Get Updates
Get notified of breaking news, exclusive insights, and must-see stories!

Breaking: ಕೆಪಿಸಿಸಿ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ ವಿಆರ್ ಸುದರ್ಶನ್

ಬೆಂಗಳೂರು, ಅ.4: ಕಾಂಗ್ರೆಸ್ಸಿನ ಹಿರಿಯ ನಾಯಕ ವಿ. ಅರ್ ಸುದರ್ಶನ್ ಅವರು ಕಾಂಗ್ರೆಸ್ ಮುಖ್ಯ ವಕ್ತಾರ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಸುದರ್ಶನ್ ಅವರು ಮಂಗಳವಾರದಂದು ತಮ್ಮ ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಸಲ್ಲಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸಿದ್ದು, ಅವರ ಬೆಂಬಲಕ್ಕೆ ನಿಲ್ಲಲು ಸುದರ್ಶನ್ ನಿರ್ಧರಿಸಿದ್ದು, ಖರ್ಗೆ ಪರ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳಲು ಬಯಸಿರುವುದಾಗಿ ತಮ್ಮ ರಾಜೀನಾಮೆ ಕಾರಣದಲ್ಲಿ ತಿಳಿಸಿದ್ದಾರೆ.

ಈ ಹಿಂದೆ ಕೋಲಾರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಸುದರ್ಶನ್ ಅವರು ಟಿಕೆಟ್ ಕೈ ತಪ್ಪುವ ಶಂಕೆಯಿಂದ ತಮ್ಮ ರಾಜೀನಾಮೆಯನ್ನು ವಾಟ್ಸಪ್ ಮೂಲಕ ಅಂದಿನ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ ಅವರಿಗೆ ಸಲ್ಲಿಸಿ ಸುದ್ದಿಯಾಗಿದ್ದರು.

Senior Congress Leader VR Sudarshan resigns from KPCC Spokesperson post and he has sent his repagination letter to KPCC president DK Shivakumar,

ಇದಕ್ಕೂ ಮುನ್ನ 2013ರ ವಿಧಾನಸಭೆ ಚುನಾವಣೆ ಸಮಯದಲ್ಲಿ ವಿ.ಆರ್.ಸುದರ್ಶನ್ ಅವರಿಗೆ ಜಯನಗರ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ನೀಡಲಾಗುತ್ತದೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಅವರಿಗೆ ಟಿಕೆಟ್ ನೀಡಿರಲಿಲ್ಲ. ನಂತರ ಸುದರ್ಶನ್ ಹೆಸರನ್ನು ಕೆಪಿಎಸ್‌ಸಿ ಅಧ್ಯಕ್ಷ ಗಾದಿಗೆ ಶಿಫಾರಸು ಮಾಡಲಾಗಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+