ಗಿರೀಶ್ ಕಾರ್ನಾಡ್ ಅಗಲುವಿಕೆಗೆ ಹಿರಿಯ ಸಾಹಿತಿಗಳ ಸಂತಾಪ
ಬೆಂಗಳೂರು, ಜೂನ್ 10: ಹಿರಿಯ ಸಾಹಿತಿ, ನಾಟಕಕಾರ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾಗಿದ್ದ ಗಿರೀಶ್ ಕಾರ್ನಾಡ್ ಅವರ ನಿಧನಕ್ಕೆ ಸಾಹಿತಿಗಳು, ಚಿತ್ರನಟರು, ಗಣ್ಯರು ಸಂತಾಪ ಸೂಚಿಸಿದ್ದಾರೆ.
ಗಿರೀಶ್ ಕಾರ್ನಾಡ್ ಅವರಿಗೆ 81 ವರ್ಷ ವಯಸ್ಸಾಗಿತ್ತು, ಲ್ಯಾವಲ್ಲೆ ರಸ್ತೆಯಲ್ಲಿರುವ ತಮ್ಮ ಮನೆಯಲ್ಲಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ಇಂಗ್ಲೆಂಡಿಗೆ ತೆರಳುವ ಮೊದಲೆ ಗಿರೀಶ ಕಾರ್ನಾಡರ ಮೊದಲ ಸಾಹಿತ್ಯ ಕೃತಿ ಯಯಾತಿ ನಾಟಕ ಧಾರವಾಡದ ಮನೋಹರ ಗ್ರಂಥಮಾಲೆಯಲ್ಲಿ ಪ್ರಕಟವಾಯಿತು. ಇಂಗ್ಲೆಂಡಿನಿಂದ ಮರಳಿದ ಬಳಿಕ ತುಘಲಕ್ ಹಾಗೂ ಹಯವದನ ಪ್ರಕಟವಾದವು.
ಈ ನಡುವೆ ಪುಣೆ ಫಿಲ್ಮ್ ಇನ್ಸ್ಟಿಟ್ಯೂಟ್ನ ನಿರ್ದೇಶಕ ರಾಗಿದ್ದು, ಮತ್ತೆ ಅದನ್ನು ಬಿಟ್ಟು ಮುಂಬಯಿಗೆ ಬಂದ ಕಾರ್ನಾಡರು ಕೆಲವು ಚಲನಚಿತ್ರಗಳಲ್ಲಿ ನಟಿಸಿದರು. ಆ ರಂಗವನ್ನೂ ತ್ಯಜಿಸಿ ಮತ್ತೆ ಬೆಂಗಳೂರಿಗೆ ಬಂದರು. ನಾಟಕಗಳು-ಅಂಜುಮಲ್ಲಿಗೆ, ನಾಗಮಂಡಲ, ತಲೆದಂಡ ಹಾಗೂ ಅಗ್ನಿ ಮತ್ತು ಮಳೆ ನಾಟಕವನ್ನು ರಚಿಸಿದ್ದಾರೆ.

ಕನ್ನಡ ನಾಟಕವನ್ನು ಜಗತ್ತಿನಾದ್ಯಂತ ವಿಸ್ತರಿಸಿದವರು
ಕಾರ್ನಾಡ್ ಅವರು ನನಗೆ ಈ ಸುದ್ದಿ ಕೇಳಿ ಶಾಕ್ ಆಗಿದೆ, ಕನ್ನಡ ನಾಟಕವನ್ನು ಜಗತ್ತಿನಾದ್ಯಂತ ವಿಸ್ತರಿಸಿದ ಅಪರೂಪ ನಾಟಕಕಾರರು ಅವರು, ಕನ್ನಡ ಪ್ರಜ್ಞೆ, ಅಭಿನಯ, ಒಟ್ಟಿನಲ್ಲಿ ಆಲ್ ರೌಂಡರ್ ಎಂದೇ ಹೇಳಬಹುದು. ನಮ್ಮನ್ನಗಲಿರುವುದರಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಭಾಷಾ ಸ್ಪಷ್ಟತೆ, ಇಂಗ್ಲಿಷ್ ಭಾಷೆಯಲ್ಲಿದ್ದ ಪ್ರಭುತ್ವ ನೋಬೆಲ್ ಅವಾರ್ಡ್ ಹತ್ತಿರ ಹೋಗುವಂತ ಲೇಖಕರಾಗಿದ್ದರು.- ಕುಂ ವೀರ ಭದ್ರಪ್ಪ ಹಿರಿಯ ಸಾಹಿತಿ

ಗೌರಿಯ ಹಾಗೆ ಕಾರ್ನಾಡ್ ಕೂಡ ಹಿಟ್ ಲಿಸ್ಟ್ನಲ್ಲಿದ್ದರು
ಗೌರಿ ಲಂಕೇಶ್ ರೀತಿಯಲ್ಲಿ ಕಾರ್ನಾಡ್ ಕೂಡ ಹಿಟ್ ಲಿಸ್ಟ್ನಲ್ಲಿದ್ದರು, ಅವರು ಆರೋಗ್ಯ ಸರಿ ಇಲ್ಲದ ಸಮಯದಲ್ಲಿ ಕೂಡ ತಮ್ಮ ವಾದವನ್ನು ಮರೆತವರಲ್ಲ, ಬೋಲ್ಡ್ ಅಂಡ್ ಸ್ಟ್ರಾಂಗ್ ಆಗಿದ್ದರು. ಗೌರಿ ಕಾರ್ಯಕ್ರಮಕ್ಕೆ ಬಂದಾಗ ಹಾಗೂ ಮತ್ತೊಂದು ಕಾರ್ಯಕ್ರಮದಲ್ಲಿ ಕೊನೆಯದಾಗಿ ಭೇಟಿ ಆಗಿದ್ದೆವು, ಆಕ್ಸಿಜನ್ ಸಿಲಿಂಡರ್ ಇಟ್ಟುಕೊಂಡೇ ಕಾರ್ಯಕ್ರಮಕ್ಕೆ ಬಂದಿದ್ದರು. ಒಳ್ಳೆಯ ಹೃದಯವಂತ ವ್ಯಕ್ತಿಯನ್ನು ನಾವು ಕಳೆದುಕೊಂಡಿದ್ದೇವೆ. ಕವಿತಾ ಲಂಕೇಶ್- ಲೇಖಕಿ

ಹಲವು ಕ್ಷೇತ್ರದಲ್ಲಿ ಪ್ರಾವಿಣ್ಯ ಹೊಂದಿದ್ದ ಗಿರೀಶ್
ನಿಜವಾಗಲೂ ರಾಜ್ಯಕ್ಕೆ ಮಾತ್ರವಲ್ಲ ದೇಶಕ್ಕೆ ಹೆಮ್ಮೆಯ ವ್ಯಕ್ತಿತ್ವ ಗಿರೀಶ್ ಅವರದ್ದು, ಹಲವು ಕ್ಷೇತ್ರದಲ್ಲಿ ಪ್ರಾವಿಣ್ಯತೆ ಇತ್ತು, ಸಾಹಿತ್ಯ, ತುಘಲಕ್ ರಂಗ, ಭೂಮಿ, ಸಾಹಿತ್ಯ, ರಾಜಕೀಯದ ಬಗ್ಗೆ ಎಷ್ಟು ಹಿಡಿತವಿದೆ ಎನ್ನುವುದು ತುಘಲಕ್ ನಾಟಕದ ಮೂಲಕ ತಿಳಿಯುತ್ತದೆ.ಸನಾತನ ಧರ್ಮ, ಸಂಸ್ಕೃತಿ, ವೈಚಾರಿಕೆ ಬ್ಯಾಲೆನ್ಸ್ ಮಾಡುತ್ತಿದ್ದರು. ಶ್ರೀಧರ್, ಹಿರಿಯ ನಟ

ಪುರಾಣ ಪ್ರಸಂಗಗಳಿಗೆ ಹೊಸ ವ್ಯಾಖ್ಯಾನ
ಯಾವುದೇ ಭಿನ್ನಾಭಿಪ್ರಾಯಗಳಿದ್ದರೂ ಕೂಡ ತಮ್ಮ ವಿಚಾರವನ್ನು ಮಂಡಿಸುವುದನ್ನು ಅವರು ಬಿಟ್ಟಿರಲಿಲ್ಲ. ಪ್ರಜಾಪ್ರಭುತ್ವದಲ್ಲಿ ವಾಗ್ವಾದಗಳು ಸಹಜ ಎಂದು ನಂಬಿದ್ದರು.
ಹಿಟ್ಟಿನ ಹುಂಜ, ಯಯಾತಿ ಮೂಲಕ ಪುರಾಣ ಪ್ರಸಂಗಗಳಿಗೆ ಹೊಸ ವ್ಯಾಖ್ಯಾನಕೊಟ್ಟು ಜೀವ ನೀಡುವ ಪ್ರಯತ್ನ ಮಾಡಿದ್ದರು. ಬರಗೂರು ರಾಮಂದ್ರಪ್ಪ-ಹಿರಿಯ ಸಾಹಿತಿ-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications