ಕೇಂದ್ರ ಮಾಜಿ ಸಚಿವ ಸಿ.ಕೆ.ಜಾಫರ್ ಪರಿಚಯ
ಬೆಂಗಳೂರು, ನವೆಂಬರ್ 25 : ಮಾಜಿ ಕೇಂದ್ರ ಸಚಿವ ಸಿ.ಕೆ.ಜಾಫರ್ ಷರೀಫ್ ವಿಧಿವಶರಾಗಿದ್ದಾರೆ. ಕರ್ನಾಟಕ ಕಾಂಗ್ರೆಸ್ ಹಿರಿಯ ನಾಯಕರೊಬ್ಬರನ್ನು ಕಳೆದುಕೊಂಡಿದೆ. ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಇದು ಪಕ್ಷಕ್ಕೆ ಹಿನ್ನಡೆ ತಂದಿದೆ.
ಚಳ್ಳಕೆರೆ ಕರೀಂ ಜಾಫರ್ ಷರೀಫ್ (ಸಿ.ಕೆ.ಜಾಫರ್ ಷರೀಫ್) ಸಂಸದರಾಗಿ, ರೈಲ್ವೆ ಸಚಿವರಾಗಿ ರಾಜ್ಯದ ಜನರಿಗೆ ಚಿರಪರಿಚಿತರು. ರೈಲ್ವೆ ಮಾರ್ಗಗಳ ಅಭಿವೃದ್ಧಿ, ಗೇಜ್ ಪರಿವರ್ತನೆ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಅವರ ಕೊಡುಗೆ ಅಪಾರ.
ಯಲಹಂಕ ರೈಲ್ವೆ ನಿಲ್ದಾಣದ ಸಮೀಪದ ರೈಲು ಮತ್ತು ಗಾಲಿ ಕಾರ್ಖಾನೆ ಸ್ಥಾಪನೆ ಹಿಂದೆ ಜಾಫರ್ ಷರೀಫ್ ಶ್ರಮವಿದೆ. ಕಾಂಗ್ರೆಸ್ ಪಕ್ಷದಲ್ಲಿ ಇಂದಿರಾ ಗಾಂಧಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಜಾಫರ್ ಷರೀಫ್ ಬೆಂಗಳೂರು ಉತ್ತರ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದರು.
ಪಿ.ವಿ.ನರಸಿಂಹರಾವ್ ಅವರು ಪ್ರಧಾನಿಯಾಗಿದ್ದಾಗ (1991-1995) ಸಿ.ಕೆ.ಜಾಫರ್ ಷರೀಫ್ ರೈಲ್ವೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. 2004ರ ಲೋಕಸಭೆ ಚುನಾವಣೆಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಸಾಂಗ್ಲಿಯಾನ ವಿರುದ್ಧ ಸೋಲು ಅನುಭವಿಸಿದ್ದರು.

ಚಿತ್ರದುರ್ಗದವರು
* ನವೆಂಬರ್ 3,1933ರಲ್ಲಿ ಜನನ
* ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಹುಟ್ಟೂರು
* ಎಸ್.ನಿಜಲಿಂಗಪ್ಪ ಮುಖ್ಯಮಂತ್ರಿಯಾಗಿದ್ದಾಗ ಕಾಂಗ್ರೆಸ್ ಸೇರ್ಪಡೆ

ಚಳವಳಿ ನೋಡಿ ರಾಜಕೀಯಕ್ಕೆ
* ತಂದೆ ಚಳ್ಳಕೆರೆಯ ದೊಡ್ಡೇರಿ ಗ್ರಾಮದ ಸಿ.ಅಬ್ದುಲ್ ಕರೀಮ್
* ಮೆಟ್ರುಕ್ಯುಲೇಷನ್ ತನಕ ಶಿಕ್ಷಣ
* ಸ್ವಾತಂತ್ರ್ಯ ಚಳವಳಿ ನೋಡಿ ರಾಜಕೀಯದತ್ತ ಆಕರ್ಷಣೆ
* ನಿಜಲಿಂಗಪ್ಪ ಗರಡಿಯಲ್ಲಿ ಪಳಗಿದರು
* ನಿಜಲಿಂಗಪ್ಪ ಮುಖ್ಯಮಂತ್ರಿಯಾದ ಮೇಲೆ ಬೆಂಗಳೂರಿಗೆ ಬಂದರು

ಕಾಂಗ್ರೆಸ್ ಇಬ್ಬಾಗವಾಯಿತು
* ಕಾಂಗ್ರೆಸ್ ಇಬ್ಬಾಗವಾದಾಗ ನಿಜಲಿಂಗಪ್ಪ ಅವರ ಜೊತೆ ಹೋಗಲಿಲ್ಲ
* ಇದರಿಂದಾಗಿ ಇಂದಿರಾ ಗಾಂಧಿ ಅವರ ಮೆಚ್ಚುಗೆಗೆ ಕಾರಣದರು
* 1971ರಲ್ಲಿ ಬೆಂಗಳೂರು ದಕ್ಷಿಣದಿಂದ ಸಂಸದರಾಗಿ ಆಯ್ಕೆ
* 1991-1995ರ ತನಕ ರೈಲ್ವೆ ಸಚಿವರಾಗಿ ಕಾರ್ಯ ನಿರ್ವಹಣೆ

ಪುತ್ರರನ್ನು ಕಳೆದುಕೊಂಡರು
* 1999ರಲ್ಲಿ ಕಿರಿಯ ಪುತ್ರ ನಿಧನ
* 2008ರಲ್ಲಿ ಪತ್ನಿ ನಿಧನ
* 2009ರಲ್ಲಿ ಹಿರಿಯ ಪುತ್ರ ನಿಧನ

ಸಂಸದರಾಗಿ ಆಯ್ಕೆ
* 1971ರಲ್ಲಿ ಮೊದಲ ಬಾರಿಗೆ ಸಂಸದರಾಗಿ ಆಯ್ಕೆ
* 1977ರಲ್ಲಿ 2ನೇ ಬಾರಿಗೆ ಸಂಸತ್ಗೆ ಆಯ್ಕೆ
* 1980ರಲ್ಲಿ 3ನೇ ಬಾರಿಗೆ ಆಯ್ಕೆ
* 1984 4ನೇ ಬಾರಿಗೆ ಆಯ್ಕೆ, ನೀರಾವರಿ ಖಾತೆ ರಾಜ್ಯ ಸಚಿವ ಸ್ಥಾನ
* 1988-89 ಕಲ್ಲಿದ್ದಲು ಖಾತೆ ರಾಜ್ಯ ಸಚಿವ ಖಾತೆ ಹೊಣೆ
* 1989 ಲೋಕಸಭೆಗೆ 5ನೇ ಬಾರಿಗೆ ಆಯ್ಕೆ
* 1991-95 ಲೋಕಸಭೆಗೆ 6ನೇ ಬಾರಿಗೆ ಆಯ್ಕೆ ರೈಲ್ವೆ ಖಾತೆ ಹೊಣೆ
* 2004ರಲ್ಲಿ ಪರಾಭವವ
-
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ












Click it and Unblock the Notifications