರು. ಈ ವೇಳೆ ಸ್ನೇಹಿತರ ಜತೆ ಸೇಲ್ಫಿ ಕ್ಲಿಕ್ಕಿಸಿಕೊಳ್ಳುವ ಭರದಲ್ಲಿ ವಿಶ್ವಾಸ್ ಕಲ್ಯಾಣಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಈ ನಡುವೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ಮೋಜಿನಲ್ಲಿದ್ದ ಸ್ನೇಹಿತರು ವಿಶ್ವಾಸ್ ಮುಳುಗುತ್ತಿರುವುದನ್ನ ಗಮನಿಸಲಿಲ್ಲ. ಹೀಗಾಗಿ ವಿಶ್ವಾಸ್ ಕಲ್ಯಾಣಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

ಭೋರ್ಗರೆಯುವ ಅಪಾಯಕಾರಿ ಅಲೆಗಳ ಜತೆ ನಿಮ್ಮ 'ಸೆಲ್ಫಿ' ಸಾಹಸ ಬೇಡಭೋರ್ಗರೆಯುವ ಅಪಾಯಕಾರಿ ಅಲೆಗಳ ಜತೆ ನಿಮ್ಮ 'ಸೆಲ್ಫಿ' ಸಾಹಸ ಬೇಡ

ಕಾಲೇಜು ಆಡಳಿತ ಮಂಡಳಿಯ ಬೇವಾಬ್ದಾರಿಯಿಂದ ಈ ದುರ್ಘಟನೆ ನಡೆದಿದ್ದು, ನ್ಯಾಯ ಒದಗಿಸುವಂತೆ ಪೋಷಕರು ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

English summary
For Selfie craze a student of Jayanagara National college dies by drown into a small pond in Ravugodlu village in Kanakapura taluk in Ramanagara district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X