ಎಚ್ಡಿಕೆ ಅವಕಾಶವಾದಿ ತರ್ಕದಲ್ಲೇ ಕಾಂಗ್ರೆಸ್ಸಿನ ಉತ್ತರವೂ ಅಡಗಿದೆ
ಬಿಜೆಪಿಯನ್ನು ಸೋಲಿಸಲು, ತನಗಿಂತ ಹೆಚ್ಚು ಮತ ಹೊಂದಿರುವ ಜೆಡಿಎಸ್ ಅನ್ನು ಕಾಂಗ್ರೆಸ್ ಬೆಂಬಲಿಸಬೇಕು ಎಂಬ ತರ್ಕ ಬಳಸುವ ಕುಮಾರಸ್ವಾಮಿ ಅವರಿಗೆ 2018ರ ಮೈತ್ರಿಯ ವೇಳೆ ಕಾಂಗ್ರೆಸ್ ಪಕ್ಷವು ಹೆಚ್ಚು ಮತ ಹೊಂದಿತ್ತು ಎಂಬ ಅಂಶವನ್ನು ಬದಿಗೆ ಸರಿಸಿ ತಾವೇ ಮುಖ್ಯಮಂತ್ರಿ ಆಗುತ್ತಾರೆ.
ದಿನಕ್ಕೊಮ್ಮೆ ಗಂಟೆಗೊಮ್ಮೆ ಬದಲಾಗುವ ಇವರ ರೀತಿಗಳನ್ನು ಅರ್ಥ ಮಾಡಿಕೊಳ್ಳುವಲ್ಲಿ ಸ್ವತಃ ಜೆಡಿಎಸ್ ಪಕ್ಷದ ಕಾರ್ಯಕರ್ತರೇ ಸೋತಿದ್ದು ಇವರ ಮೇಲೆ ನಂಬಿಕೆ ಕಳೆದುಕೊಳ್ಳುವ ಸ್ಥಿತಿಗೆ ತಲುಪಿದ್ದಾರೆ. ಮೈತ್ರಿ ಇಲ್ಲದಿದ್ದರೆ ರಾಜ್ಯಸಭೆಯಲ್ಲಿ ಸಂಖ್ಯೆಯ ಆಧಾರಿತವಾಗಿ ಬಿಜೆಪಿಯೇ ಗೆಲ್ಲುತ್ತಿತ್ತು ಎಂಬುದು ಎಲ್ಲರಿಗೂ ಗೊತ್ತಿದ್ದ ವಿಚಾರವಾಗಿತ್ತು.\
ಆದರೆ ಬಿಜೆಪಿ ಗೆಲ್ಲಲು ಕಾಂಗ್ರೆಸ್ ಪಕ್ಷವೇ ಕಾರಣ ಎಂದು ಹೇಳುತ್ತಿರುವ ಕುಮಾರಸ್ವಾಮಿ ಅವರು, ಕಾಂಗ್ರೆಸ್ ಪಕ್ಷದ ಬೆಂಬಲ ಸಿಗಲಿಲ್ಲ ಎಂದು ಅವರ ಮೇಲೆಯೇ ಗೂಬೆ ಕೂರಿಸಲು ಹೊರಟಿರುವುದು ಹಾಸ್ಯಾಸ್ಪದ ಸಂಗತಿ. ರೈತ ವಿರೋಧಿಯಾಗಿದ್ದ ಭೂ ಸುಧಾರಣೆ ತಿದ್ದುಪಡಿ ಕಾಯ್ದೆಯ ವಿರುದ್ಧ ಸದನದ ಹೊರಗೆ ಪ್ರತಿಭಟಿಸಿ ಸದನದ ಒಳಗೆ ಬೆಂಬಲಿಸುವ ಮೂಲಕ ಮಹಾ ನಾಟಕ ಆಡಿದ್ದವರು ಜೆಡಿಎಸ್ ನವರು.

ನಿರ್ದಿಷ್ಟ ಕೋಮಿನ ಜನರನ್ನು ಟಾರ್ಗೆಟ್ ಮಾಡಿಕೊಂಡು ಈಗಾಗಲೇ ಜಾರಿಯಲ್ಲಿದ್ದರೂ ಮತ್ತೊಮ್ಮೆ ಅದೇ ಕಾನೂನನ್ನು ರೂಪಿಸಲು ಹೊರಟಿದ್ದ ಮತಾಂತರ ನಿಷೇಧ ಕಾಯ್ದೆಯ ವಿರುದ್ಧ ದನಿ ಎತ್ತದೇ ಬೆಂಬಲಿಸಿದರು. ಜೊತೆಗೆ ಅತಿ ಹೆಚ್ಚಿನ ಗೋಮಾಂಸ ರಫ್ತು ಮಾಡುತ್ತಲೇ ಗೋಹತ್ಯೆ ನಿಷೇಧ ಎಂಬ ನಾಟಕವಾಡಿದ ಬಿಜೆಪಿಗರ ದ್ವಿಮುಖ ನೀತಿಯ ವಿರುದ್ದ ಮಾತನ್ನೇ ಆಡದ ಜೆಡಿಎಸ್ನಲ್ಲಿ ಜಾತ್ಯಾತೀತತೆ ಮತ್ತು ಜನಪರ ನೀತಿ ಉಳಿದಿದೆ ಎಂದು ನಾವು ಭಾವಿಸುವುದಾದರೂ ಹೇಗೆ?
ಅಧಿಕಾರ ಪಡೆಯುವದಕ್ಕೆ ಮಾತ್ರ ಜಾತ್ಯಾತೀತತೆ ಎಂಬ ಪದವನ್ನು ಬಳಸಿಕೊಳ್ಳುವ ಕುಮಾರಸ್ವಾಮಿ ಅವರಿಗೆ, ಜಾತ್ಯಾತೀತತೆ ಎಂಬುದು ಅಧಿಕಾರವನ್ನು ಬಿಟ್ಟು ಕೊಡಬೇಕಾದಾಗಲೂ ಕೂಡಾ ಸಮನಾಗಿರುತ್ತದೆ ಎಂಬ ಅಂಶವು ಅರ್ಥ ಅರ್ಥವಾಗಬೇಕಲ್ಲವೇ? ಲೋಕಸಭೆಯಲ್ಲಿ ಸೋತ ದೇವೇಗೌಡರನ್ನು ಕಾಂಗ್ರೆಸ್ ಪಕ್ಷ ಬೆಂಬಲಿಸಿ ರಾಜ್ಯಸಭೆಗೆ ಕಳಿಸಿದೆ.

37 ಸ್ಥಾನವಿದ್ದ ಜೆಡಿಎಸ್ಗೆ ಮುಖ್ಯಮಂತ್ರಿ ಸ್ಥಾನವನ್ನೂ ನೀಡಿದೆ. ಈ ನಡೆಯನ್ನು ಜೆಡಿಎಸ್ ಗೌರವಿಸಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸದೇ ಇದ್ದ ಮೇಲೆ, ಅವರು ಯಾವ ಜಾತ್ಯಾತೀತತೆ ಬಗ್ಗೆ ಮಾತನಾಡುತ್ತಿದ್ದಾರೆ? ಜಾತ್ಯಾತೀತ ರಾಜಕಾರಣ ಎಂಬುದು ಗಂಟೆಗೊಂದು ಸಲ ಬದಲಿಸುವ ಇವರ ಅಧಿಕಾರ ಮೋಹಿ ಮನಸ್ಥಿತಿಗೆ ಬಲಿಯಾಗುತ್ತದೆಯಲ್ಲಾ ಎಂದು ನೆನೆದು ಬೇಸರವಾಗುತ್ತಿದೆ.
ಈ ಹಿಂದೆ ಜಾತ್ಯಾತೀತತೆ ಎಂದರೆ ಏನು ಎಂದು ಕೇಳಿದ್ದ ಕುಮಾರಸ್ವಾಮಿ ಅವರು ಜಾತ್ಯಾತೀತತೆಯ ಬ್ಯಾನರ್ ಮತ್ತು ಅದರ ವ್ಯಾಪ್ತಿಯ ಬಗ್ಗೆ ತಿಳಿದುಕೊಳ್ಳಬೇಕಾದ ಅಗತ್ಯ ಸಾಕಷ್ಟಿದೆ!
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications