ಕೇಂದ್ರ ಮಾಜಿ ಸಚಿವ ಸಿ.ಕೆ.ಜಾಫರ್ ಪರಿಚಯ
ಬೆಂಗಳೂರು, ನವೆಂಬರ್ 25 : ಮಾಜಿ ಕೇಂದ್ರ ಸಚಿವ ಸಿ.ಕೆ.ಜಾಫರ್ ಷರೀಫ್ ವಿಧಿವಶರಾಗಿದ್ದಾರೆ. ಕರ್ನಾಟಕ ಕಾಂಗ್ರೆಸ್ ಹಿರಿಯ ನಾಯಕರೊಬ್ಬರನ್ನು ಕಳೆದುಕೊಂಡಿದೆ. ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಇದು ಪಕ್ಷಕ್ಕೆ ಹಿನ್ನಡೆ ತಂದಿದೆ.
ಚಳ್ಳಕೆರೆ ಕರೀಂ ಜಾಫರ್ ಷರೀಫ್ (ಸಿ.ಕೆ.ಜಾಫರ್ ಷರೀಫ್) ಸಂಸದರಾಗಿ, ರೈಲ್ವೆ ಸಚಿವರಾಗಿ ರಾಜ್ಯದ ಜನರಿಗೆ ಚಿರಪರಿಚಿತರು. ರೈಲ್ವೆ ಮಾರ್ಗಗಳ ಅಭಿವೃದ್ಧಿ, ಗೇಜ್ ಪರಿವರ್ತನೆ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಅವರ ಕೊಡುಗೆ ಅಪಾರ.
ಯಲಹಂಕ ರೈಲ್ವೆ ನಿಲ್ದಾಣದ ಸಮೀಪದ ರೈಲು ಮತ್ತು ಗಾಲಿ ಕಾರ್ಖಾನೆ ಸ್ಥಾಪನೆ ಹಿಂದೆ ಜಾಫರ್ ಷರೀಫ್ ಶ್ರಮವಿದೆ. ಕಾಂಗ್ರೆಸ್ ಪಕ್ಷದಲ್ಲಿ ಇಂದಿರಾ ಗಾಂಧಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಜಾಫರ್ ಷರೀಫ್ ಬೆಂಗಳೂರು ಉತ್ತರ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದರು.
ಪಿ.ವಿ.ನರಸಿಂಹರಾವ್ ಅವರು ಪ್ರಧಾನಿಯಾಗಿದ್ದಾಗ (1991-1995) ಸಿ.ಕೆ.ಜಾಫರ್ ಷರೀಫ್ ರೈಲ್ವೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. 2004ರ ಲೋಕಸಭೆ ಚುನಾವಣೆಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಸಾಂಗ್ಲಿಯಾನ ವಿರುದ್ಧ ಸೋಲು ಅನುಭವಿಸಿದ್ದರು.

ಚಿತ್ರದುರ್ಗದವರು
* ನವೆಂಬರ್ 3,1933ರಲ್ಲಿ ಜನನ
* ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಹುಟ್ಟೂರು
* ಎಸ್.ನಿಜಲಿಂಗಪ್ಪ ಮುಖ್ಯಮಂತ್ರಿಯಾಗಿದ್ದಾಗ ಕಾಂಗ್ರೆಸ್ ಸೇರ್ಪಡೆ

ಚಳವಳಿ ನೋಡಿ ರಾಜಕೀಯಕ್ಕೆ
* ತಂದೆ ಚಳ್ಳಕೆರೆಯ ದೊಡ್ಡೇರಿ ಗ್ರಾಮದ ಸಿ.ಅಬ್ದುಲ್ ಕರೀಮ್
* ಮೆಟ್ರುಕ್ಯುಲೇಷನ್ ತನಕ ಶಿಕ್ಷಣ
* ಸ್ವಾತಂತ್ರ್ಯ ಚಳವಳಿ ನೋಡಿ ರಾಜಕೀಯದತ್ತ ಆಕರ್ಷಣೆ
* ನಿಜಲಿಂಗಪ್ಪ ಗರಡಿಯಲ್ಲಿ ಪಳಗಿದರು
* ನಿಜಲಿಂಗಪ್ಪ ಮುಖ್ಯಮಂತ್ರಿಯಾದ ಮೇಲೆ ಬೆಂಗಳೂರಿಗೆ ಬಂದರು

ಕಾಂಗ್ರೆಸ್ ಇಬ್ಬಾಗವಾಯಿತು
* ಕಾಂಗ್ರೆಸ್ ಇಬ್ಬಾಗವಾದಾಗ ನಿಜಲಿಂಗಪ್ಪ ಅವರ ಜೊತೆ ಹೋಗಲಿಲ್ಲ
* ಇದರಿಂದಾಗಿ ಇಂದಿರಾ ಗಾಂಧಿ ಅವರ ಮೆಚ್ಚುಗೆಗೆ ಕಾರಣದರು
* 1971ರಲ್ಲಿ ಬೆಂಗಳೂರು ದಕ್ಷಿಣದಿಂದ ಸಂಸದರಾಗಿ ಆಯ್ಕೆ
* 1991-1995ರ ತನಕ ರೈಲ್ವೆ ಸಚಿವರಾಗಿ ಕಾರ್ಯ ನಿರ್ವಹಣೆ

ಪುತ್ರರನ್ನು ಕಳೆದುಕೊಂಡರು
* 1999ರಲ್ಲಿ ಕಿರಿಯ ಪುತ್ರ ನಿಧನ
* 2008ರಲ್ಲಿ ಪತ್ನಿ ನಿಧನ
* 2009ರಲ್ಲಿ ಹಿರಿಯ ಪುತ್ರ ನಿಧನ

ಸಂಸದರಾಗಿ ಆಯ್ಕೆ
* 1971ರಲ್ಲಿ ಮೊದಲ ಬಾರಿಗೆ ಸಂಸದರಾಗಿ ಆಯ್ಕೆ
* 1977ರಲ್ಲಿ 2ನೇ ಬಾರಿಗೆ ಸಂಸತ್ಗೆ ಆಯ್ಕೆ
* 1980ರಲ್ಲಿ 3ನೇ ಬಾರಿಗೆ ಆಯ್ಕೆ
* 1984 4ನೇ ಬಾರಿಗೆ ಆಯ್ಕೆ, ನೀರಾವರಿ ಖಾತೆ ರಾಜ್ಯ ಸಚಿವ ಸ್ಥಾನ
* 1988-89 ಕಲ್ಲಿದ್ದಲು ಖಾತೆ ರಾಜ್ಯ ಸಚಿವ ಖಾತೆ ಹೊಣೆ
* 1989 ಲೋಕಸಭೆಗೆ 5ನೇ ಬಾರಿಗೆ ಆಯ್ಕೆ
* 1991-95 ಲೋಕಸಭೆಗೆ 6ನೇ ಬಾರಿಗೆ ಆಯ್ಕೆ ರೈಲ್ವೆ ಖಾತೆ ಹೊಣೆ
* 2004ರಲ್ಲಿ ಪರಾಭವವ
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ












Click it and Unblock the Notifications