ನಮ್ಮದೇ ನಡೆಯಬೇಕು ಎಂಬುದು ಬ್ರಾಹ್ಮಣ್ಯದ ಕೆಟ್ಟತನ
ಶಾಲೆಯ ಪಠ್ಯ ಕ್ರಮದಲ್ಲಿ ಲೋಕದ ತೀವ್ರ ಅನುಭವಗಳನ್ನು ಅನಾವರಣಗೊಳಿಸುವಂತಹ ಮತ್ತು ಸ್ವಾತಂತ್ರ್ಯದ ಹೋರಾಟ & ಹೋರಾಟಗಾರರ ಮಹತ್ವವನ್ನು ತಿಳಿಸುವಂತಹ ಪಠ್ಯಗಳನ್ನು ಕೈಬಿಟ್ಟು, ದುರುದ್ದೇಶ ಮತ್ತು ಅಪ್ಪಟ್ಟ ಜಾತಿ ಪ್ರೇಮದ ಕಾರಣಕ್ಕೆ ಕೇವಲ ಒಂದು ನಿರ್ದಿಷ್ಟ ಜಾತಿಗೆ ಸೇರಿದ ಬರಹಗಾರರ ಪಠ್ಯಗಳನ್ನು ಅಳವಡಿಸಲು ಹೊರಟಿರುವುದು ವಿಪರ್ಯಾಸದ ಸಂಗತಿಯಾಗಿದೆ.
ಬ್ರಿಟಿಷರ ನೇಣುಗಂಬವನ್ನೇ ಅಣಕಿಸಿದಂತಹ ಮಹಾನ್ ಕ್ರಾಂತಿಕಾರಿ ಹೋರಾಟಗಾರ ಭಗತ್ ಸಿಂಗ್, ಇಡೀ ಜಗತ್ತಿಗೇ ಜ್ಞಾನದ ಬೆಳಕಾಗಬಲ್ಲ ಬಸವಣ್ಣನವರ ವಚನಗಳು ಹಾಗೂ ಕನ್ನಡ ಸಾಹಿತ್ಯಕ್ಕೆ ವಿಶಿಷ್ಟ ಭಾಷೆ ಮತ್ತು ದಟ್ಟವಾದ ಅನುಭವದ ಸ್ಪರ್ಶ ನೀಡಿದ ಲಂಕೇಶರ ಬರಹಗಳು ಮತ್ತು ವೈಚಾರಿಕತೆಗೆ ಹೆಸರಾಗಿದ್ದ ಎ.ಎನ್.ಮೂರ್ತಿರಾಯರ ಬರಹಗಳಿಗೆ ಕತ್ತರಿ ಹಾಕಿರುವುದು, ಸರ್ಕಾರದ ಅಜ್ಞಾನ ಮತ್ತು ಅಯೋಗ್ಯತನದ ಸಂಕೇತವಾಗಿದೆ.
ಇಂತಹ ಸಂಗತಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕಿದ್ದ ಶಿಕ್ಷಣ ಸಚಿವರೇ ಈ ನಾನ್ ಸೆನ್ಸ್ ಗಳನ್ನು ಅನುಮೋದಿಸುತ್ತಿರುವುದು ಅಪಾಯಕಾರಿ ಬೆಳವಣಿಗೆಯಾಗಿದ್ದು ಇವರು ಆರ್ ಎಸ್ ಎಸ್ ನ ಅಣತಿಯಂತೆ ಕೆಲಸ ಮಾಡುತ್ತಿರುವುದು ಸ್ಪಷ್ಟವಾಗಿದೆ.
ನಾಗೇಶ್ ಅವರೇ,
ನೀವು ಸಂವಿಧಾನಾತ್ಮಕ ವ್ಯವಸ್ಥೆಯ ಪ್ರತಿನಿಧಿಯೇ ಹೊರತು ಆರ್ ಎಸ್ ಎಸ್ ಎಂಬ ದೇಶದ್ರೋಹಿ ಸಂಘಟನೆಯ ವಕ್ತಾರರಲ್ಲ ಎಂಬುದನ್ನು ನೆನಪಿಡಿ. ಇನ್ನು ತಲೆಯಲ್ಲಿ ಮೂರು ಕಾಸಿನ ಜ್ಞಾನ ಇಲ್ಲದ ಮತ್ತು ದೇಶದ ಪ್ರಜಾಪ್ರಭುತ್ವ, ಸ್ವಾತಂತ್ರ್ಯ ಹೋರಾಟದ ಕುರಿತಂತೆ ಯಾವುದೇ ತಿಳುವಳಿಕೆಯಿಲ್ಲದ ಹಾಗೂ ವಚನ ಚಳುವಳಿಯ ಮಹತ್ವ ಗೊತ್ತಿಲ್ಲದ ಕೆಲವು ತಲೆ ಹರಟೆಗಳನ್ನು ಪಠ್ಯ ಸಮಿತಿಗೆ ಆಯ್ಕೆ ಮಾಡಿರುವ ಸರ್ಕಾರವು ಕೂಡಲೇ ಅಂತ ಪೂರ್ವಾಗ್ರಹ ಪೀಡಿತರನ್ನು ಪಠ್ಯ ಸಮಿತಿಯಿಂದ ತೆಗೆದುಹಾಕಿ, ಶಿಕ್ಷಣ ತಜ್ಞರು ಮತ್ತು ಇತಿಹಾಸಕಾರರನ್ನು ನೇಮಿಸಬೇಕು ಎಂದು ಈ ಮೂಲಕ ಆಗ್ರಹಿಸುತ್ತೇನೆ.

ಮಕ್ಕಳಿಗೆ ಪ್ರೇರಣೆ ದೊರೆಯಲು ಭಗತ್ ಸಿಂಗ್ ಮತ್ತು ಬಸವಣ್ಣನಂತಹ ಮಹಾನ್ ವ್ಯಕ್ತಿಗಳ ಸಾಧನೆ ಮತ್ತು ತತ್ವಗಳು ಅಗತ್ಯವಲ್ಲವೇ? ಇನ್ನು ಬಾಬಾ ಸಾಹೇಬರು ಹೇಳಿದಂತೆ " ನಾನು ಸಮಾಜದ ಹಿತಕ್ಕೆ ವಿರುದ್ಧವಾಗಿರುವ ಬ್ರಾಹ್ಮಣ್ಯದ ಕಡು ವಿರೋಧಿಯೇ ವಿನಃ ಬ್ರಾಹ್ಮಣರ ವಿರೋಧಿಯಲ್ಲ" ಎಂಬ ಮಾತನ್ನು ಮತ್ತೊಮ್ಮೆ ಅನುಮೋದಿಸುತ್ತೇನೆ.
ಜೊತೆಗೆ ಬ್ರಾಹ್ಮಣ್ಯದ ಚೇಷ್ಠೆ ಮತ್ತು ಅಜ್ಞಾನದ ಅಹಂಕಾರಗಳನ್ನು ಪ್ರದರ್ಶಿಸುತ್ತಿರುವ ಬ್ರಾಹ್ಮಣ್ಯವನ್ನು ತೀವ್ರವಾಗಿ ವಿರೋಧಿಸುತ್ತೇನೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications