ಭಾರತೀಯರಿಗೆ ಮಾತ್ರ ಹಿರಿಯ ನಾಗರಿಕರ ಕಾಯ್ದೆ ಅನ್ವಯ- ಹೈಕೋರ್ಟ್
ಬೆಂಗಳೂರು ಏ.1. ಭಾರತೀಯರಾದರೆ ಮಾತ್ರ ಹಿರಿಯ ನಾಗರಿಕರ ಕಲ್ಯಾಣ ಕಾಯ್ದೆ ಅನ್ವಯವಾಗುತ್ತದೆ, ವಿದೇಶಿ ಪೌರತ್ವ ಹೊಂದಿರುವವರಿಗಲ್ಲ ಎಂದು ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ.
ಇಂಗ್ಲೆಂಡ್ ಪೌರತ್ವ ಪಡೆದಿದ್ದ ತಾಯಿ ಕರೋಬಿನಾ ಫೆರೆರೋ ಗುರೈನ್ ಎಂಬುವರು ಹಿರಿಯ ನಾಗರಿಕರ ಕಾಯ್ದೆಯಡಿ ಮಂಗಳೂರಿನಲ್ಲಿದ್ದ ತನ್ನ ಮಕ್ಕಳ ವಿರುದ್ಧ ಹೂಡಿದ್ದ ಪ್ರಕರಣವನ್ನು ನ್ಯಾಯಾಲಯ ರದ್ದುಗೊಳಿಸಿದೆ.
ಪ್ರಕರಣ ರದ್ದು ಕೋರಿ ಮಗ ಡೆಫ್ನಿ ಗ್ಲೈಡಸ್ ಲೋಬೋ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾ. ಪಿ.ಕೃಷ್ಣ ಭಟ್ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ.

ಕೋರ್ಟ್ ಆದೇಶವೇನು?
ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಪೀಠ, "ಹಿರಿಯ ನಾಗರಿಕರ ಕಾಯಿದೆಯನ್ನು ರೂಪಿಸಿರುವುದರ ಮೂಲ ಉದ್ದೇಶ, ಯಾರು ಭಾರತೀಯ ಪ್ರಜೆಗಳಿಗೂ ಅವರಿಗೆ ಅನ್ವಯಿಸಲಿ ಎಂದು. ಆದರೆ, ಪಾಸ್ಪೋರ್ಟ್ ಮತ್ತು ಇತರೆ ದಾಖಲೆಗಳನ್ನು ಪರಿಶೀಲಿಸಿದಾಗ ಅವರು ಈ ದೇಶದ ಪ್ರಜೆಯಲ್ಲವೆಂಬುದು ಖಾತ್ರಿಯಾಗಿದೆ. ಹಾಗಾಗಿ ಹಿರಿಯ ನಾಗರಿಕರ ಕಾಯಿದೆ ಅವರಿಗೆ ಅನ್ವಯವಾಗುವುದಿಲ್ಲ'' ಎಂದು ಸ್ಪಷ್ಟಪಡಿಸಿದೆ.
"ಪ್ರತಿವಾದಿಯ ಪಾಸ್ಪೋರ್ಟ್ ನ್ಯಾಯಾಲಯಕ್ಕೆ ಸಲ್ಲಿಸಲಾಗಿದ್ದು, ಅದರಲ್ಲಿ ಅವರು ಬ್ರಿಟಿಷ್ ಪ್ರಜೆಯಾಗಿದ್ದಾರೆಂಬುದು ದೃಢಪಟ್ಟಿದೆ. ಪೋಸ್ಪೋರ್ಟ್ ನಲ್ಲಿ ಆಕೆಯ ಭಾವಚಿತ್ರವೂ ಇದೆ. ಹಾಗಾಗಿ ಭಾರತೀಯ ಸಂವಿಧಾನದಲ್ಲಿ ದ್ವಿಪೌರತ್ವ ಹೊಂದಲು ಅವಕಾಶವಿಲ್ಲ, ಆದ್ದರಿಂದ ದೇಶದಲ್ಲಿ ಜಾರಿಯಲ್ಲಿರುವ ಹಿರಿಯ ನಾಗರಿಕ ಕಾಯ್ದೆ ಅವರಿಗೆ ಅನ್ವಯವಾಗುವುದಿಲ್ಲ'' ಎಂದು ನ್ಯಾಯಾಲಯ ಹೇಳಿದೆ.
ಅಲ್ಲದೆ, ಹಿರಿಯ ನಾಗರಿಕ ಕಲ್ಯಾಣ ಕಾಯಿದೆ 2007 ಸೆಕ್ಷನ್ 2 (ಎಚ್) ರಲ್ಲಿ ವ್ಯಾಖ್ಯಾನಿಸಿರುವಂತೆ 60 ವರ್ಷ ಮೇಲ್ಪಟ್ಟವರು ಮತ್ತು ದೇಶ ವಾಸಿಗಳು ಆ ಕಾಯಿದೆ ವ್ಯಾಪ್ತಿಗೆ ಒಳಪಡಲಿದ್ದಾರೆ. ಆದರೆ ಪ್ರತಿವಾದಿ ವಿದೇಶಿ ಪ್ರಜೆಯಾಗಿರುವುದು ಸ್ಪಷ್ಟವಾಗಿರುವ ಹಿನ್ನೆಲೆಯಲ್ಲಿ ಅವರು ನೀಡಿದ ದೂರಿನ ಮೇರೆಗೆ ಮಂಗಳೂರು ಉಪವಿಭಾಗಾಧಿಕಾರಿ ಕ್ರಮ ಕೈಗೊಂಡಿರುವುದು ಸರಿಯಲ್ಲ. ಹಾಗಾಗಿ ಆದೇಶ ರದ್ದುಗೊಳಿಸಲಾಗುವುದು ಎಂದು ಕೋರ್ಟ್ ಆದೇಶಿಸಿದೆ.

ಏನಿದು ಪ್ರಕರಣ?
ಕರೋಬಿನಾ ಫೆರೆರೋ ಗುರೈನ್ ಎಂಬ ವೃದ್ಧಿಗೆ ಮಂಗಳೂರು ಉಪವಿಭಾಗಾಧಿಕಾರಿಗೆ ದೂರು ನೀಡಿ, ತಮ್ಮ ಮಕ್ಕಳು ತನ್ನನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಹಾಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೋರಿದ್ದರು. ಆ ದೂರು ಆಧರಿಸಿ ಉಪವಿಭಾಗಾಧಿಕಾರಿ, ಮಕ್ಕಳಿಗೆ ನೋಟಿಸ್ ನೀಡಿದ್ದರು.
ಹಾಗಾಗಿ ಪ್ರಕರಣ ರದ್ದು ಕೋರಿ ಮಕ್ಕಳಿಂದ ಹೈಕೋರ್ಟ್ ಮೊರೆ ಹೋಗಿ, ತಾಯಿ ಭಾರತೀಯ ನಾಗರಿಕರಲ್ಲವಾದ್ದರಿಂದ ಕಾಯ್ದೆ ಅನ್ವಯವಿಲ್ಲ. ಹಾಗಾಗಿ ಪ್ರಕರಣ ರದ್ದು ಮಾಡಬೇಕೆಂದು ಅರ್ಜಿ ಸಲ್ಲಿಸಿದ್ದರು.
Recommended Video
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications