ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾಗೆ ಅಶೋಕ್ ಹಾರನಹಳ್ಳಿ ಬಾಸ್
ಬೆಂಗಳೂರು, ಡಿ 20: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾಗಿ ಹಿರಿಯ ವಕೀಲ ಮತ್ತು ಮಾಜಿ ಅಡ್ವೋಕೇಟ್ ಜನರಲ್ ಅಶೋಕ್ ಹಾರನಹಳ್ಳಿ ಆಯ್ಕೆಯಾಗಿದ್ದಾರೆ. ಭಾನುವಾರ (ಡಿ 19) ಎರಡನೇ ಹಂತದ ಮತದಾನ ನಡೆದ ನಂತರ ಮತಎಣಿಕೆ ನಡೆದಿದೆ.
ಇಡೀ ಚುನಾವಣೆಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ರಾಜ್ಯಾದ್ಯಂತ ಕೇವಲ ಶೇ. 25ರಷ್ಟು ಮಾತ್ರ ಮತದಾನವಾಗಿತ್ತು. ಒಟ್ಟು 41 ಸಾವಿರ ಮತದಾರರ ಪೈಕಿ 10,711 ಮತಗಳಷ್ಟೇ ಚಲಾವಣೆಯಾಗಿದ್ದವು. ಮುಂದಿನ ಮೂರು ವರ್ಷಕ್ಕೆ ಹಾರನಹಳ್ಳಿಯವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಹಾರನಹಳ್ಳಿಯವರು 455 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರೆ, ಇವರ ಪ್ರತಿಸ್ಪರ್ಧಿ ಮತ್ತು ಉದ್ಯಮಿಯೂ ಆಗಿರುವ ಎಸ್.ರಘುನಾಥ್ ಅವರಿಗೆ 3,969 ಮತ್ತು ಆರ್. ಲಕ್ಷ್ಮೀಕಾಂತ್ ಅವರಿಗೆ 2,239 ಮತಗಳು ಬಿದ್ದಿದ್ದಾವೆ.

ನಗರದ ಶಂಕರಪುರದಲ್ಲಿರುವ ಚಂದ್ರಶೇಖರ ಭಾರತಿ ಕಲ್ಯಾಣ ಮಂಟಪದಲ್ಲಿ ಎರಡನೇ ಹಂತದ ಮತದಾನ ನಡೆದಿತ್ತು. ಬ್ರಾಹ್ಮಣ ಮಹಾಸಭಾವು ಬೆಂಗಳೂರಿನಲ್ಲಿ ಅತಿಹೆಚ್ಚು ಮತದಾರರನ್ನು ಹೊಂದಿದೆ. ಹಾಗಾಗಿ, ಭಾರೀ ಪೊಲೀಸ್ ಬಂದೋಬಸ್ತ್ ಅನ್ನು ಮಾಡಲಾಗಿತ್ತು.
ಮೊದಲ ಹಂತದ ಮತದಾನ ಡಿಸೆಂಬರ್ ಹನ್ನೆರಡರಂದು ನಡೆದಿತ್ತು. ಮೈಸೂರು, ಶಿವಮೊಗ್ಗ, ಹಾಸನ ಮತ್ತು ರಾಯಚೂರು ಕೇಂದ್ರದಲ್ಲಿ ನಡೆದಿತ್ತು. ಎರಡನೇ ಹಂತದಲ್ಲಿ ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ ಮತ್ತು ತುಮಕೂರಿನ ಜಿಲ್ಲೆಗಳಿಂದ ಮತದಾನ ನಡೆದಿತ್ತು.
ಚುನಾವಣೆ ಕೇಂದ್ರ ಇರದ ಜಿಲ್ಲೆಯ ಮತದಾರರು ಇನ್ನೊಂದು ಕೇಂದ್ರಕ್ಕೆ ತೆರಳಿ ಮತದಾನ ನಡೆಸಬೇಕಾಗಿದ್ದರಿಂದ, ಮತದಾನದ ಪ್ರಮಾಣ ಕಮ್ಮಿಯಾಗಲು ಕಾರಣವಾಗಿದೆ. ಕಳೆದ ಬಾರಿಯೂ ಇದೇ ಸಮಸ್ಯೆ ಎದುರಾಗಿದ್ದರೂ, ಬ್ರಾಹ್ಮಣ ಸಭಾ ಪರ್ಯಾಯ ವ್ಯವಸ್ಥೆಯನ್ನು ಮಾಡಿಕೊಳ್ಳದೇ ಇರುವುದು ಆಕ್ರೋಶಕ್ಕೆ ಕಾರಣವಾಗಿದೆ.
ಅಶೋಕ್ ಹಾರನಹಳ್ಳಿ ವಿರುದ್ಧ ವಂಚನೆ ಆರೋಪ ಕೇಳಿ ಬಂದಿದ್ದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಅವರು ತಕ್ಷಣವೇ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಹಾಸಭಾದ ಕಾರ್ಯಕಾರಿ ಸಮಿತಿ ಮಾಜಿ ಸದಸ್ಯ ಕೆ.ಎನ್. ವೆಂಕಟನಾರಾಯಣ ಒತ್ತಾಯಿಸಿದ್ದರು.
Recommended Video
-
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ?












Click it and Unblock the Notifications