Get Updates
Get notified of breaking news, exclusive insights, and must-see stories!

ಹಿರಿಯ ನಾಗರೀಕರ ಮಾಶಾಸನ ಸಿಎಂ ಆದ ನಾಲ್ಕು ಗಂಟೆಯಲ್ಲಿ ಹೆಚ್ಚಿಸಿದ್ದೇನೆ: ಬಸವರಾಜ ಬೊಮ್ಮಾಯಿ

ಬೆಂಗಳೂರು, ಅ.1: ಆರೋಗ್ಯ ಬಹಳ ಮುಖ್ಯ. ಆರೋಗ್ಯ ಗಟ್ಟಿಯಾಗಿದ್ದರೆ ಎಲ್ಲ ಕೆಲಸಗಳನ್ನು ಮಾಡಬಹುದು. ಹೀಗಾಗಿ ಹಿರಿಯರ ಆರೋಗ್ಯಕ್ಕಾಗಿ ಹತ್ತು ಹಲವಾರು ಕಾರ್ಯಕ್ರಮಗಳನ್ನು ಮಾಡಿದ್ದೇವೆ. ಹಿರಿಯ ನಾಗರಿಕರ ಸೇವಾಭತ್ಯೆಯನ್ನು ಹೆಚ್ಚಿಗೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಹಿರಿಯ ನಾಗರಿಕರ ಮಾಶಾಸನವನ್ನು ನಾನು ಮುಖ್ಯಮಂತ್ರಿಯಾದ ನಾಲ್ಕು ಗಂಟೆಯಲ್ಲಿ ಹೆಚ್ಚಿಗೆ ಮಾಡಿದ್ದೇನೆ. ಅಂಗವಿಕಲರ ಮಾಶಾಸನ ಹೆಚ್ಚಿಗೆ ಮಾಡಿದ್ದೇನೆ. ಅವರು ಸ್ವಾಭಿಮಾನದಿಂದ ಬದುಕುವಂತೆ ಮಾಡಲು ಮಾಶಾಸನ ಹೆಚ್ಚಳ ಮಾಡಿದ್ದೇನೆ. ಆರೋಗ್ಯ ಇಲಾಖೆಯಿಂದ 60 ವರ್ಷ ಆದವರಿಗೆ ಉಚಿತ ಆರೋಗ್ಯ ತಪಾಸಣೆಯನ್ನು ವರ್ಷದಲ್ಲಿ ಎರಡು ಬಾರಿ ಮಾಡಲಾಗುತ್ತಿದೆ. ಈ ತಪಾಸಣೆಯ ವೇಳೆಯಲ್ಲಿ ಅವರಿಗೆ ಆರೋಗ್ಯ ತೊಂದರೆಯಿದ್ದರೆ, ಅದಕ್ಕೆ ಸರ್ಕಾರದ ವೆಚ್ಚದಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

500 ಕೋಟಿ ರೂ. ವೆಚ್ಚದಲ್ಲಿ ಕಾಕ್ಲಿಯರ್ ಇಂಪ್ಲಾಂಟ್

500 ಕೋಟಿ ರೂ. ವೆಚ್ಚದಲ್ಲಿ ಕಾಕ್ಲಿಯರ್ ಇಂಪ್ಲಾಂಟ್

ಅಲ್ಲದೇ ರಾಜ್ಯದಲ್ಲಿ ಉಚಿತವಾಗಿ ಕಣ್ಣಿನ ತಪಾಸಣೆಯನ್ನು ಮಾಡುತ್ತಿದ್ದೇವೆ. ಈ ಸಂದರ್ಭದಲ್ಲಿ ಶಸ್ತ್ರ ಚಿಕಿತ್ಸೆ ಹಾಗೂ ಕನ್ನಡಕ ನೀಡುವ ಮೂಲಕ ದೃಷ್ಠಿ ಸಮಸ್ಯೆ ನಿವಾರಣೆಗೆ ಕಾರ್ಯಕ್ರಮ ರೂಪಿಸಿದ್ದೇವೆ. ಕಿವಿ ಕೇಳಿಸದ ಹಿರಿಯ ನಾಗರೀಕರಿಗೆ 500 ಕೋಟಿ ರೂ. ವೆಚ್ಚದಲ್ಲಿ ಕಾಕ್ಲಿಯರ್ ಇಂಪ್ಲಾಂಟ್ ನೀಡುವ ಕಾರ್ಯಕ್ರಮ ಮಾಡಿದ್ದೇವೆ. ವಯಸ್ಸಾದ ಮೇಲೆ ಡಯಾಲಿಸಸ್ ಗೆ ಹಿರಿಯರು ಹೋಗುತ್ತಾರೆ. ಹಿರಿಯ ನಾಗರೀಕರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲು ಹೇಳಿ, 30 ಸಾವಿರ ಸೈಕಲ್ ಇತ್ತು. ಅದನ್ನು 60 ಸಾವಿರಕ್ಕೆ ಹೆಚ್ಚಿಸಲಾಗಿದೆ. ರಾಜ್ಯದಲ್ಲಿ ಕ್ಯಾನ್ಸರ್ ಕಿಮಿಯೋಥೆರಪಿ ಎರಡು ಪಟ್ಟು ಹೆಚ್ಚಿಸಿದ್ದೇವೆ. 12 ಹೊಸ ಕ್ಯಾನ್ಸರ್ ಕೇಂದ್ರಗಳನ್ನು ಪ್ರಾರಂಭ ಮಾಡುತ್ತಿದ್ದೇವೆ ಎಂದರು.

ವಿ. ಸೋಮಣ್ಣ ಯುವಕರಿಗಿಂತ ಮುಂದೆ ಇರುತ್ತಾರೆ

ವಿ. ಸೋಮಣ್ಣ ಯುವಕರಿಗಿಂತ ಮುಂದೆ ಇರುತ್ತಾರೆ

ಸಮಾಜದಲ್ಲಿ ಮನುಷ್ಯನಿಗೆ ಹಲವಾರು ಹೆಸರು, ಬಿರುದುಗಳಿದ್ದಾವೆ. ಮಕ್ಕಳು, ಕಿರಿಯರು, ಯುವಕರು, ಹಿರಿಯರು ಹೀಗೆ ವಯಸ್ಸಿನ ಆಧಾರದ ಮೇಲೆ ನಾಮಕರಣ ಆಗುತ್ತದೆ. ಆದರೆ ನಮ್ಮ ಬದುಕಿನಲ್ಲಿ ನಾವು ಯಾವ ರೀತಿ ನಮ್ಮ ಜೀವನ ಶೈಲಿಯನ್ನು ನಡೆಸುತ್ತೇವೆ, ಅದರ ಮೇಲೆ ನಾವು ಹಿರಿಯರು, ಕಿರಿಯರು ಎಂಬುದು ನಿರ್ಧಾರ ಆಗುತ್ತದೆ. ನನಗಿಂತ ಹತ್ತಾರು ಜನರು ಹಿರಿಯರಿದ್ದಾರೆ. ಅವರ ಜೀವನಶೈಲಿ ಕ್ರೀಯಾಶೀಲ ಚಟುವಟಿಕೆಯಿಂದ ಕೂಡಿದೆ. ಅವರಿಗೆ ಯಾವತ್ತು ಹಿರಿಯರು ಎನ್ನಲು ಆಗುವುದಿಲ್ಲ. ಆ ರೀತಿಯಲ್ಲಿ ಅವರು ಕೆಲಸವನ್ನು ಮಾಡುತ್ತಾರೆ. ಅದಕ್ಕೆ ಉದಾಹರಣೆ ನಮ್ಮ ವಿ. ಸೋಮಣ್ಣ ಅವರು. ವಿ. ಸೋಮಣ್ಣ ಅವರಿಗೆ ಎಷ್ಟು ವಯಸ್ಸಾಗಿದೆ ಅನ್ನುವುದನ್ನು ನನಗೆ ಕಂಡು ಹಿಡಿಯಲು ಆಗಿಲ್ಲ. ಅವರು ಎಲ್ಲರದಲ್ಲೂ ಯುವಕರಿಗಿಂತ ಮುಂದೆ ಇರುತ್ತಾರೆ. ವಿಶ್ರಾಂತಿ ಇಲ್ಲದೇ ನಿರಂತರವಾಗಿ ಕೆಲಸ ಮಾಡುತ್ತಾರೆ. ಇಂತಹ ಅನೇಕ ಹಿರಿಯರು ನಮ್ಮ ಜೊತೆಗೆ ಇದ್ದಾರೆ. ಅತ್ಯಂತ ಕ್ರೀಯಾಶೀಲರಾಗಿ ಪಾದರಸದಂತೆ ಓಡಾಡುವ ಹಿರಿಯರು ಇದ್ದಾರೆ ಎಂದರು.

ನಮ್ಮ ಯುವಕರು ಕಂಪ್ಯೂಟರ್ ಮತ್ತು ಐಪ್ಯಾಡ್ ಮುಂದೆ ಕುಳಿತರೆ ಅದನ್ನು ಬಿಟ್ಟು ಅಲುಗಾಡುವುದಿಲ್ಲ. ಎಷ್ಟರಮಟ್ಟಿಗೆ ವಸ್ಯನಿಗಳಾಗಿದ್ದಾರೆ ಎಂದರೆ, ಎಲ್ಲ ಕೆಲಸಗಳನ್ನು ಅದರ ಮುಂದೆಯೇ ಮಾಡುತ್ತಾರೆ. ಇದರಿಂದಾಗಿ ಕಿರಿಯರು ಮತ್ತು ಹಿರಿಯರ ಬಗ್ಗೆ ವಯಸ್ಸಿನ ಆಧಾರದ ಮೇಲೆ ಹೇಳಲಾಗುತ್ತದೆ. ನಮ್ಮನ್ನು ನಾವು ಅತ್ಯಂತ ಕ್ರೀಯಾಶೀಲರಾಗಿ ತೊಡಗಿಸಿಕೊಂಡರೆ, ನಮಗೆ ಮುಪ್ಪು, ಮುದುಕ, ಹಿರಿಯ ಎನ್ನುವ ಪದ ಬರುವುದಿಲ್ಲ ಎಂದರು.

ಜೀವನ ಚೈತನ್ಯ, ಜೀವನ ಶೈಲಿ

ಜೀವನ ಚೈತನ್ಯ, ಜೀವನ ಶೈಲಿ

ಜೀವನ ಚೈತನ್ಯ, ಜೀವನ ಶೈಲಿ ಮತ್ತು ಅನುಭವವನ್ನು ರೂಡಿ ಮಾಡಿಕೊಂಡರೆ ನಾವು ಕ್ರೀಯಾಶೀಲರಾಗಿರುವುದಕ್ಕೆ ಸಾಧ್ಯ. ಬಹಳಷ್ಟು ಜನರು ನಿವೃತ್ತಿ ಹೊಂದುತ್ತಿರಿ. ನಿವೃತ್ತಿ ಎನ್ನುವುದು ಸರ್ಕಾರ ಮಾಡಿರುವುದು. ನಿಮಗೆ ಕೆಲಸ ಮಾಡಲು ಆಗುವುದಿಲ್ಲ ಅಂತಲ್ಲ. ಯುವಕರಿಗೆ ಕೆಲಸ ಕೊಡಲು ಮಾಡಿರುತ್ತಾರೆ. ನಿವೃತ್ತಿಯಾದ ಮೇಲೂ ನೀವು ಕೆಲಸ ಮಾಡಬಹುದು. ಹೊಸ ಗುರಿ, ಹೊಸ ವಿಧಾನ, ಹೊಸ ಚೈತನ್ಯ ತುಂಬಿಕೊಳ್ಳಲು ಸಾಧ್ಯವಿದೆ.

ಎಲ್ಲ ದೇಶದಲ್ಲಿಯೂ ಕೂಡ ವಯಸ್ಸಾದ ಕ್ರೀಯಾಶೀಲ ಹಿರಿಯರಿದ್ದಾರೆ. ಅವರ ಅನುಭವ ಮತ್ತು ಶಕ್ತಿಯನ್ನು ಬಳಕೆ ಮಾಡುವುದು ಜಾಣತನ. ಹೀಗಾಗಿ ನಾನು ವಿಶ್ವ ಹಿರಿಯ ನಾಗರಿಕರ ದಿನದಂದು ಒಂದು ತೀರ್ಮಾನವನ್ನು ಮಾಡಿದ್ದೇನೆ. ಎಲ್ಲೆಲ್ಲಿ ಸಾಧ್ಯವಿದೆ ಅಲ್ಲಿ ಹಿರಿಯ ನಾಗರಿಕರ ಸೇವೆಯನ್ನು ಸರ್ಕಾರದ ಸಹಾಯ, ಸಲಹೆಗಳಿಗಾಗಿ ತೆಗೆದುಕೊಳ್ಳುವ ಕೆಲಸವನ್ನು ನಾವು ಮಾಡುತ್ತೇವೆ. ಇದರಿಂದ ಯಾವುದೇ ಯುವಕರಿಗೆ ತೊಂದರೆ ಆಗುವುದಿಲ್ಲ. ಖಾಲಿಯಾದ ಹುದ್ದೆಗಳಿಗೆ ಯುವಕರನ್ನೇ ತುಂಬುತ್ತೇವೆ. ಹಿರಿಯರ ಅನುಭವ ಬುತ್ತಿಯನ್ನು ನಾವು ಈ ನಾಡು ಕಟ್ಟಲು ಬಳಕೆ ಮಾಡಿಕೊಳ್ಳುತ್ತೇವೆ. ಇದರ ಸಲಹೆಯನ್ನು ನಾನು ನಮ್ಮ ಇಲಾಖೆಯ ಅಧಿಕಾರಿಗಳಿಗೆ ನೀಡಿ, ವಿಶೇಷವಾದ ಯೋಜನೆಯನ್ನು ರೂಪಿಸಲು ಸೂಚಿಸುತ್ತೇನೆ ಎಂದರು.

ವೃದ್ದಾಶ್ರಮಗಳ ಹೆಚ್ಚಳ ಖೇದಕರ:

ವೃದ್ದಾಶ್ರಮಗಳ ಹೆಚ್ಚಳ ಖೇದಕರ:

ರಾಜ್ಯದಲ್ಲಿ ವೃದ್ದಾಶ್ರಮಗಳ ಸಂಖ್ಯೆ ಹೆಚ್ಚುತ್ತಿರುವುದು ನನಗೆ ಖೇದಕರ ಎನಿಸುತ್ತಿದೆ. 5 ಸಾವಿರ ವರ್ಷದ ಪರಂಪರೆ, ಕುಟುಂಬದ ಜನರು ವೃದ್ದಾಶ್ರಮಗಳಿಗೆ ಕಳುಹಿಸುತ್ತಿರುವುದು ಬಹಳ ನೋವಿನ ಸಂಗತಿ. ಸಮಾಜದಲ್ಲಿ ಸಂಬಂಧಗಳಿಗೆ ಬೆಲೆ ಇಲ್ಲದಂತಾಗಿದೆ. ಹಿರಿಯರಿಂದ ಪಡೆದಿರುವುದನ್ನು ಅವರನ್ನು ನೋಡಿಕೊಳ್ಳುವ ಮೂಲಕ ತೀರಿಸಬೇಕು. ಎಲ್ಲದಕ್ಕಿಂತ ಮುಖ್ಯುವಾದದ್ದು ಮಾನವೀಯತೆ. ಮಾನವೀಯತೆಯಿಂದ ನಡೆದುಕೊಳ್ಳುವುದು ಮುಖ್ಯವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಹಾಲಪ್ಪ ಆಚಾರ್, ವಿ. ಸೋಮಣ್ಣ, ಶಂಕರ್ ಪಾಟೀಲ ಮುನೇನಕೊಪ್ಪ, ಶಾಸಕರಾದ ಉದಯ್ ಗರುಡಾಚಾರ್ಯ, ರವಿ ಸುಬ್ರಹ್ಮಣ್ಯ ಇತರರು ಉಪಸ್ಥಿತರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+